ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಭವಿಷ್ಯ ನುಡಿದ ಅಮರಗಿರಿ ಶ್ರೀ ‌‌ರಂಗನಾಥಸ್ವಾಮಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ಶಾಸಕ ಹರೀಶ್ ಪೂಂಜಾ ಹಾಗೂ ರಕ್ಷಿತ್ ಶಿವರಾಂ ಯುವ ಅಭ್ಯರ್ಥಿಗಳಾಗಿ ಕಣದಲ್ಲಿದ್ದರು. ಜಾತಿ ರಾಜಕಾರಣದ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ವಿಜಯ ಎಂಬುದು ಹಲವರ ಅಭಿಪ್ರಾಯವಾಗಿತ್ತು. ಹರೀಶ್ ಪೂಂಜಾ ರವರಿಗೆ ಕ್ಷೇತ್ರದ ಅಭಿವೃದ್ಧಿಯ ಗೆಲುವು ಬಹುತೇಕ ಖಚಿತವಾಗಿದ್ದು 2023ರ ಚುನಾವಣೆಯಲ್ಲಿ ಸುಮಾರು 17,648 ಮತಗಳಿಂದ ಗೆದ್ದು 2ನೇ ಭಾರಿಗೆ ಬೆಳ್ತಂಗಡಿ ಕ್ಷೇತ್ರದಿಂದ ವಿಧಾನಸಭೆ ಆಯ್ಕೆಯಾಗಿದ್ದಾರೆ.

ಪೂಂಜಾರ ಗೆಲುವಿನ ಸುಳಿವು ನೀಡಿದ ಅಮರಗಿರಿ ಶ್ರೀ ‌ರಂಗನಾಥಸ್ವಾಮಿಯ ಭವಿಷ್ಯ:

ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಹೋಬಳಿಯ ಚಿಕೋನಹಳ್ಳಿಯ ಬೆಟ್ಟದಲ್ಲಿರುವ ತಿರುಗುವ ಕಲ್ಲು ಎಂದೇ ಪ್ರಸಿದ್ಧಿ ಪಡೆದ ಅಮರಗಿರಿ ರಂಗನಾಥಸ್ವಾಮಿಯು ಹರೀಶ್ ಪೂಂಜಾ ರವರ ಗೆಲುವಿನ ಬಗ್ಗೆ ಭವಿಷ್ಯವನ್ನು ನುಡಿದಿತ್ತು. ಅಮರಗಿರಿ ರಂಗನಾಥಸ್ವಾಮಿಯ ಪವಾಡದ ಬಗ್ಗೆ ರಾಜೇಶ್ ಕಾನರ್ಪರವರು ಆಪ್ತಮಿತ್ರರಾದ ಭಾರತೀಯ ಮಜ್ದೂರ್ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಜಯರಾಜ್ ಸಾಲಿಯಾನ್ ಹಾಗೂ ರಾಮಚಂದ್ರ ರವರಿಗೆ ಕ್ಷೇತ್ರದ ಸ್ವಾಮಿಯ ಪವಾಡದ ಬಗ್ಗೆ ಮಾಹಿತಿ ನೀಡಿದ್ದು ಈ ಬಗ್ಗೆ ಮಾಹಿತಿ ಪಡೆದು ಸ್ವಾಮಿಯ ಸನ್ನಿಧಾನಕ್ಕೆ ಬಂದು ಸಮಸ್ಯೆಯ ಬಗ್ಗೆ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತಮ್ಮ ಕ್ಷೇತ್ರದ ಜನಪ್ರಿಯ ಶಾಸಕರ ಗೆಲುವಿನ ಭವಿಷ್ಯದ ಬಗ್ಗೆಯೂ ಕೇಳಿಕೊಂಡಾಗ ದೇವರ ಅಭಯ ಸಿಕ್ಕಿದ್ದು ಹರೀಶ್ ಪೂಂಜಾ ರವರ ಗೆಲುವಿನಲ್ಲಿ ರಂಗನಾಥಸ್ವಾಮಿಯ ಪವಾಡವು ಮಹತ್ವ ಪಡೆದಿದೆ.

ಅಮರಗಿರಿ ಶ್ರೀ ರಂಗನಾಥ ಸ್ವಾಮಿಯ ಸನ್ನಿಧಿಯಲ್ಲಿರುವ ತಿರುಗುವ ಕಲ್ಲು

ಅಮರಗಿರಿ ರಂಗನಾಥಸ್ವಾಮಿಯ ಕ್ಷೇತ್ರದ ಹಿನ್ನೆಲೆ:

ಅಮರಗಿರಿ ಶ್ರೀ ಗುಡ್ಡದ ರಂಗನಾಥಸ್ವಾಮಿ ದೇವಸ್ಥಾನ ಹನ್ನೆರಡನೆ ಶತಮಾನದಲ್ಲಿ ಸ್ಥಾಪನೆಯಾಗಿದ್ದು, ತಮಿಳುನಾಡಿನಿಂದ ಶ್ರೀರಾಮಾನುಜಾಚಾರ್ಯರು ಉಚ್ಛಾಟನೆಕೊಂಡು ಮೇಲುಕೋಟೆಯನ್ನು ಮೂಲ ಸ್ಥಾನವಾಗಿಸಿಕೊಂಡರು. ಒಂದು ಸಾರಿ ಅವರು ತಮ್ಮ ಸಹಚರರೊಂದಿಗೆ ಸಂಚಾರ ಮಾಡುವಾಗ ಚನ್ನರಾಯಪಟ್ಟಣ ತಾಲ್ಲೂಕಿನ ಚಿಕ್ಕೋನಹಳ್ಳಿಯಲ್ಲಿ ತಂಗಿದ್ದರಂತೆ.ಆ ರಾತ್ರಿ ರಾಮಾನುಜಾಚಾರ್ಯರು ಮಲಗಿದ್ದಾಗ ಅವರಿಗೆ ವಿಶೇಷವಾದ ಅನುಭವವಾಯಿತು. ಅದನ್ನು ಮರುದಿನ ಸುತ್ತಮುತ್ತಲಿನ ಹಳ್ಳಿಯ ಜನರಿಗೆ ಕರೆದು ಈ ಸ್ಥಳ ಬಹಳ ವಿಶೇಷವಾಗಿದೆ, ಇದು ಮುಂದೆ ಪ್ರಸಿದ್ಧವಾದ ವಿಷ್ಣು ಸ್ಥಳವಾಗುತ್ತದೆ. ನೀವೆಲ್ಲ ಸೇರಿ ಇಲ್ಲಿ ವಿಷ್ಣುವಿನ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪ್ರತಿ ನಿತ್ಯ ಪೂಜೆ ಪುನಸ್ಕಾರ ಮತ್ತು ಆರಾಧನೆ ನಡೆಯುವಂತೆ ನೋಡಿ ಕೊಳ್ಳಬೇಕೆಂದು ಹೇಳುತ್ತಾರೆ. ಆಗ ಅವರ ಮಾತಿನಂತೆ ಹಳ್ಳಿಯ ಜನರೆಲ್ಲ ಸೇರಿ ಬಿಲ್ಲು ಬಾಣ ಹಿಡಿದಿರುವ ಮೂಲ ಶ್ರೀ ರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಿ ಪೂಜಾ ಕೈಂಕರ್ಯಗಳು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುತ್ತಾರೆ.ಪರಕೀಯರಿಂದ ನಾಶವಾಗುತ್ತಿದ್ದ ದೇವಸ್ಥಾನಗಳನ್ನು ಉಳಿಸಲು ಗ್ರಾಮಸ್ಥರು ರಾಮನ ದೇವಸ್ಥಾನವನ್ನು ರಂಗನಾಥಸ್ವಾಮಿ ದೇವಸ್ಥಾನವೆಂದು ಹೇಳಿ ಕಾಪಾಡುತ್ತಿದ್ದರಂತೆ, ಕಾರಣ ರಂಗನಾಥಸ್ವಾಮಿಯ ಮೇಲಿದ್ದ ನಂಬಿಕೆ, ಭಕ್ತಿ ಪರಕೀಯರಿಗೆ ಹಾಗಿತ್ತಂತೆ. ಈ ರೀತಿಯಿಂದ ಗ್ರಾಮಸ್ಥರು ಎಷ್ಟೋ ದೇವಸ್ಥಾನಗಳು ನಾಶವಾಗದಂತೆ ಉಳಿಸಿಕೊಂಡಿದ್ದಾರೆ ಎನ್ನುವ ಮಾತಿದೆ.

2016ರ ಫೆಬ್ರವರಿಯಲ್ಲಿ 5 ದಿನ ವಿಶೇಷ ಪೂಜೆ ಮತ್ತು ಉತ್ಸವಗಳೊಂದಿಗೆ ಮಲಗಿರುವ ರಂಗನಾಥಸ್ವಾಮಿಯ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿದೆ.ರಾಮಾನುಜಾಚಾರ್ಯರು ಆ ಸ್ಥಳದಲ್ಲಿದ್ದಾಗ ತಲೆಗೆ ಇಟ್ಟುಕೊಂಡು ಮಲಗಿದ್ದ ಸಣ್ಣಕಲ್ಲು ಇಂದು ಸಾವಿರಾರು ಜನರ ಮನಸ್ಸಿನಲ್ಲಿರುವ ಗೊಂದಲಕ್ಕೆ ಉತ್ತರ ನೀಡುತ್ತಿದೆ. ಜನರು ಬೇಡಿಕೊಂಡ ಕೆಲಸವಾಗುವುದಾದರೆ ಜನರು ಆ ಕಲ್ಲಿನ ಮೇಲೆ ಕುಳಿತ ತಕ್ಷಣ ಕಲ್ಲು ಬಲಕ್ಕೆ ತಿರುಗುತ್ತದೆ ಇದು ನೋಡಲು ಬಹಳ ವಿಸ್ಮಯಕಾರಿಯಾಗಿದ್ದು, ನೋಡುವವರನ್ನು ಆಶ್ಚರ್ಯಚಕಿತರನ್ನಾಗಿಸುತ್ತದೆ.

ಆ ಕ್ಷೇತ್ರವನ್ನು ‘ದೊಣ್ಣಪ್ಪ‘ ಎಂಬ ದೇವರು ರಕ್ಷಕರಾಗಿ ಕಾಯುತ್ತಿದ್ದಾರೆ. ಒಂದು ಸಣ್ಣ ಗುಡಿಯು ಇಂದು ರಾಮಾನುಜಾಚಾರ್ಯರು ಹೇಳಿದಂತೆ ಇಂದು ಪ್ರಸಿದ್ಧವಾದ ರಂಗನಾಥಸ್ವಾಮಿ ದೇವಸ್ಥಾನವಾಗಿದ್ದು, ಪ್ರತಿ ಶನಿವಾರವೂ ದಾಸೋಹ ಕಾರ್ಯಕ್ರಮ ನಡೆಯುತ್ತದೆ. ಉತ್ಸವ ದೇವರು ಊರು ಒಳಗಿದ್ದು ರಾಮನವಮಿಯ ದಿನ ರಥೋತ್ಸವ ನಡೆಯುತ್ತದೆ. ಪಂಚರಾತ್ರಾಗಮದ ರೀತಿ ನಿತ್ಯ ಪೂಜಾ ಕೈಂಕರ್ಯಗಳು ನಡೆಯುತ್ತವೆ.ಬೆಳಿಗ್ಗೆ 10.30ರಿಂದ ಮಧ್ಯಾಹ್ನ 3ರವರೆಗೆ ತೆರೆದಿರುತ್ತದೆ. ಜನಜಂಗುಳಿ ಜಾಸ್ತಿ ಇದ್ದಲ್ಲಿ ಸಂಜೆ 5.30ರವರೆಗೂ ತೆರೆದಿರುತ್ತದೆ.

Spread the love
  • Related Posts

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    ಬೆಳ್ತಂಗಡಿ: ಮುಂಡಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸೋಮಂತಡ್ಕ ಬಸ್ ನಿಲುಗಡೆ ವಿಚಾರದಲ್ಲಿ ಗಂಭೀರ ನಿರ್ಲಕ್ಷ್ಯದ ಘಟನೆ ಬೆಳಕಿಗೆ ಬಂದಿದೆ. ಸ್ಥಳದಲ್ಲೇ “ವೇಗದೂತ ಹಾಗೂ ಸಾಮಾನ್ಯ ಬಸ್ ನಿಲುಗಡೆ” ಎಂದು ಬೋರ್ಡ್ ಅಳವಡಿಸಿರುವುದರ ಜೊತೆಗೆ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದಲೂ ಅಧಿಕೃತ…

    Spread the love

    ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

    ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ (ಏ17)ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.…

    Spread the love

    You Missed

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    • By admin
    • April 18, 2026
    • 8 views
    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

    • By admin
    • April 17, 2026
    • 22 views
    ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿ 16 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

    ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    • By admin
    • April 14, 2026
    • 52 views
    ಬಳಂಜದಲ್ಲಿ ಭಕ್ತಿಭಾವದಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ

    ಕಲ್ಚೆರ್ಪೆ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಕಾಡಾನೆಯ ರಕ್ಷಣಾಕಾರ್ಯ ಯಶಸ್ವಿ

    • By admin
    • April 13, 2026
    • 32 views
    ಕಲ್ಚೆರ್ಪೆ ಗ್ರಾಮದಲ್ಲಿ ಬಾವಿಗೆ ಬಿದ್ದಿದ್ದ ಕಾಡಾನೆಯ ರಕ್ಷಣಾಕಾರ್ಯ ಯಶಸ್ವಿ

    ಆಯತಪ್ಪಿ ರಾತ್ರಿ ಬಾವಿಗೆ ಬಿದ್ದ ಕಾಡಾನೆ ಪೆರಾಜೆ ಕಲ್ಲುಚರ್ಪೆಯಲ್ಲಿ ನಡೆದ ಘಟನೆ

    • By admin
    • April 13, 2026
    • 50 views
    ಆಯತಪ್ಪಿ ರಾತ್ರಿ ಬಾವಿಗೆ ಬಿದ್ದ ಕಾಡಾನೆ ಪೆರಾಜೆ  ಕಲ್ಲುಚರ್ಪೆಯಲ್ಲಿ ನಡೆದ ಘಟನೆ

    ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು

    • By admin
    • April 12, 2026
    • 93 views
    ಚಾಲಕನ ಅಜಾಗರೂಕತೆಯಿಂದ ಪಾದಾಚಾರಿಗಳ ಮೇಲೆರಗಿದ ಓಮ್ಮಿ ಕಾರು