ರಾಜಕೀಯಕ್ಕೆ ಕರ್ನಾಟಕದ ಸಿಂಗಂ ಎಂಟ್ರಿ! ಮಾಜಿ ಐ.ಪಿ.ಎಸ್ ಅಧಿಕಾರಿ ಕೆ.ಅಣ್ಣಾಮಲೈ ಇಂದು ಅಧಿಕೃತವಾಗಿ ರಾಜಕೀಯ ಪ್ರವೇಶ


ತಮಿಳುನಾಡು: ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ ಮಾಜಿ ಐ.ಪಿ.ಎಸ್ ಅಧಿಕಾರಿ ಕೆ.ಅಣ್ಣಾಮಲೈ ರಾಜಕೀಯ ಪ್ರವೇಶಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಮ್ಮುಖದಲ್ಲಿ ಅಧಿಕೃತವಾಗಿ ಅಣ್ಣಾ ಮಲೈ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ತಮಿಳುನಾಡಿನಲ್ಲಿ ಬಿ.ಜೆ.ಪಿ ಹೊಸ ದೂರದೃಷ್ಟಿ ನೀಡುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ದೆಹಲಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾಗಲಿದ್ದಾರೆ.

ಸುಮಾರು 10 ವರ್ಷಗಳ ಕಾಲ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಐಪಿಎಸ್ ಅಧಿಕಾರಿಯಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ  ಡಿ.ಸಿ.ಪಿ, ಎಸ್.ಪಿ ಯಾಗಿ ಸೇವೆ ಸಲ್ಲಿಸಿದ ಬಳಿಕ ಸ್ವಯಂ ನಿವೃತ್ತಿ ಪಡೆದಿರುವ ಕೆ.ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿ ಸೇರಲಿದ್ದಾರೆ.

ಅಣ್ಣಾಮಲೈ ರಾಜೀನಾಮೆಯ ಬೆನ್ನಲ್ಲೇ ರಾಜಕೀಯಕ್ಕೆ ಎಂಟ್ರಿಕೊಡ್ತಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿದ್ದವು.

2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. ಕೊಯಮತ್ತೂರು ವಿಧಾನಸಭಾ ಕ್ಷೇತ್ರದಿಂದಲೇ ರಾಜಕೀಯ ಧುಮುಕಲಿದ್ದು, ಜನರ ಸೇವೆಯನ್ನು ಮಾಡಲಿದ್ದೇನೆ. ಕುಟುಂಬದೊಂದಿಗೆ ಕಾಲಕಳೆಯುವುದರ ಜೊತೆಗೆ ರಾಜಕೀಯ ಕ್ಷೇತ್ರದಲ್ಲಿಯೂ ತನ್ನನ್ನು ತೊಡಗಿಸಿಕೊಳ್ಳಲಿದ್ದೇನೆ. ಬಿಜೆಪಿ ರಾಷ್ಟ್ರೀಯವಾದಿ ಪಕ್ಷ ನಾನು ರಾಷ್ಟ್ರೀಯವಾದಿ ಎಂದು ಹೇಳಿಕೊಂಡಿದ್ದಾರೆ.

Spread the love
  • Related Posts

    ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವ

    ಉಜಿರೆ: ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವವು 05/05/2026 ಮಂಗಳವಾರ ಶ್ರೀ ಸದಾಶಿವ ರುದ್ರ ದೇವಸ್ಥಾನ ಸುರ್ಯ ಇದರ ವಠಾರದಲ್ಲಿ ಸಂಜೆ 6.30ರಿಂದ ನಡೆಯಲಿದೆ. ಡಾ| ಸತೀಶ್ಚಂದ್ರ ಸುರ್ಯಗುತ್ತು ಅಧ್ಯಕ್ಷತೆ ವಹಿಸಲಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಅನಂತರಾಮ…

    Spread the love

    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    ಅಪಾಯದ ತಿರುವು: ಕ್ರಮಕ್ಕೆ ಕಾಯುತ್ತಿರುವ ಸೋಮಂತಡ್ಕ ರಸ್ತೆ ಸೋಮಂತಡ್ಕ: ಮುಂಡಾಜೆ ಗ್ರಾಮದ ಸೋಮಂತಡ್ಕದಿಂದ ಹಾಸ್ಟೆಲ್ ರಸ್ತೆಗೆ ಸೇರುವ ತಿರುವು ವಾಹನ ಸವಾರರ ಜೀವಕ್ಕೆ ಅಪಾಯಕಾರಿಯಾಗಿ ಪರಿಣಮಿಸಿದೆ. ಕಳೆದ ಕೆಲವು ತಿಂಗಳಿಂದ ಈ ಜಂಕ್ಷನ್‌ನಲ್ಲಿ ಅನೇಕ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿದ್ದು, ದೈವದ ಕೃಪೆಯಿಂದ…

    Spread the love

    You Missed

    ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವ

    • By admin
    • May 4, 2026
    • 16 views
    ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವ

    ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು

    • By admin
    • May 3, 2026
    • 35 views
    ಶೃಂಗೇರಿ ವಿಧಾನ ಸಭಾ ಕ್ಷೇತ್ರದ 2023ರ ಚುನಾವಣೆಯ ಮರುಏಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಿ.ಎನ್.ಜೀವರಾಜ್ ರಿಗೆ ಗೆಲುವು

    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    • By admin
    • May 3, 2026
    • 54 views
    ಪ್ರಾಣಕ್ಕೆ ಎರವಾಗಲಿದೆ ಈ ಜಂಕ್ಷನ್ – ತಕ್ಷಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    • By admin
    • May 2, 2026
    • 39 views
    ಶೃಂಗೇರಿ ಅಂಚೆ ಮತ ಮರುಎಣಿಕೆ: T. D. Rajegowda ಗೆ ಮತ್ತೆ ಜಯಭೇರಿ

    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    • By admin
    • May 1, 2026
    • 33 views
    ಶಿರಾಡಿ ಘಾಟಿಯಲ್ಲಿ ಪ್ಲೈವುಡ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ ಸಂಚಾರದಲ್ಲಿ ವ್ಯತ್ಯಯ

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    • By admin
    • April 30, 2026
    • 69 views
    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??