ಆಂಬುಲೆನ್ಸ್’ಗಳ ಮನಸೋ ಇಚ್ಛೆ ಹಣ ವಸೂಲಿಗೆ ರಾಜ್ಯ ಸರ್ಕಾರ ಬ್ರೇಕ್ ಪ್ರತಿ ಕಿಲೋಮಿಟರ್ ಗೆ ದರ ನಿಗದಿ ಪಡಿಸಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಂಬುಲೆನ್ಸ್ ಹಗಲು ದರೋಡೆಗೆ ಕಡಿವಾಣ ಹಾಕಲಾಗಿದೆ. ಇದಕ್ಕಾಗಿ ಪ್ರತಿ ಕಿಲೋಮಿಟರ್ ಗೆ ದರ ನಿಗದಿ ಪಡಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ದರ ನಿಗದಿಯಂತೆ ಹಣ ಪಡೆಯೋದಕ್ಕೆ ಖಡಕ್ ಸೂಚನೆಯನ್ನು ನೀಡಿದೆ. ಒಂದು ವೇಳೆ ಈ ನಿಯಮ ಮೀರಿದ್ರೇ.. ಲೈಸೆನ್ಸ್ ಕೂಡ ರದ್ದು ಪಡಿಸೋದಾಗಿಯೂ ಎಚ್ಚರಿಕೆ ನೀಡಿದೆ.

ರಾಜ್ಯದಲ್ಲಿ ಕೊರೋನಾ ಸೋಂಕಿನ ಹೆಚ್ಚಿನ ಪ್ರಕರಣಗಳ ಸಂದರ್ಭದಲ್ಲಿ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸೋದಕ್ಕೆ ತೊಡಗಿರುವಂತ ಆಂಬುಲೆನ್ಸ್ ಗಳು, ಸೋಂಕಿತರ ಕುಟುಂಬಸ್ಥರಿಂದ ಹಣದ ಸುಲಿಗೆಯನ್ನೇ ಮಾಡುತ್ತಿರೋದಾಗಿ ಕೇಳಿ ಬಂದಿತ್ತು. ಅನೇಕರು ಆಂಬುಲೆನ್ಸ್ ಗಳ ಹಣ ಮಾಡೋ ದಂಧೆಗೆ ಬ್ರೇಕ್ ಹಾಕುವಂತೆಯೂ ಸಾರಿಗೆ ಇಲಾಖೆ, ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು.

ಈ ಕುರಿತಂತೆ ಸಾರಿಗೆ ಸಚಿವರು, ಆರೋಗ್ಯ ಸಚಿವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಾಯಿತು. ಇಂತಹ ಸಭೆಯಲ್ಲಿ ಆಂಬುಲೆನ್ಸ್ ಗಳ ಮನಸೋ ಇಚ್ಛೆ ಹಣ ವಸೂಲಿಗೆ ಬ್ರೇಕ್ ಹಾಕುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇನ್ಮುಂದೆ ಆಂಬುಲೆನ್ಸ್ ಗಳಿಗೆ 10 ಕಿಲೋಮಿಟ್ ವರೆಗೆ 1,500 ರೂಪಾಯಿ ದರ ನಿಗದಿ ಮಾಡಿದೆ. 10 ಕಿಲೋಮೀಟರ್ ನಂತ್ರಕ್ಕೆ 120 ದರ ನಿಗದಿ ಮಾಡಿದೆ. ಅಲ್ಲದೇ ವೆಯಟಿಂಗ್ ಚಾರ್ಜ್ ಆಗಿ ಪ್ರತಿ ಗಂಟೆಗೆ ರೂ.200 ನಿಗದಿ ಮಾಡಿದೆ.

ಇನ್ನೂ ಲೈಫ್ ಸಪೋರ್ಟ್ ಹೊಂದಿರುವಂತ ಆಂಬುಲೆನ್ಸ್ ಗಳಿಗೆ 10 ಕಿಲೋಮೀಟರ್ ಗೆ 2000 ರೂಪಾಯಿ ದರ ನಿಗದಿ ಮಾಡಿದೆ. 10 ಕಿಲೋಮೀಟರ್ ನಂತ್ರದ 120 ರೂಪಾಯಿಯ ದರವನ್ನು ನಿಗದಿ ಮಾಡಿದೆ. ಅಲ್ಲದೇ ಪ್ರತಿ ಗಂಟೆಗೆ ಕಾಯುವಿಕೆಯ ಚಾರ್ಜ್ ಆಗಿ ರೂ.250 ದರ ನಿಗದಿ ಪಡಿಸಿ, ಆದೇಶಿಸಿದೆ. ಈ ಆದೇಶವನ್ನು ಉಲ್ಲಂಘಿಸಿ, ಹೆಚ್ಚು ಹಣ ವಸೂಲಿ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದಾಗಿ ಎಚ್ಚರಿಕೆ ನೀಡಿದೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 8 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ