ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು MLC ಪ್ರತಾಪಸಿಂಹ ನಾಯಕ್ ರಿಂದ ಸರ್ಕಾರಕ್ಕೆ ಪತ್ರ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮ ವಹಿಸದಿರುವ ಕುರಿತಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮತ್ತು ತೋಟಗಾರಿಕಾ ಸಚಿನ ಮಲ್ಲಿಕಾರ್ಜುನ ಅವರಿಗೆ ಪತ್ರ ಬರೆದು ಶೀಘ್ರ ಕ್ರಮಕ್ಕೆ ಆಗ್ರಹಿಸಿದ್ದಾರೆ.


ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಹಲವಾರು ವರ್ಷಗಳಿಂದ ಕಲ್ಪಿಸಲಾಗಿದೆ. ಆದರೆ ದ.ಕ. ಜಿಲ್ಲೆಗೆ ಸಂಬಂಧಿಸಿದಂತೆ, ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಪ್ರಸ್ತುತ ವರ್ಷಕ್ಕೆ ಕಲ್ಪಿಸಲು ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮ ಕಂತನ್ನು ಪಡೆದು ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಈಗಾಗಲೇ ಕ್ರಮ ವಹಿಸಬೇಕಾಗಿತ್ತು.


ಆದರೆ ಈಗಾಗಲೇ ಜೂನ್ ತಿಂಗಳ ಅಂತ್ಯ ಸಮೀಪಿಸುತ್ತಿದ್ದು ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಇದುವರೆಗೂ ಯಾವುದೇ ಕ್ರಮ ಪ್ರಾರಂಭವಾಗಿರುವುದಿಲ್ಲ.

ಅಲ್ಲದೇ ಕಳೆದ ವರ್ಷ ಟೆಂಡರ್ ಪ್ರಕ್ರಿಯೆ ವಿಳಂಭವಾದ್ದರಿಂದ ಬೆಳೆ ವಿಮೆ ಅವಧಿಯನ್ನು 2023 ರ ಆ. 1 ರಿಂದ 2024 ರ ಜು. 31 ರ ವರೆಗೆ ನಿಗದಿಪಡಿಸಲಾಗಿದೆ. ಈ ಹಿಂದೆ ಒಮ್ಮೆ ಬೆಳೆ ವಿಮೆ ಪಡೆದರೆ ಅದು 3 ವರ್ಷದ ಅವಧಿಗೆ ಚಾಲ್ತಿಯಲ್ಲಿರುತ್ತಿತ್ತು ಆದರೆ ಕಳೆದ ವರ್ಷದಿಂದ ಕೇವಲ 1 ವರ್ಷದ ಅವಧಿಗೆ ಮಾತ್ರ ಮಿತಿಗೊಳಿಸಲಾಗಿದೆ. ಸಂಕಷ್ಟದಲ್ಲಿರುವ ಬೆಳೆಗಾರರಿಗೆ ನೆರವಾಗುವ ದೃಷ್ಟಿಯಿಂದ ಈ ಹಿಂದೆ ಇದ್ದಂತೆ ಬೆಳೆ ವಿಮೆ ಅವಧಿಯನ್ನು 3 ವರ್ಷಗಳಿಗೆ ವಿಸ್ತರಿಸಬೇಕು ಹಾಗೂ ಬೆಳೆಗಾರರಿಂದ ನಿಗದಿಯಾದ ಬೆಳೆ ವಿಮೆ ಕಂತನ್ನು ಪಡೆದು ಅವರಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯವನ್ನು ಕಲ್ಪಿಸಲು ಈ ಕೂಡಲೇ ಕ್ರಮ ವಹಿಸಬೇಕೆಂದು ನಾಯಕ್ ಅವರು ಪತ್ರದ ಮೂಲಕ ಆಗ್ರಹಿಸಿದ್ದಾರೆ

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ