ಹಡಿಲು ಬಿದ್ದ ಗದ್ದೆಯಲ್ಲಿ ಭತ್ತ ಬೆಳೆಯುವ ಜೊತೆಗೆ ತರಕಾರಿ ಬೆಳೆಯುವ ಮೂಲಕ ಮಾದರಿಯಾದ ರೈತ

ಅಳದಂಗಡಿ ತೋಟಗಾರಿಕಾ ರೈತ ಉತ್ಪಾದಕರ ಕಂಪನಿಯು ಕಳೆದ ವರ್ಷದಿಂದ ಹಡಿಲು ಬಿದ್ದ ಗದ್ದೆಯಲ್ಲಿ ಭತ್ತ ಬೆಳೆಯುವ ಜೊತೆಗೆ ತರಕಾರಿ ಬೆಳೆಯುವ ಮೂಲಕ ಇತರರಿಗೆ ಮಾದರಿಯಾಗಿದೆ.

ರಾಷ್ಟ್ರ ಮಟ್ಟದ ಕೃಷಿ ಪ್ರಶಸ್ತಿ ವಿಜೇತ ಪ್ರಗತಿಪರ ಕೃಷಿಕ ಪ್ರಭಾಕರ್ ಮಯ್ಯ ಅವರ ಮಾರ್ಗದರ್ಶನದಲ್ಲಿ ತರಕಾರಿ ಕೃಷಿ ನಡೆಸಲಾಗುತ್ತಿದೆ. ಬೆಳ್ತಂಗಡಿ ಕಸಬಾ ಗ್ರಾಮದ ಕೋರ್ಟ್ ರಸ್ತೆಯಲ್ಲಿ ಹಡಿಲು ಬಿದ್ದ ಗದ್ದೆ ಈಗ ತರಕಾರಿ ಗಿಡಗಳಿಂದ ಹಚ್ಚಹಸಿರು ತುಂಬಿದೆ.

ಮಹಿಳೆಯರೇ ಕೆಲಸಗಾರರು: ತರಕಾರಿ ಸಾಲು ನಿರ್ಮಾಣ, ಬಿತ್ತನೆ ಸೇರಿದಂತೆ ಇಲ್ಲಿ ಮಾಡುವವರು ಮಹಿಳೆಯರೇ ಸಿಂಹಪಾಲು. ನ್ಯಾಯವಾದಿ ಸುಕನ್ಯಾ ಹೆಚ್ ಅವರ ಸಾರಥ್ಯದಲ್ಲಿ ನಿರುದ್ಯೋಗಿ ಮಹಿಳೆಯರನ್ನು ಕೃಷಿ ಚಟುವಟಿಕೆಗಳಲ್ಲಿ ಉಪಯೋಗಿಸುವ ವಿನೂತನ ಪ್ರಯತ್ನ ನಡೆಸುತ್ತಿದ್ದಾರೆ.

ಕಂಪನಿ/ಬ್ಯಾಂಕ್ ಸಿಬ್ಬಂದಿಗಳು ಭಾಗಿ: ಅಳದಂಗಡಿ ತೋಟಗಾರಿಕಾ ರೈತ ಉತ್ಪಾದಕ ಕಂಪನಿ ಹಾಗೂ ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ(ನಿ) ದ ಸಿಬ್ಬಂದಿಗಳು ಪ್ರತಿ ಆದಿತ್ಯವಾರ ತರಕಾರಿ ಕೃಷಿಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಆ ಮೂಲಕ ಸಾಮುದಾಯಿಕ ಒಳಗೊಂಡು ಗ್ರಾಮೀಣ ಕೃಷಿ ಪದ್ದತಿಯನ್ನು ಉಳಿಸುವ ಪ್ರಯತ್ನ ನಡೆಸಲಾಗುತ್ತಿದೆ.

ವಿವಿಧ ಬಗೆಯ ತರಕಾರಿ: ಹಡಿಲು ಬಿದ್ದ ಗದ್ದೆಯಲ್ಲಿ ಅಳಸಂಡೆ , ಬೆಂಡೆಕಾಯಿ , ಆಗಲಕಾಯಿ , ಸೌತೆಕಾಯಿ, ಮುಳ್ಳುಸೌತೆ , ಬಸಲೆ , ಅರಿವೆ ಸೊಪ್ಪು , ಬದನೆಕಾಯಿ, ಕುಂಬಳಕಾಯಿ, ಕಲ್ಲಂಗಡಿ ಸೇರಿದಂತೆ ವಿವಿಧ ಬಗೆಯ ತರಕಾರಿ ಬೆಳೆಯಲಾಗಿದೆ.

ಸ್ಪೂರ್ತಿಯಲ್ಲಿ ಮಾರಾಟ: ಬೆಳೆದ ತರಕಾರಿಗಳನ್ನು ಮಾರಾಟ ಮಾಡಲೆಂದೇ ಕಳೆದ ವರ್ಷದ ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಕೋರ್ಟ್ ರಸ್ತೆಯಲ್ಲಿರುವ ಇಎಂಎಸ್ ಭವನದಲ್ಲಿ “ಸ್ಪೂರ್ತಿ” ತರಕಾರಿ ಮಾರಾಟ ಮಳಿಗೆಯನ್ನು ತೆರೆಯಲಾಗಿದೆ. ಕಳೆದ ವರ್ಷ ತಾಲೂಕಿನ ರೈತರು ಬೆಳೆದ ತರಕಾರಿ, ಅನನಾಸು ಕೊಳೆತು ಹೋಗುವ ಸಂದರ್ಭದಲ್ಲಿ ಸ್ಪೂರ್ತಿ ತರಕಾರಿ, ಅನನಾಸುಗಳನ್ನು ಪಡೆದುಕೊಂಡು ರಾಜ್ಯದ ವಿವಿಧೆಡೆ ಮಾರಾಟ ಮಾಡುವ ರೈತರಿಗೆ ಬೆಳಕಾಗಿ ನಿಂತಿತ್ತು. ರೈತರು ಬೆಳೆದ ಯಾವುದೇ ಬೆಳೆಗಳಿಗೆ ಉತ್ತಮ ಬೆಲೆಯನ್ನು ತೆಗೆದುಕೊಡಲು ಈ ಕಂಪನಿ ಶಕ್ತಿಮೀರಿ ದುಡಿಯುತ್ತಿದೆ.

ಸಾವಯವ ಗೊಬ್ಬರವನ್ನು ಮಾತ್ರ ಉಪಯೋಗಿಸುವ ಮೂಲಕ ತರಕಾರಿ ಬೆಳೆಯಲಾಗುತ್ತಿದ್ದು , ಯಾವುದೇ ರೀತಿಯ ರಾಸಾಯನಿಕ ಗೊಬ್ಬರವನ್ನು ಉಪಯೋಗಿಸುವುದಿಲ್ಲ ಎನ್ನುತ್ತಾರೆ ಅಳದಂಗಡಿ ತೋಟಗಾರಿಕಾ ರೈತ ಉತ್ಪಾದಕರ ಕಂಪನಿಯ ಅಧ್ಯಕ್ಷ ಹರಿದಾಸ್ ಎಸ್. ಎಂ ರವರು.

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 20 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 72 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ