ಹಡಿಲು ಬಿದ್ದ ಗದ್ದೆಯಲ್ಲಿ ಭತ್ತ ಬೆಳೆಯುವ ಜೊತೆಗೆ ತರಕಾರಿ ಬೆಳೆಯುವ ಮೂಲಕ ಮಾದರಿಯಾದ ರೈತ

ಅಳದಂಗಡಿ ತೋಟಗಾರಿಕಾ ರೈತ ಉತ್ಪಾದಕರ ಕಂಪನಿಯು ಕಳೆದ ವರ್ಷದಿಂದ ಹಡಿಲು ಬಿದ್ದ ಗದ್ದೆಯಲ್ಲಿ ಭತ್ತ ಬೆಳೆಯುವ ಜೊತೆಗೆ ತರಕಾರಿ ಬೆಳೆಯುವ ಮೂಲಕ ಇತರರಿಗೆ ಮಾದರಿಯಾಗಿದೆ.

ರಾಷ್ಟ್ರ ಮಟ್ಟದ ಕೃಷಿ ಪ್ರಶಸ್ತಿ ವಿಜೇತ ಪ್ರಗತಿಪರ ಕೃಷಿಕ ಪ್ರಭಾಕರ್ ಮಯ್ಯ ಅವರ ಮಾರ್ಗದರ್ಶನದಲ್ಲಿ ತರಕಾರಿ ಕೃಷಿ ನಡೆಸಲಾಗುತ್ತಿದೆ. ಬೆಳ್ತಂಗಡಿ ಕಸಬಾ ಗ್ರಾಮದ ಕೋರ್ಟ್ ರಸ್ತೆಯಲ್ಲಿ ಹಡಿಲು ಬಿದ್ದ ಗದ್ದೆ ಈಗ ತರಕಾರಿ ಗಿಡಗಳಿಂದ ಹಚ್ಚಹಸಿರು ತುಂಬಿದೆ.

ಮಹಿಳೆಯರೇ ಕೆಲಸಗಾರರು: ತರಕಾರಿ ಸಾಲು ನಿರ್ಮಾಣ, ಬಿತ್ತನೆ ಸೇರಿದಂತೆ ಇಲ್ಲಿ ಮಾಡುವವರು ಮಹಿಳೆಯರೇ ಸಿಂಹಪಾಲು. ನ್ಯಾಯವಾದಿ ಸುಕನ್ಯಾ ಹೆಚ್ ಅವರ ಸಾರಥ್ಯದಲ್ಲಿ ನಿರುದ್ಯೋಗಿ ಮಹಿಳೆಯರನ್ನು ಕೃಷಿ ಚಟುವಟಿಕೆಗಳಲ್ಲಿ ಉಪಯೋಗಿಸುವ ವಿನೂತನ ಪ್ರಯತ್ನ ನಡೆಸುತ್ತಿದ್ದಾರೆ.

ಕಂಪನಿ/ಬ್ಯಾಂಕ್ ಸಿಬ್ಬಂದಿಗಳು ಭಾಗಿ: ಅಳದಂಗಡಿ ತೋಟಗಾರಿಕಾ ರೈತ ಉತ್ಪಾದಕ ಕಂಪನಿ ಹಾಗೂ ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ(ನಿ) ದ ಸಿಬ್ಬಂದಿಗಳು ಪ್ರತಿ ಆದಿತ್ಯವಾರ ತರಕಾರಿ ಕೃಷಿಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಆ ಮೂಲಕ ಸಾಮುದಾಯಿಕ ಒಳಗೊಂಡು ಗ್ರಾಮೀಣ ಕೃಷಿ ಪದ್ದತಿಯನ್ನು ಉಳಿಸುವ ಪ್ರಯತ್ನ ನಡೆಸಲಾಗುತ್ತಿದೆ.

ವಿವಿಧ ಬಗೆಯ ತರಕಾರಿ: ಹಡಿಲು ಬಿದ್ದ ಗದ್ದೆಯಲ್ಲಿ ಅಳಸಂಡೆ , ಬೆಂಡೆಕಾಯಿ , ಆಗಲಕಾಯಿ , ಸೌತೆಕಾಯಿ, ಮುಳ್ಳುಸೌತೆ , ಬಸಲೆ , ಅರಿವೆ ಸೊಪ್ಪು , ಬದನೆಕಾಯಿ, ಕುಂಬಳಕಾಯಿ, ಕಲ್ಲಂಗಡಿ ಸೇರಿದಂತೆ ವಿವಿಧ ಬಗೆಯ ತರಕಾರಿ ಬೆಳೆಯಲಾಗಿದೆ.

ಸ್ಪೂರ್ತಿಯಲ್ಲಿ ಮಾರಾಟ: ಬೆಳೆದ ತರಕಾರಿಗಳನ್ನು ಮಾರಾಟ ಮಾಡಲೆಂದೇ ಕಳೆದ ವರ್ಷದ ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಕೋರ್ಟ್ ರಸ್ತೆಯಲ್ಲಿರುವ ಇಎಂಎಸ್ ಭವನದಲ್ಲಿ “ಸ್ಪೂರ್ತಿ” ತರಕಾರಿ ಮಾರಾಟ ಮಳಿಗೆಯನ್ನು ತೆರೆಯಲಾಗಿದೆ. ಕಳೆದ ವರ್ಷ ತಾಲೂಕಿನ ರೈತರು ಬೆಳೆದ ತರಕಾರಿ, ಅನನಾಸು ಕೊಳೆತು ಹೋಗುವ ಸಂದರ್ಭದಲ್ಲಿ ಸ್ಪೂರ್ತಿ ತರಕಾರಿ, ಅನನಾಸುಗಳನ್ನು ಪಡೆದುಕೊಂಡು ರಾಜ್ಯದ ವಿವಿಧೆಡೆ ಮಾರಾಟ ಮಾಡುವ ರೈತರಿಗೆ ಬೆಳಕಾಗಿ ನಿಂತಿತ್ತು. ರೈತರು ಬೆಳೆದ ಯಾವುದೇ ಬೆಳೆಗಳಿಗೆ ಉತ್ತಮ ಬೆಲೆಯನ್ನು ತೆಗೆದುಕೊಡಲು ಈ ಕಂಪನಿ ಶಕ್ತಿಮೀರಿ ದುಡಿಯುತ್ತಿದೆ.

ಸಾವಯವ ಗೊಬ್ಬರವನ್ನು ಮಾತ್ರ ಉಪಯೋಗಿಸುವ ಮೂಲಕ ತರಕಾರಿ ಬೆಳೆಯಲಾಗುತ್ತಿದ್ದು , ಯಾವುದೇ ರೀತಿಯ ರಾಸಾಯನಿಕ ಗೊಬ್ಬರವನ್ನು ಉಪಯೋಗಿಸುವುದಿಲ್ಲ ಎನ್ನುತ್ತಾರೆ ಅಳದಂಗಡಿ ತೋಟಗಾರಿಕಾ ರೈತ ಉತ್ಪಾದಕರ ಕಂಪನಿಯ ಅಧ್ಯಕ್ಷ ಹರಿದಾಸ್ ಎಸ್. ಎಂ ರವರು.

Spread the love
  • Related Posts

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ಬೆಳ್ತಂಗಡಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ (MDMA), ಕಾರು, ಆಟೋ ರಿಕ್ಷಾ ಹಾಗೂ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ…

    Spread the love

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    “ಜೀವ ಉಳಿಸಲು ನಿಮ್ಮ ನೆರವು ಅಗತ್ಯ“ ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟು ನಿವಾಸಿ ವಸಂತ ಗೌಡರವರು 21/07/2026ರಂದು ಬೆಳಿಗ್ಗೆ ಸುಮಾರು 7.30ರ ವೇಳೆಗೆ ಪಡಂಗಡಿ ಸಮೀಪ ಹಾಲು ಹಿಡಿದು ಕೊಂಡು ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ಜಾರಿ ಬಿದ್ದು ತಲೆಗೆ…

    Spread the love

    You Missed

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 4 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 11 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 9 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 10 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 10 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 13 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!