
ಬೇಲೂರು : ಬೇಲೂರು ತಾಲೂಕಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಘಟನೆ ನಡೆದಿದೆ ಬೇಲೂರು ತಾಲ್ಲೂಕಿನ, ಬಿಕ್ಕೊಡು ಗ್ರಾಮ ಪಂಚಾಯಿತಿ ಅಂಕಿಹಳ್ಳಿ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಗಜೇಂದ್ರಪುರ ಗ್ರಾಮದ ಮಹಿಳೆ ಚಂದ್ರಮ್ಮ (45) ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದಾರೆ.
ಡಾ.ಕರುಣ್ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ ಕೆಲಸಕ್ಕೆ ಬಂದಿದ್ದ ಮಹಿಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ದಾಳಿ ಮಾಡಿದ ಕಾಡಾನೆ ಸೊಂಡಲಿನಿಂದ ಎತ್ತಿ ಬಿಸಾಡಿ, ಕಾಲಿನಿಂದ ತುಳಿದು ಸಾಯಿಸಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿದ್ದಾರೆ.ಮಲೆನಾಡು ಭಾಗದಲ್ಲಿ ವ್ಯಾಪಕವಾಗಿ ಆನೆ ದಾಳಿಗೆ ಸಾವನ್ನಪುತ್ತಿರುವ ಕೂಲಿ ಕಾರ್ಮಿಕರು ಕೂಡಲೇ ಆನೆಗಳನ್ನು ಸ್ಥಳಾಂತರಿಸುವಂತೆ ಎಷ್ಟೇ ಬಾರಿ ಮನವಿ ಸಂಬಂಧಪಟ್ಟವರು ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ