ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಭವಿಷ್ಯ ನುಡಿದ ಅಮರಗಿರಿ ಶ್ರೀ ‌‌ರಂಗನಾಥಸ್ವಾಮಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ಶಾಸಕ ಹರೀಶ್ ಪೂಂಜಾ ಹಾಗೂ ರಕ್ಷಿತ್ ಶಿವರಾಂ ಯುವ ಅಭ್ಯರ್ಥಿಗಳಾಗಿ ಕಣದಲ್ಲಿದ್ದರು. ಜಾತಿ ರಾಜಕಾರಣದ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ವಿಜಯ ಎಂಬುದು ಹಲವರ ಅಭಿಪ್ರಾಯವಾಗಿತ್ತು. ಹರೀಶ್ ಪೂಂಜಾ ರವರಿಗೆ ಕ್ಷೇತ್ರದ ಅಭಿವೃದ್ಧಿಯ ಗೆಲುವು ಬಹುತೇಕ ಖಚಿತವಾಗಿದ್ದು 2023ರ ಚುನಾವಣೆಯಲ್ಲಿ ಸುಮಾರು 17,648 ಮತಗಳಿಂದ ಗೆದ್ದು 2ನೇ ಭಾರಿಗೆ ಬೆಳ್ತಂಗಡಿ ಕ್ಷೇತ್ರದಿಂದ ವಿಧಾನಸಭೆ ಆಯ್ಕೆಯಾಗಿದ್ದಾರೆ.

ಪೂಂಜಾರ ಗೆಲುವಿನ ಸುಳಿವು ನೀಡಿದ ಅಮರಗಿರಿ ಶ್ರೀ ‌ರಂಗನಾಥಸ್ವಾಮಿಯ ಭವಿಷ್ಯ:

ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಹೋಬಳಿಯ ಚಿಕೋನಹಳ್ಳಿಯ ಬೆಟ್ಟದಲ್ಲಿರುವ ತಿರುಗುವ ಕಲ್ಲು ಎಂದೇ ಪ್ರಸಿದ್ಧಿ ಪಡೆದ ಅಮರಗಿರಿ ರಂಗನಾಥಸ್ವಾಮಿಯು ಹರೀಶ್ ಪೂಂಜಾ ರವರ ಗೆಲುವಿನ ಬಗ್ಗೆ ಭವಿಷ್ಯವನ್ನು ನುಡಿದಿತ್ತು. ಅಮರಗಿರಿ ರಂಗನಾಥಸ್ವಾಮಿಯ ಪವಾಡದ ಬಗ್ಗೆ ರಾಜೇಶ್ ಕಾನರ್ಪರವರು ಆಪ್ತಮಿತ್ರರಾದ ಭಾರತೀಯ ಮಜ್ದೂರ್ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಜಯರಾಜ್ ಸಾಲಿಯಾನ್ ಹಾಗೂ ರಾಮಚಂದ್ರ ರವರಿಗೆ ಕ್ಷೇತ್ರದ ಸ್ವಾಮಿಯ ಪವಾಡದ ಬಗ್ಗೆ ಮಾಹಿತಿ ನೀಡಿದ್ದು ಈ ಬಗ್ಗೆ ಮಾಹಿತಿ ಪಡೆದು ಸ್ವಾಮಿಯ ಸನ್ನಿಧಾನಕ್ಕೆ ಬಂದು ಸಮಸ್ಯೆಯ ಬಗ್ಗೆ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತಮ್ಮ ಕ್ಷೇತ್ರದ ಜನಪ್ರಿಯ ಶಾಸಕರ ಗೆಲುವಿನ ಭವಿಷ್ಯದ ಬಗ್ಗೆಯೂ ಕೇಳಿಕೊಂಡಾಗ ದೇವರ ಅಭಯ ಸಿಕ್ಕಿದ್ದು ಹರೀಶ್ ಪೂಂಜಾ ರವರ ಗೆಲುವಿನಲ್ಲಿ ರಂಗನಾಥಸ್ವಾಮಿಯ ಪವಾಡವು ಮಹತ್ವ ಪಡೆದಿದೆ.

ಅಮರಗಿರಿ ಶ್ರೀ ರಂಗನಾಥ ಸ್ವಾಮಿಯ ಸನ್ನಿಧಿಯಲ್ಲಿರುವ ತಿರುಗುವ ಕಲ್ಲು

ಅಮರಗಿರಿ ರಂಗನಾಥಸ್ವಾಮಿಯ ಕ್ಷೇತ್ರದ ಹಿನ್ನೆಲೆ:

ಅಮರಗಿರಿ ಶ್ರೀ ಗುಡ್ಡದ ರಂಗನಾಥಸ್ವಾಮಿ ದೇವಸ್ಥಾನ ಹನ್ನೆರಡನೆ ಶತಮಾನದಲ್ಲಿ ಸ್ಥಾಪನೆಯಾಗಿದ್ದು, ತಮಿಳುನಾಡಿನಿಂದ ಶ್ರೀರಾಮಾನುಜಾಚಾರ್ಯರು ಉಚ್ಛಾಟನೆಕೊಂಡು ಮೇಲುಕೋಟೆಯನ್ನು ಮೂಲ ಸ್ಥಾನವಾಗಿಸಿಕೊಂಡರು. ಒಂದು ಸಾರಿ ಅವರು ತಮ್ಮ ಸಹಚರರೊಂದಿಗೆ ಸಂಚಾರ ಮಾಡುವಾಗ ಚನ್ನರಾಯಪಟ್ಟಣ ತಾಲ್ಲೂಕಿನ ಚಿಕ್ಕೋನಹಳ್ಳಿಯಲ್ಲಿ ತಂಗಿದ್ದರಂತೆ.ಆ ರಾತ್ರಿ ರಾಮಾನುಜಾಚಾರ್ಯರು ಮಲಗಿದ್ದಾಗ ಅವರಿಗೆ ವಿಶೇಷವಾದ ಅನುಭವವಾಯಿತು. ಅದನ್ನು ಮರುದಿನ ಸುತ್ತಮುತ್ತಲಿನ ಹಳ್ಳಿಯ ಜನರಿಗೆ ಕರೆದು ಈ ಸ್ಥಳ ಬಹಳ ವಿಶೇಷವಾಗಿದೆ, ಇದು ಮುಂದೆ ಪ್ರಸಿದ್ಧವಾದ ವಿಷ್ಣು ಸ್ಥಳವಾಗುತ್ತದೆ. ನೀವೆಲ್ಲ ಸೇರಿ ಇಲ್ಲಿ ವಿಷ್ಣುವಿನ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪ್ರತಿ ನಿತ್ಯ ಪೂಜೆ ಪುನಸ್ಕಾರ ಮತ್ತು ಆರಾಧನೆ ನಡೆಯುವಂತೆ ನೋಡಿ ಕೊಳ್ಳಬೇಕೆಂದು ಹೇಳುತ್ತಾರೆ. ಆಗ ಅವರ ಮಾತಿನಂತೆ ಹಳ್ಳಿಯ ಜನರೆಲ್ಲ ಸೇರಿ ಬಿಲ್ಲು ಬಾಣ ಹಿಡಿದಿರುವ ಮೂಲ ಶ್ರೀ ರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಿ ಪೂಜಾ ಕೈಂಕರ್ಯಗಳು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳುತ್ತಾರೆ.ಪರಕೀಯರಿಂದ ನಾಶವಾಗುತ್ತಿದ್ದ ದೇವಸ್ಥಾನಗಳನ್ನು ಉಳಿಸಲು ಗ್ರಾಮಸ್ಥರು ರಾಮನ ದೇವಸ್ಥಾನವನ್ನು ರಂಗನಾಥಸ್ವಾಮಿ ದೇವಸ್ಥಾನವೆಂದು ಹೇಳಿ ಕಾಪಾಡುತ್ತಿದ್ದರಂತೆ, ಕಾರಣ ರಂಗನಾಥಸ್ವಾಮಿಯ ಮೇಲಿದ್ದ ನಂಬಿಕೆ, ಭಕ್ತಿ ಪರಕೀಯರಿಗೆ ಹಾಗಿತ್ತಂತೆ. ಈ ರೀತಿಯಿಂದ ಗ್ರಾಮಸ್ಥರು ಎಷ್ಟೋ ದೇವಸ್ಥಾನಗಳು ನಾಶವಾಗದಂತೆ ಉಳಿಸಿಕೊಂಡಿದ್ದಾರೆ ಎನ್ನುವ ಮಾತಿದೆ.

2016ರ ಫೆಬ್ರವರಿಯಲ್ಲಿ 5 ದಿನ ವಿಶೇಷ ಪೂಜೆ ಮತ್ತು ಉತ್ಸವಗಳೊಂದಿಗೆ ಮಲಗಿರುವ ರಂಗನಾಥಸ್ವಾಮಿಯ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿದೆ.ರಾಮಾನುಜಾಚಾರ್ಯರು ಆ ಸ್ಥಳದಲ್ಲಿದ್ದಾಗ ತಲೆಗೆ ಇಟ್ಟುಕೊಂಡು ಮಲಗಿದ್ದ ಸಣ್ಣಕಲ್ಲು ಇಂದು ಸಾವಿರಾರು ಜನರ ಮನಸ್ಸಿನಲ್ಲಿರುವ ಗೊಂದಲಕ್ಕೆ ಉತ್ತರ ನೀಡುತ್ತಿದೆ. ಜನರು ಬೇಡಿಕೊಂಡ ಕೆಲಸವಾಗುವುದಾದರೆ ಜನರು ಆ ಕಲ್ಲಿನ ಮೇಲೆ ಕುಳಿತ ತಕ್ಷಣ ಕಲ್ಲು ಬಲಕ್ಕೆ ತಿರುಗುತ್ತದೆ ಇದು ನೋಡಲು ಬಹಳ ವಿಸ್ಮಯಕಾರಿಯಾಗಿದ್ದು, ನೋಡುವವರನ್ನು ಆಶ್ಚರ್ಯಚಕಿತರನ್ನಾಗಿಸುತ್ತದೆ.

ಆ ಕ್ಷೇತ್ರವನ್ನು ‘ದೊಣ್ಣಪ್ಪ‘ ಎಂಬ ದೇವರು ರಕ್ಷಕರಾಗಿ ಕಾಯುತ್ತಿದ್ದಾರೆ. ಒಂದು ಸಣ್ಣ ಗುಡಿಯು ಇಂದು ರಾಮಾನುಜಾಚಾರ್ಯರು ಹೇಳಿದಂತೆ ಇಂದು ಪ್ರಸಿದ್ಧವಾದ ರಂಗನಾಥಸ್ವಾಮಿ ದೇವಸ್ಥಾನವಾಗಿದ್ದು, ಪ್ರತಿ ಶನಿವಾರವೂ ದಾಸೋಹ ಕಾರ್ಯಕ್ರಮ ನಡೆಯುತ್ತದೆ. ಉತ್ಸವ ದೇವರು ಊರು ಒಳಗಿದ್ದು ರಾಮನವಮಿಯ ದಿನ ರಥೋತ್ಸವ ನಡೆಯುತ್ತದೆ. ಪಂಚರಾತ್ರಾಗಮದ ರೀತಿ ನಿತ್ಯ ಪೂಜಾ ಕೈಂಕರ್ಯಗಳು ನಡೆಯುತ್ತವೆ.ಬೆಳಿಗ್ಗೆ 10.30ರಿಂದ ಮಧ್ಯಾಹ್ನ 3ರವರೆಗೆ ತೆರೆದಿರುತ್ತದೆ. ಜನಜಂಗುಳಿ ಜಾಸ್ತಿ ಇದ್ದಲ್ಲಿ ಸಂಜೆ 5.30ರವರೆಗೂ ತೆರೆದಿರುತ್ತದೆ.

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 20 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 72 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ