ಸೇನಾ ಹೆಲಿಕಾಪ್ಟರ್ ಪತನ ದುರಂತ; ಸಿಡಿಎಸ್ ಬಿಪಿನ್ ರಾವತ್​ ದುರ್ಮರಣ

ತಮಿಳುನಾಡು: ಸಿಡಿಎಸ್​ ಬಿಪಿನ್​ ರಾವತ್​ ಅವರು ಇಂದು ಬೆಳಗ್ಗೆ 9 ಗಂಟೆಗೆ ದೆಹಲಿಯಿಂದ ತಮ್ಮ ಪತ್ನಿ, ಇನ್ನಿತರ ಸೇನಾ ಅಧಿಕಾರಿಗಳೊಂದಿಗೆ ತಮಿಳುನಾಡಿನ ವೆಲ್ಲಿಂಗ್ಟನ್​ಗೆ ಹೋಗಿದ್ದರು. ಅಲ್ಲಿಂದ ವೆಲ್ಲಿಂಗ್ಟನ್​ಗೆ ಹೋಗುತ್ತಿದ್ದಾಗ ದುರಂತ ಸಂಭವಿಸಿತ್ತು.

ತಮಿಳುನಾಡಿನ ಕುನೂರ್​​ನಲ್ಲಿ ನಡೆದ ಸೇನಾ ಹೆಲಿಕಾಪ್ಟರ್​ ದುರಂತದಲ್ಲಿ ಸೇನಾ ಸಿಬ್ಬಂದಿಗಳ ಮುಖ್ಯಸ್ಥ ಬಿಪಿನ್​ ರಾವತ್ (Bipin Rawat) ಮೃತಪಟ್ಟಿದ್ದಾರೆ.  ಗಂಭೀರವಾಗಿ ಗಾಯಗೊಂಡು ಜೀವನ್ಮರಣದ ನಡುವಿನ ಹೋರಾಟದಲ್ಲಿ ಇದ್ದ ಬಿಪಿನ್​ ರಾವತ್ ಮರಣವನ್ನು ಭಾರತೀಯ ವಾಯುಸೇನೆ ದೃಢಪಡಿಸಿದೆ. ಟ್ವೀಟ್ ಮಾಡಿರುವ ಇಂಡಿಯನ್ ಏರ್​ಫೋರ್ಸ್​, ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಹೆಲಿಕಾಪ್ಟರ್​​ನಲ್ಲಿದ್ದ ಇತರ 11  ಮಂದಿ ಇಂದಿನ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತೇವೆ ಎಂದು ಹೇಳಿದೆ. 

ಸಿಡಿಎಸ್​ ಬಿಪಿನ್​ ರಾವತ್​ ಅವರು ಇಂದು ಬೆಳಗ್ಗೆ 9 ಗಂಟೆಗೆ ದೆಹಲಿಯಿಂದ ತಮ್ಮ ಪತ್ನಿ, ಇನ್ನಿತರ ಸೇನಾ ಅಧಿಕಾರಿಗಳೊಂದಿಗೆ ತಮಿಳುನಾಡಿನ ವೆಲ್ಲಿಂಗ್ಟನ್​ಗೆ ಹೋಗಿದ್ದರು. ಅಂದರೆ ದೆಹಲಿಯಿಂದ ಕೊಯಂಬತ್ತೂರಿನ ಸೂಲೂರ್​ಗೆ ಬಂದು, ಅಲ್ಲಿಂದ ಮಧ್ಯಾಹ್ನ 12.20ಕ್ಕೆ ವೆಲ್ಲಿಂಗ್ಟನ್​ಗೆ ಸೇನಾ ಹೆಲಿಕಾಪ್ಟರ್​ನಲ್ಲಿ ಪ್ರಯಾಣ ಮಾಡುತ್ತಿದ್ದರು. ಆದರೆ ಈ ಚಾಪರ್ ಕೂನೂರು ಬಳಿ ಪತನವಾಗಿತ್ತು. ಇದರಲ್ಲಿದ್ದ 14 ಮಂದಿ ದುರ್ಮರಣಕ್ಕೀಡಾಗಿದ್ದಾರೆ.  ಬಿಪಿನ್​ ರಾವತ್ ಪತ್ನಿ ಮೃತಪಟ್ಟಿದ್ದು ಆಗಲೇ ಅಧಿಕೃತವಾಗಿತ್ತು. ಆದರೆ ಬಿಪಿನ್​ ರಾವತ್ ಗೆ ಇನ್ನೂ ಚಿಕಿತ್ಸೆ ನಡೆಯುತ್ತಿದೆ ಎನ್ನಲಾಗಿತ್ತು. ಇದೀಗ ವಾಯುಸೇನೆ ಅವರ ಸಾವನ್ನು ದೃಢಪಡಿಸಿದೆ. ಬಿಪಿನ್​ ರಾವತ್​ ಮೃತದೇಹವನ್ನು ನಾಳೆ ದೆಹಲಿಗೆ ತರಲಾಗುವುದು ಎಂದು ಹೇಳಲಾಗಿದೆ.

ಯಾರು ಈ ಬಿಪಿನ್ ರಾವತ್​?
ಬಿಪಿನ್ ರಾವತ್​ ಪೂರ್ತಿ ಹೆಸರು ಬಿಪಿನ್​ ಲಕ್ಷ್ಮಣ್​ ಸಿಂಗ್​ ರಾವತ್​. ಇವರಿಗೆ 63 ವರ್ಷ ವಯಸ್ಸಾಗಿತ್ತು. ಮೂಲತಃ ಉತ್ತರಾಖಂಡ್​​ನವಾರಗಿದ್ದು, 2019ರಲ್ಲಿ ಈ ಸಿಡಿಎಸ್​ ಹುದ್ದೆಗೆ ಏರಿದ್ದರು. 2015ರಲ್ಲಿ ನಾಗಾಲ್ಯಾಂಡ್​ ಬಳಿ ನಡೆದಿದ್ದ ಹೆಲಿಕಾಪ್ಟರ್ ಪತನ ದುರಂತದಲ್ಲಿ ಬಿಪಿನ್ ರಾವತ್ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದರು. ಇಂದು ಬಿಪಿನ್​ ರಾವತ್ ಸಾವಿಗೆ ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಸೇರಿ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 3 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 8 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 7 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 12 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 14 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    “ರೀಚಾರ್ಜ್ ಇಲ್ಲದೆ ಆರಿದ ಹೆದ್ದಾರಿ ದಾರಿದೀಪಗಳು; ಪೋಸ್ಟ್‌ಪೇಯ್ಡ್ ಮೀಟರ್‌ಗೆ ಮನವಿ” ಹೆದ್ದಾರಿ ಬದಿ ದಾರಿದೀಪಕ್ಕೆ ಪ್ರೀ-ಪೇಯ್ಡ್ ರೀಚಾರ್ಜ್: ಕತ್ತಲಲ್ಲಿ ದಾರಿಹೋಕರ ಪರದಾಟ

    • By admin
    • July 15, 2026
    • 15 views
    “ರೀಚಾರ್ಜ್ ಇಲ್ಲದೆ ಆರಿದ ಹೆದ್ದಾರಿ ದಾರಿದೀಪಗಳು; ಪೋಸ್ಟ್‌ಪೇಯ್ಡ್ ಮೀಟರ್‌ಗೆ ಮನವಿ” ಹೆದ್ದಾರಿ ಬದಿ ದಾರಿದೀಪಕ್ಕೆ ಪ್ರೀ-ಪೇಯ್ಡ್ ರೀಚಾರ್ಜ್: ಕತ್ತಲಲ್ಲಿ ದಾರಿಹೋಕರ ಪರದಾಟ