ಈ ಬಾರಿಯ ಚಿನ್ನದ ಅಂಬಾರಿ ಅಭಿಮನ್ಯು ಹೆಗಲಿಗೆ

ಮೈಸೂರು:  ಕೊರೊನಾದಿಂದಾಗಿ ಈ ಬಾರಿ ಮೈಸೂರು ದಸರಾದಲ್ಲಿ ಯಾವುದೇ ಸಂಭ್ರಮ ಸಡಗರವಿಲ್ಲ. ಅತ್ಯಂತ ಸರಳವಾಗಿ ಈ ಬಾರಿ ದಸರಾವನ್ನು ಆಚರಿಸಲಾಗಿದೆ. ಇನ್ನು ಇವತ್ತಿನ ಜಂಬೂ ಸವಾರಿ ಮೆರವಣಿಗೆ ಕೂಡ ಅಷ್ಟೇ ಸರಳವಾಗಿರಲಿದೆ.

ಈ ಬಾರಿಯ ಜಂಬೂ ಸವಾರಿಯ ವಿಶೇಷತೆಯಾಗಿ ಇದೇ ಮೊದಲ ಬಾರಿಗೆ ಅಭಿಮನ್ಯು ಚಿನ್ನದ ಅಂಬಾರಿ ಹೊರಲಿದ್ದಾನೆ. ಅಭಿಮನ್ಯುಗೆ  21 ವರ್ಷಗಳ ಬಳಿಕ ಮೊದಲ ಬಾರಿಗೆ 750 ಕೆ.ಜಿ. ಚಿನ್ನದ ಅಂಬಾರಿಯನ್ನು ಹೊರುವ ಅವಕಾಶ ಬಂದೊದಗಿದೆ.

ಜಂಬೂಸವಾರಿಯಲ್ಲಿ ಕರ್ನಾಟಕ ವಾದ್ಯಗೋಷ್ಠಿಯವರು ಕುಳಿತುಕೊಳ್ಳುವ ಗಾಡಿಯನ್ನು ಎಳೆಯುವ ಜವಾಬ್ದಾರಿ ನಿರ್ವಹಿಸಿದ್ದ ಅಭಿಮನ್ಯು ಆನೆಯು ನಂತರ ನೌಫತ್‌ ಆನೆಯಾಗಿ ಮೆರವಣಿಗೆಯಲ್ಲಿ ಸಾಗುತ್ತಿತ್ತು. ಅಲ್ಲದೆ, ಶ್ರೀರಂಗಪಟ್ಟಣ ದಸರೆಯಲ್ಲಿ ಮರದ ಅಂಬಾರಿಯನ್ನು 7-8 ವರ್ಷ ಹೊತ್ತಿರುವ ಅನುಭವ ಅಭಿಮನ್ಯುವಿಗಿದೆ. ಆದರೆ ಇದೇ ಮೊದಲ ಬಾರಿಗೆ ಅಭಿಮನ್ಯು ಅಂಬಾರಿ ಹೊರುತ್ತಿದ್ದಾನೆ. 54 ವರ್ಷದ ಅಭಿಮನ್ಯುವನ್ನು ಮಾವುತ ವಸಂತ ಮುನ್ನಡೆಸಲಿದ್ದಾರೆ.

ಕೊರೋನಾ ಮಹಾಮಾರಿ ಕಾರಣ ಈ ಬಾರಿ 5 ಆನೆಗಳನ್ನು ಮಾತ್ರ ಕಾಡಿನಿಂದ ನಾಡಿಗೆ ಕರೆ ತರಲಾಗಿದೆ. ಮೈಸೂರು ಅರಮನೆ ಆವರಣದಲ್ಲೇ ಎಲ್ಲಾ ರೀತಿಯ ತಾಲೀಮು ನಡೆಸಿ ಅಂತಿಮ ಜಂಬೂ ಸವಾರಿಗೆ ಸಿದ್ಧವಾಗಿದೆ. ಇನ್ನು ಅಭಿಮನ್ಯು ಅಂಬಾರಿ ಹೊತ್ತರೆ, ಅಕ್ಕಪಕ್ಕದಲ್ಲಿ ವಿಜಯ, ಕಾವೇರ ಕುಮ್ಕಿ ಆನೆಗಳಾಗಿ ಸಾಗಲಿವೆ. ನೌಫತ್ ಆನೆಗಳಾಗಿ ವಿಕ್ರಂ, ನಿಶಾನೆ ಆನೆಯಾಗಿ ಸಾಗಲಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 50 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 89 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 36 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 607 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 148 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 62 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ