ಹಡಿಲು ಬಿದ್ದ ಗದ್ದೆಯಲ್ಲಿ ಭತ್ತ ಬೆಳೆಯುವ ಜೊತೆಗೆ ತರಕಾರಿ ಬೆಳೆಯುವ ಮೂಲಕ ಮಾದರಿಯಾದ ರೈತ

ಅಳದಂಗಡಿ ತೋಟಗಾರಿಕಾ ರೈತ ಉತ್ಪಾದಕರ ಕಂಪನಿಯು ಕಳೆದ ವರ್ಷದಿಂದ ಹಡಿಲು ಬಿದ್ದ ಗದ್ದೆಯಲ್ಲಿ ಭತ್ತ ಬೆಳೆಯುವ ಜೊತೆಗೆ ತರಕಾರಿ ಬೆಳೆಯುವ ಮೂಲಕ ಇತರರಿಗೆ ಮಾದರಿಯಾಗಿದೆ.

ರಾಷ್ಟ್ರ ಮಟ್ಟದ ಕೃಷಿ ಪ್ರಶಸ್ತಿ ವಿಜೇತ ಪ್ರಗತಿಪರ ಕೃಷಿಕ ಪ್ರಭಾಕರ್ ಮಯ್ಯ ಅವರ ಮಾರ್ಗದರ್ಶನದಲ್ಲಿ ತರಕಾರಿ ಕೃಷಿ ನಡೆಸಲಾಗುತ್ತಿದೆ. ಬೆಳ್ತಂಗಡಿ ಕಸಬಾ ಗ್ರಾಮದ ಕೋರ್ಟ್ ರಸ್ತೆಯಲ್ಲಿ ಹಡಿಲು ಬಿದ್ದ ಗದ್ದೆ ಈಗ ತರಕಾರಿ ಗಿಡಗಳಿಂದ ಹಚ್ಚಹಸಿರು ತುಂಬಿದೆ.

ಮಹಿಳೆಯರೇ ಕೆಲಸಗಾರರು: ತರಕಾರಿ ಸಾಲು ನಿರ್ಮಾಣ, ಬಿತ್ತನೆ ಸೇರಿದಂತೆ ಇಲ್ಲಿ ಮಾಡುವವರು ಮಹಿಳೆಯರೇ ಸಿಂಹಪಾಲು. ನ್ಯಾಯವಾದಿ ಸುಕನ್ಯಾ ಹೆಚ್ ಅವರ ಸಾರಥ್ಯದಲ್ಲಿ ನಿರುದ್ಯೋಗಿ ಮಹಿಳೆಯರನ್ನು ಕೃಷಿ ಚಟುವಟಿಕೆಗಳಲ್ಲಿ ಉಪಯೋಗಿಸುವ ವಿನೂತನ ಪ್ರಯತ್ನ ನಡೆಸುತ್ತಿದ್ದಾರೆ.

ಕಂಪನಿ/ಬ್ಯಾಂಕ್ ಸಿಬ್ಬಂದಿಗಳು ಭಾಗಿ: ಅಳದಂಗಡಿ ತೋಟಗಾರಿಕಾ ರೈತ ಉತ್ಪಾದಕ ಕಂಪನಿ ಹಾಗೂ ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ(ನಿ) ದ ಸಿಬ್ಬಂದಿಗಳು ಪ್ರತಿ ಆದಿತ್ಯವಾರ ತರಕಾರಿ ಕೃಷಿಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಆ ಮೂಲಕ ಸಾಮುದಾಯಿಕ ಒಳಗೊಂಡು ಗ್ರಾಮೀಣ ಕೃಷಿ ಪದ್ದತಿಯನ್ನು ಉಳಿಸುವ ಪ್ರಯತ್ನ ನಡೆಸಲಾಗುತ್ತಿದೆ.

ವಿವಿಧ ಬಗೆಯ ತರಕಾರಿ: ಹಡಿಲು ಬಿದ್ದ ಗದ್ದೆಯಲ್ಲಿ ಅಳಸಂಡೆ , ಬೆಂಡೆಕಾಯಿ , ಆಗಲಕಾಯಿ , ಸೌತೆಕಾಯಿ, ಮುಳ್ಳುಸೌತೆ , ಬಸಲೆ , ಅರಿವೆ ಸೊಪ್ಪು , ಬದನೆಕಾಯಿ, ಕುಂಬಳಕಾಯಿ, ಕಲ್ಲಂಗಡಿ ಸೇರಿದಂತೆ ವಿವಿಧ ಬಗೆಯ ತರಕಾರಿ ಬೆಳೆಯಲಾಗಿದೆ.

ಸ್ಪೂರ್ತಿಯಲ್ಲಿ ಮಾರಾಟ: ಬೆಳೆದ ತರಕಾರಿಗಳನ್ನು ಮಾರಾಟ ಮಾಡಲೆಂದೇ ಕಳೆದ ವರ್ಷದ ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಕೋರ್ಟ್ ರಸ್ತೆಯಲ್ಲಿರುವ ಇಎಂಎಸ್ ಭವನದಲ್ಲಿ “ಸ್ಪೂರ್ತಿ” ತರಕಾರಿ ಮಾರಾಟ ಮಳಿಗೆಯನ್ನು ತೆರೆಯಲಾಗಿದೆ. ಕಳೆದ ವರ್ಷ ತಾಲೂಕಿನ ರೈತರು ಬೆಳೆದ ತರಕಾರಿ, ಅನನಾಸು ಕೊಳೆತು ಹೋಗುವ ಸಂದರ್ಭದಲ್ಲಿ ಸ್ಪೂರ್ತಿ ತರಕಾರಿ, ಅನನಾಸುಗಳನ್ನು ಪಡೆದುಕೊಂಡು ರಾಜ್ಯದ ವಿವಿಧೆಡೆ ಮಾರಾಟ ಮಾಡುವ ರೈತರಿಗೆ ಬೆಳಕಾಗಿ ನಿಂತಿತ್ತು. ರೈತರು ಬೆಳೆದ ಯಾವುದೇ ಬೆಳೆಗಳಿಗೆ ಉತ್ತಮ ಬೆಲೆಯನ್ನು ತೆಗೆದುಕೊಡಲು ಈ ಕಂಪನಿ ಶಕ್ತಿಮೀರಿ ದುಡಿಯುತ್ತಿದೆ.

ಸಾವಯವ ಗೊಬ್ಬರವನ್ನು ಮಾತ್ರ ಉಪಯೋಗಿಸುವ ಮೂಲಕ ತರಕಾರಿ ಬೆಳೆಯಲಾಗುತ್ತಿದ್ದು , ಯಾವುದೇ ರೀತಿಯ ರಾಸಾಯನಿಕ ಗೊಬ್ಬರವನ್ನು ಉಪಯೋಗಿಸುವುದಿಲ್ಲ ಎನ್ನುತ್ತಾರೆ ಅಳದಂಗಡಿ ತೋಟಗಾರಿಕಾ ರೈತ ಉತ್ಪಾದಕರ ಕಂಪನಿಯ ಅಧ್ಯಕ್ಷ ಹರಿದಾಸ್ ಎಸ್. ಎಂ ರವರು.

Spread the love
  • Related Posts

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ ಜ. 12 ರಂದು ಜರಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ ಮಕ್ಕಳ ಗ್ರಾಮ ಸಭೆಯ ಮಹತ್ವ ಮಕ್ಕಳ ಹಕ್ಕುಗಳು ಮತ್ತು ಸಮಸ್ಯೆಗಳು ಸೂಕ್ತ ಪರಿಹಾರದ ಬಗ್ಗೆ…

    Spread the love

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    Ujire: ಜನವರಿ 11ನೇ ಆದಿತ್ಯವಾರದಂದು ಬೆಲಾಲು ಗುತ್ತು ಮನೆಯಲ್ಲಿ ಇದೇ ಬರುವ 24ನೇ ತಾರೀಕು ಶನಿವಾರದಂದು ನಡೆಯುವ ರಾಜನ್ ದೈವವಾದ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ” ಕಲ್ಕುಡ ಕಲ್ಲುರ್ಟಿ ದೈವಗಳ ಉತ್ಸವ ಹಾಗೂ ಮಾರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ…

    Spread the love

    You Missed

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    • By admin
    • January 12, 2026
    • 12 views
    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    • By admin
    • January 12, 2026
    • 16 views
    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    • By admin
    • January 10, 2026
    • 36 views
    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    • By admin
    • January 10, 2026
    • 101 views
    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    • By admin
    • January 10, 2026
    • 87 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    • By admin
    • January 8, 2026
    • 40 views
    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ