ಮಲಯಾಳಂ ನಟ ಅನಿಲ್ ನೆಡುಮಂಗಾಡ್ ಇನ್ನಿಲ್ಲ! ಡ್ಯಾಮ್ ನಲ್ಲಿ ಸ್ನಾನ ಮಾಡಲು ನೀರಿಗೆ ಇಳಿದಾಗ ನಡೆದ ದುರ್ಘಟನೆ!

ಕೊಚ್ಚಿನ್: ಖ್ಯಾತ ಮಲಯಾಳಂ ನಟ ಅನಿಲ್ ನೆಡುಮಂಗಾಡ್ (48) ತೊಡುಪುಳ ಮಾಲಂಕಾರ ಡ್ಯಾಮ್ ನಲ್ಲಿ ಸ್ನಾನ ಮಾಡುವಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇಂದು ಸಂಜೆ ನಟ ಮತ್ತು ಇತರ ಇಬ್ಬರು ಸ್ನಾನಕ್ಕಾಗಿ ಡ್ಯಾಮ್ ಗೆ ಹೋದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಪ್ರಾಥಮಿಕ ವಿಚಾರಣೆಯ ಪ್ರಕಾರ ನಟ ಮತ್ತು ಅವರ ಸ್ನೇಹಿತರು ಶೂಟಿಂಗ್ ವಿರಾಮದ ಸಮಯದಲ್ಲಿ ಸ್ನಾನ ಮಾಡಲು ಡ್ಯಾಮ್ ಗೆ ಹೋಗಿದ್ದು ಆಳವಾದ ನೀರಿಗೆ ಇಳಿದಾಗ ನೀರಿನ ಸುಳಿಗೆ ಸಿಲುಕಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ತಕ್ಷಣ ಅವರನ್ನು ನೀರಿನಿಂದ ರಕ್ಷಿಸಿ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು ಪ್ರಯೋಜನವಾಗಿಲ್ಲ ಪೊಲೀಸರು ನಟನ ಶವವನ್ನು ತೋಡುಪುಳ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಅನಿಲ್ ಟಿವಿ ನಿರೂಪಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು ‘ಕಮ್ಮಟ್ಟಿ ಪಾಡಮ್’, ‘ಎನ್ಜನ್ ಸ್ಟೀವ್ ಲೋಪೆಜ್’ ಮತ್ತು ‘ಪೊರಿಂಜು ಮರಿಯಮ್ ಜೋಸ್’ ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಅಬಿನಯಿಸಿದ್ದರು.

ಇತ್ತೀಚೆಗೆ ತೆರೆಕಂಡ ‘ಅಯ್ಯಪ್ಪನುಂಕೊಶಿಯಮ್’ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿದ್ದ ಅನಿಲ್ ಅಪಾರ ಜನಪ್ರಿಯತೆ ಗಳಿಸಿದ್ದರು.

ಘಟನೆ ಕುರಿತಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Spread the love
  • Related Posts

    ಅಂಕುಡೊಂಕು ರಸ್ತೆಗಳಲ್ಲಿ ಕಾಮಗಾರಿ ಮುನ್ನವೇ 100 ವೇಗ ಮಿತಿ ಫಲಕ: ಚಾರ್ಮಾಡಿ ರಸ್ತೆಯಲ್ಲಿ ಸಾರ್ವಜನಿಕರ ಆತಂಕ

    ಬೆಳ್ತಂಗಡಿ ತಾಲ್ಲೂಕಿನ ಪುಂಜಾಲಕಟ್ಟೆ–ಚಾರ್ಮಾಡಿ ರಸ್ತೆಯಲ್ಲಿ ನಡೆಯುತ್ತಿರುವ ಕಾಮಗಾರಿ ಇನ್ನೂ ಪೂರ್ಣಗೊಳ್ಳದಿದ್ದರೂ, ಈಗಾಗಲೇ ವಿವಿಧ ಸ್ಥಳಗಳಲ್ಲಿ ವೇಗ ಮಿತಿ ಸೂಚಿಸುವ ಫಲಕಗಳನ್ನು ಅಳವಡಿಸಿರುವುದು ಸಾರ್ವಜನಿಕರ ಗಮನ ಸೆಳೆದಿದೆ. ವಿಶೇಷವಾಗಿ ಚಾರ್ಮಾಡಿ–ಉಜಿರೆ ಮಾರ್ಗದ ಕೆಲವು ಅಂಕುಡೊಂಕಾದ ಹಾಗೂ ಅಪಾಯಕಾರಿ ತಿರುವುಗಳಿರುವ ಪ್ರದೇಶಗಳಲ್ಲಿ ಕೂಡ 100…

    Spread the love

    ಸಕಲೇಶಪುರ ಕುಂಬ್ರಹಳ್ಳಿ ಲೋಲಾಕ್ಷಮ್ಮರಿಗೆ ವಾತ್ಸಲ್ಯ ಯೋಜನೆಡಿಯಲ್ಲಿ ವಾತ್ಸಲ್ಯ ಸೂರು ನಿರ್ಮಾಣ

    ಸಕಲೇಶಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ, ಸಮಾಜದಲ್ಲಿನ ಅತ್ಯಂತ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುತ್ತಿದೆ ಎಂದು ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ ಯವರು ತಾಲೂಕಿನ ಮಾಗಲು ಕುಂಬ್ರಹಳ್ಳಿಯ ಮಾಸಾಶನ…

    Spread the love

    You Missed

    ಅಂಕುಡೊಂಕು ರಸ್ತೆಗಳಲ್ಲಿ ಕಾಮಗಾರಿ ಮುನ್ನವೇ 100 ವೇಗ ಮಿತಿ ಫಲಕ: ಚಾರ್ಮಾಡಿ ರಸ್ತೆಯಲ್ಲಿ ಸಾರ್ವಜನಿಕರ ಆತಂಕ

    • By admin
    • March 31, 2026
    • 12 views
    ಅಂಕುಡೊಂಕು ರಸ್ತೆಗಳಲ್ಲಿ ಕಾಮಗಾರಿ ಮುನ್ನವೇ 100 ವೇಗ ಮಿತಿ ಫಲಕ: ಚಾರ್ಮಾಡಿ ರಸ್ತೆಯಲ್ಲಿ ಸಾರ್ವಜನಿಕರ ಆತಂಕ

    ಸಕಲೇಶಪುರ ಕುಂಬ್ರಹಳ್ಳಿ ಲೋಲಾಕ್ಷಮ್ಮರಿಗೆ ವಾತ್ಸಲ್ಯ ಯೋಜನೆಡಿಯಲ್ಲಿ ವಾತ್ಸಲ್ಯ ಸೂರು ನಿರ್ಮಾಣ

    • By admin
    • March 30, 2026
    • 58 views
    ಸಕಲೇಶಪುರ ಕುಂಬ್ರಹಳ್ಳಿ ಲೋಲಾಕ್ಷಮ್ಮರಿಗೆ ವಾತ್ಸಲ್ಯ ಯೋಜನೆಡಿಯಲ್ಲಿ ವಾತ್ಸಲ್ಯ ಸೂರು ನಿರ್ಮಾಣ

    ಬೈಕ್ ಸ್ಕೀಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

    • By admin
    • March 29, 2026
    • 277 views
    ಬೈಕ್ ಸ್ಕೀಡ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದು ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

    ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ

    • By admin
    • March 28, 2026
    • 121 views
    ಭಾರಿ ಗಾಳಿ ಮಳೆಗೆ ಆಟೋ ರಿಕ್ಷಾ ನಿಲ್ದಾಣದ ಮೇಲ್ಛಾವಣಿ ಕುಸಿತ

    ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್

    • By admin
    • March 27, 2026
    • 81 views
    ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್

    ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ

    • By admin
    • March 27, 2026
    • 32 views
    ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ