ಹಡಿಲು ಬಿದ್ದ ಗದ್ದೆಯಲ್ಲಿ ಭತ್ತ ಬೆಳೆಯುವ ಜೊತೆಗೆ ತರಕಾರಿ ಬೆಳೆಯುವ ಮೂಲಕ ಮಾದರಿಯಾದ ರೈತ

ಅಳದಂಗಡಿ ತೋಟಗಾರಿಕಾ ರೈತ ಉತ್ಪಾದಕರ ಕಂಪನಿಯು ಕಳೆದ ವರ್ಷದಿಂದ ಹಡಿಲು ಬಿದ್ದ ಗದ್ದೆಯಲ್ಲಿ ಭತ್ತ ಬೆಳೆಯುವ ಜೊತೆಗೆ ತರಕಾರಿ ಬೆಳೆಯುವ ಮೂಲಕ ಇತರರಿಗೆ ಮಾದರಿಯಾಗಿದೆ.

ರಾಷ್ಟ್ರ ಮಟ್ಟದ ಕೃಷಿ ಪ್ರಶಸ್ತಿ ವಿಜೇತ ಪ್ರಗತಿಪರ ಕೃಷಿಕ ಪ್ರಭಾಕರ್ ಮಯ್ಯ ಅವರ ಮಾರ್ಗದರ್ಶನದಲ್ಲಿ ತರಕಾರಿ ಕೃಷಿ ನಡೆಸಲಾಗುತ್ತಿದೆ. ಬೆಳ್ತಂಗಡಿ ಕಸಬಾ ಗ್ರಾಮದ ಕೋರ್ಟ್ ರಸ್ತೆಯಲ್ಲಿ ಹಡಿಲು ಬಿದ್ದ ಗದ್ದೆ ಈಗ ತರಕಾರಿ ಗಿಡಗಳಿಂದ ಹಚ್ಚಹಸಿರು ತುಂಬಿದೆ.

ಮಹಿಳೆಯರೇ ಕೆಲಸಗಾರರು: ತರಕಾರಿ ಸಾಲು ನಿರ್ಮಾಣ, ಬಿತ್ತನೆ ಸೇರಿದಂತೆ ಇಲ್ಲಿ ಮಾಡುವವರು ಮಹಿಳೆಯರೇ ಸಿಂಹಪಾಲು. ನ್ಯಾಯವಾದಿ ಸುಕನ್ಯಾ ಹೆಚ್ ಅವರ ಸಾರಥ್ಯದಲ್ಲಿ ನಿರುದ್ಯೋಗಿ ಮಹಿಳೆಯರನ್ನು ಕೃಷಿ ಚಟುವಟಿಕೆಗಳಲ್ಲಿ ಉಪಯೋಗಿಸುವ ವಿನೂತನ ಪ್ರಯತ್ನ ನಡೆಸುತ್ತಿದ್ದಾರೆ.

ಕಂಪನಿ/ಬ್ಯಾಂಕ್ ಸಿಬ್ಬಂದಿಗಳು ಭಾಗಿ: ಅಳದಂಗಡಿ ತೋಟಗಾರಿಕಾ ರೈತ ಉತ್ಪಾದಕ ಕಂಪನಿ ಹಾಗೂ ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ(ನಿ) ದ ಸಿಬ್ಬಂದಿಗಳು ಪ್ರತಿ ಆದಿತ್ಯವಾರ ತರಕಾರಿ ಕೃಷಿಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಆ ಮೂಲಕ ಸಾಮುದಾಯಿಕ ಒಳಗೊಂಡು ಗ್ರಾಮೀಣ ಕೃಷಿ ಪದ್ದತಿಯನ್ನು ಉಳಿಸುವ ಪ್ರಯತ್ನ ನಡೆಸಲಾಗುತ್ತಿದೆ.

ವಿವಿಧ ಬಗೆಯ ತರಕಾರಿ: ಹಡಿಲು ಬಿದ್ದ ಗದ್ದೆಯಲ್ಲಿ ಅಳಸಂಡೆ , ಬೆಂಡೆಕಾಯಿ , ಆಗಲಕಾಯಿ , ಸೌತೆಕಾಯಿ, ಮುಳ್ಳುಸೌತೆ , ಬಸಲೆ , ಅರಿವೆ ಸೊಪ್ಪು , ಬದನೆಕಾಯಿ, ಕುಂಬಳಕಾಯಿ, ಕಲ್ಲಂಗಡಿ ಸೇರಿದಂತೆ ವಿವಿಧ ಬಗೆಯ ತರಕಾರಿ ಬೆಳೆಯಲಾಗಿದೆ.

ಸ್ಪೂರ್ತಿಯಲ್ಲಿ ಮಾರಾಟ: ಬೆಳೆದ ತರಕಾರಿಗಳನ್ನು ಮಾರಾಟ ಮಾಡಲೆಂದೇ ಕಳೆದ ವರ್ಷದ ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಕೋರ್ಟ್ ರಸ್ತೆಯಲ್ಲಿರುವ ಇಎಂಎಸ್ ಭವನದಲ್ಲಿ “ಸ್ಪೂರ್ತಿ” ತರಕಾರಿ ಮಾರಾಟ ಮಳಿಗೆಯನ್ನು ತೆರೆಯಲಾಗಿದೆ. ಕಳೆದ ವರ್ಷ ತಾಲೂಕಿನ ರೈತರು ಬೆಳೆದ ತರಕಾರಿ, ಅನನಾಸು ಕೊಳೆತು ಹೋಗುವ ಸಂದರ್ಭದಲ್ಲಿ ಸ್ಪೂರ್ತಿ ತರಕಾರಿ, ಅನನಾಸುಗಳನ್ನು ಪಡೆದುಕೊಂಡು ರಾಜ್ಯದ ವಿವಿಧೆಡೆ ಮಾರಾಟ ಮಾಡುವ ರೈತರಿಗೆ ಬೆಳಕಾಗಿ ನಿಂತಿತ್ತು. ರೈತರು ಬೆಳೆದ ಯಾವುದೇ ಬೆಳೆಗಳಿಗೆ ಉತ್ತಮ ಬೆಲೆಯನ್ನು ತೆಗೆದುಕೊಡಲು ಈ ಕಂಪನಿ ಶಕ್ತಿಮೀರಿ ದುಡಿಯುತ್ತಿದೆ.

ಸಾವಯವ ಗೊಬ್ಬರವನ್ನು ಮಾತ್ರ ಉಪಯೋಗಿಸುವ ಮೂಲಕ ತರಕಾರಿ ಬೆಳೆಯಲಾಗುತ್ತಿದ್ದು , ಯಾವುದೇ ರೀತಿಯ ರಾಸಾಯನಿಕ ಗೊಬ್ಬರವನ್ನು ಉಪಯೋಗಿಸುವುದಿಲ್ಲ ಎನ್ನುತ್ತಾರೆ ಅಳದಂಗಡಿ ತೋಟಗಾರಿಕಾ ರೈತ ಉತ್ಪಾದಕರ ಕಂಪನಿಯ ಅಧ್ಯಕ್ಷ ಹರಿದಾಸ್ ಎಸ್. ಎಂ ರವರು.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 15 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು