ಹಡಿಲು ಬಿದ್ದ ಗದ್ದೆಯಲ್ಲಿ ಭತ್ತ ಬೆಳೆಯುವ ಜೊತೆಗೆ ತರಕಾರಿ ಬೆಳೆಯುವ ಮೂಲಕ ಮಾದರಿಯಾದ ರೈತ

ಅಳದಂಗಡಿ ತೋಟಗಾರಿಕಾ ರೈತ ಉತ್ಪಾದಕರ ಕಂಪನಿಯು ಕಳೆದ ವರ್ಷದಿಂದ ಹಡಿಲು ಬಿದ್ದ ಗದ್ದೆಯಲ್ಲಿ ಭತ್ತ ಬೆಳೆಯುವ ಜೊತೆಗೆ ತರಕಾರಿ ಬೆಳೆಯುವ ಮೂಲಕ ಇತರರಿಗೆ ಮಾದರಿಯಾಗಿದೆ.

ರಾಷ್ಟ್ರ ಮಟ್ಟದ ಕೃಷಿ ಪ್ರಶಸ್ತಿ ವಿಜೇತ ಪ್ರಗತಿಪರ ಕೃಷಿಕ ಪ್ರಭಾಕರ್ ಮಯ್ಯ ಅವರ ಮಾರ್ಗದರ್ಶನದಲ್ಲಿ ತರಕಾರಿ ಕೃಷಿ ನಡೆಸಲಾಗುತ್ತಿದೆ. ಬೆಳ್ತಂಗಡಿ ಕಸಬಾ ಗ್ರಾಮದ ಕೋರ್ಟ್ ರಸ್ತೆಯಲ್ಲಿ ಹಡಿಲು ಬಿದ್ದ ಗದ್ದೆ ಈಗ ತರಕಾರಿ ಗಿಡಗಳಿಂದ ಹಚ್ಚಹಸಿರು ತುಂಬಿದೆ.

ಮಹಿಳೆಯರೇ ಕೆಲಸಗಾರರು: ತರಕಾರಿ ಸಾಲು ನಿರ್ಮಾಣ, ಬಿತ್ತನೆ ಸೇರಿದಂತೆ ಇಲ್ಲಿ ಮಾಡುವವರು ಮಹಿಳೆಯರೇ ಸಿಂಹಪಾಲು. ನ್ಯಾಯವಾದಿ ಸುಕನ್ಯಾ ಹೆಚ್ ಅವರ ಸಾರಥ್ಯದಲ್ಲಿ ನಿರುದ್ಯೋಗಿ ಮಹಿಳೆಯರನ್ನು ಕೃಷಿ ಚಟುವಟಿಕೆಗಳಲ್ಲಿ ಉಪಯೋಗಿಸುವ ವಿನೂತನ ಪ್ರಯತ್ನ ನಡೆಸುತ್ತಿದ್ದಾರೆ.

ಕಂಪನಿ/ಬ್ಯಾಂಕ್ ಸಿಬ್ಬಂದಿಗಳು ಭಾಗಿ: ಅಳದಂಗಡಿ ತೋಟಗಾರಿಕಾ ರೈತ ಉತ್ಪಾದಕ ಕಂಪನಿ ಹಾಗೂ ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ(ನಿ) ದ ಸಿಬ್ಬಂದಿಗಳು ಪ್ರತಿ ಆದಿತ್ಯವಾರ ತರಕಾರಿ ಕೃಷಿಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಆ ಮೂಲಕ ಸಾಮುದಾಯಿಕ ಒಳಗೊಂಡು ಗ್ರಾಮೀಣ ಕೃಷಿ ಪದ್ದತಿಯನ್ನು ಉಳಿಸುವ ಪ್ರಯತ್ನ ನಡೆಸಲಾಗುತ್ತಿದೆ.

ವಿವಿಧ ಬಗೆಯ ತರಕಾರಿ: ಹಡಿಲು ಬಿದ್ದ ಗದ್ದೆಯಲ್ಲಿ ಅಳಸಂಡೆ , ಬೆಂಡೆಕಾಯಿ , ಆಗಲಕಾಯಿ , ಸೌತೆಕಾಯಿ, ಮುಳ್ಳುಸೌತೆ , ಬಸಲೆ , ಅರಿವೆ ಸೊಪ್ಪು , ಬದನೆಕಾಯಿ, ಕುಂಬಳಕಾಯಿ, ಕಲ್ಲಂಗಡಿ ಸೇರಿದಂತೆ ವಿವಿಧ ಬಗೆಯ ತರಕಾರಿ ಬೆಳೆಯಲಾಗಿದೆ.

ಸ್ಪೂರ್ತಿಯಲ್ಲಿ ಮಾರಾಟ: ಬೆಳೆದ ತರಕಾರಿಗಳನ್ನು ಮಾರಾಟ ಮಾಡಲೆಂದೇ ಕಳೆದ ವರ್ಷದ ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಕೋರ್ಟ್ ರಸ್ತೆಯಲ್ಲಿರುವ ಇಎಂಎಸ್ ಭವನದಲ್ಲಿ “ಸ್ಪೂರ್ತಿ” ತರಕಾರಿ ಮಾರಾಟ ಮಳಿಗೆಯನ್ನು ತೆರೆಯಲಾಗಿದೆ. ಕಳೆದ ವರ್ಷ ತಾಲೂಕಿನ ರೈತರು ಬೆಳೆದ ತರಕಾರಿ, ಅನನಾಸು ಕೊಳೆತು ಹೋಗುವ ಸಂದರ್ಭದಲ್ಲಿ ಸ್ಪೂರ್ತಿ ತರಕಾರಿ, ಅನನಾಸುಗಳನ್ನು ಪಡೆದುಕೊಂಡು ರಾಜ್ಯದ ವಿವಿಧೆಡೆ ಮಾರಾಟ ಮಾಡುವ ರೈತರಿಗೆ ಬೆಳಕಾಗಿ ನಿಂತಿತ್ತು. ರೈತರು ಬೆಳೆದ ಯಾವುದೇ ಬೆಳೆಗಳಿಗೆ ಉತ್ತಮ ಬೆಲೆಯನ್ನು ತೆಗೆದುಕೊಡಲು ಈ ಕಂಪನಿ ಶಕ್ತಿಮೀರಿ ದುಡಿಯುತ್ತಿದೆ.

ಸಾವಯವ ಗೊಬ್ಬರವನ್ನು ಮಾತ್ರ ಉಪಯೋಗಿಸುವ ಮೂಲಕ ತರಕಾರಿ ಬೆಳೆಯಲಾಗುತ್ತಿದ್ದು , ಯಾವುದೇ ರೀತಿಯ ರಾಸಾಯನಿಕ ಗೊಬ್ಬರವನ್ನು ಉಪಯೋಗಿಸುವುದಿಲ್ಲ ಎನ್ನುತ್ತಾರೆ ಅಳದಂಗಡಿ ತೋಟಗಾರಿಕಾ ರೈತ ಉತ್ಪಾದಕರ ಕಂಪನಿಯ ಅಧ್ಯಕ್ಷ ಹರಿದಾಸ್ ಎಸ್. ಎಂ ರವರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ