ಅಂಬಾರಿ ಹೊರುತ್ತಿದ್ದ ಅರ್ಜುನ ಇನ್ನು ನೆನಪು ಮಾತ್ರ, ಕಾಡಾನೆ ಸೆರೆ ಹಿಡಿಯುವ ವೇಳೆ ಕಾಡಾನೆ ದಾಳಿಗೆ ವೀರಮರಣವಪ್ಪಿದ ಅರ್ಜುನ

ಹಾಸನ: ಅಂಬಾರಿ ಹೊರುತ್ತಿದ್ದ ಸಾಕಾನೆ ಅರ್ಜುನ ಕಾಡಾನೆಯೊಂದರ ದಾಳಿಗೆ ಸೋಮವಾರ ಬಲಿಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ಸಂದರ್ಭ ಈ ದುರಂತ ಸಂಭವಿಸಿದೆ. ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ಕಾರ್ಯ ನಡೆಸಿದ್ದಾರೆ.

ಅಂಬಾರಿ ಹೊತ್ತಿದ್ದ ಅರ್ಜುನ: 2012 ರಿಂದ 2019 ರವರೆಗಿನ ಮೈಸೂರು ದಸರಾ ಉತ್ಸವದ ಒಟ್ಟು 8 ಬಾರಿ ಅರ್ಜುನ ಆನೆ ಅಂಬಾರಿ ಹೊತ್ತಿತ್ತು. ಇದೀಗ ಪುಂಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯ ವೇಳೆ ಮೃತಪಟ್ಟಿದ್ದು, ಮಾವುತರು ಕಣ್ಣೀರಿಡುತ್ತಿದ್ದಾರೆ

ಸಾಕಾನೆಗಳು ಹಾಗೂ ಕಾಡಾನೆ ಮಧ್ಯೆ ಕಾಳಗ ನಡೆದಿದ್ದು, ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಇತರ ಸಾಕಾನೆಗಳು ಓಡಿ ಹೋಗಿದ್ದರೆ. ಅರ್ಜುನ ಮಾತ್ರ ಒಂಟಿಸಲಗದ ಜೊತೆ ಸೆಣಸಾಡಿತ್ತು.

ಸೋಮವಾರ ಮಧ್ಯಾಹ್ನ ಬಾಳೆಕೆರೆ ಫಾರೆಸ್ಟ್‌ನಲ್ಲಿ ನಾಲ್ಕು ಸಾಕಾನೆಗಳೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಅರಿವಳಿಕೆ ಚುಚ್ಚುಮದ್ದು ನೀಡುವ ಸಂದರ್ಭದಲ್ಲಿ ಪುಂಡಾನೆಯೊಂದು ದಾಳಿ ಮಾಡಿದೆ. ನಾಲ್ಕು ಸಾಕಾನೆಗಳ ಜೊತೆಗೆ ಅದನ್ನು ಹಿಮ್ಮೆಟ್ಟಿಸಲು ಮಾವುತರು ಪ್ರಯತ್ನಿಸಿದರು.

ಮೂರು ಆನೆಗಳು ಹಿಂದೆ ಸರಿದಿದ್ದು, ಸಾಕಾನೆ ಅರ್ಜುನನ ಮೇಲೆ ಕಾಡಾನೆ ದಾಳಿ ನಡೆಸಿದೆ. ದಾಳಿ ತೀವ್ರವಾಗುತ್ತಿದ್ದಂತೆಯೇ ಅರ್ಜುನನ ಮಾವುತರು ಕೆಳಕ್ಕೆ ಇಳಿದು ಓಡಿ ಬಂದಿದ್ದಾರೆ. ಹೊಟ್ಟೆ ಭಾಗಕ್ಕೆ ತಿವಿದಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಸಾಕಾನೆ ಅರ್ಜುನ ಮೃತಪಟ್ಟಿದೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ