ಚಿರತೆಯೊಂದಿಗೆ ಸೆಣಸಾಡಿ ತಾಯಿಯ ಪ್ರಾಣ ಉಳಿಸಿದ ಮಗ! ಹಾಸನ ಜಿಲ್ಲೆಯ ಅರಸೀಕೆರೆ ಬೈರಗೊಂಡನಹಳ್ಳಿಯಲ್ಲಿ ನಡೆದ ಘಟನೆ!

ಹಾಸನ : ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಈಗ ಕಾಡುಪ್ರಾಣಿಗಳ ಹಾವಳಿ ಜಾಸ್ತಿಯಾಗುತ್ತಿದೆ. ಅದರಲ್ಲೂ ಚಿರತೆ ದಾಳಿ ಸಾಮಾನ್ಯ ಅನ್ನೋ ಹಾಗಾಗಿದೆ. ಇದೇ ರೀತಿ ದಾಳಿ ನಡೆಸಿದ ಚಿರತೆಯೊಂದಿಗೆ ಸೆಣಸಿ ಯುವಕನೊಬ್ಬ ತಾಯಿಯ ಜೀವ ಉಳಿಸಿದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆಯ ಬೈರಗೊಂಡನಹಳ್ಳಿಯಲ್ಲಿ ನಡೆದಿದೆ.

ನಿನ್ನೆ ಬೆಳಗ್ಗೆ 7 ಗಂಟೆ ಸುಮಾರಿಗೆ ಕಿರಣ್ ಹಾಗೂ ಆತನ ತಾಯಿ ಚಂದ್ರಮ್ಮ ತಮ್ಮ ಜಮೀನಿಗೆ ಹೋಗುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಚಂದ್ರಮ್ಮನ ಮೇಲೆ ಚಿರತೆಯೊಂದು ದಾಳಿ ನಡೆಸಿದೆ. ಆಗ ಅಲ್ಲೇ ಇದ್ದ ಕಿರಣ್ ಕೂಡಲೇ ಚಿರತೆ ಮೇಲೆ ಎರಗಿ , ಚಿರತೆ ಜೊತೆ ಸೆಣಸಾಡಿ ತನ್ನ ತಾಯಿಯನ್ನು ಚಿರತೆಯಿಂದ ಕಾಪಾಡಿದ್ದಾನೆ. ಅಮ್ಮನ ಮೇಲೆರಗಿದ ಚಿರತೆಯ ಕುತ್ತಿಗೆಯನ್ನು ಬಿಗಿ ಹಿಡಿದು ಸೆಣಸಾಡಿದ ಕಿರಣ್ ಬರೋಬ್ಬರಿ 15 ನಿಮಿಷಗಳ ಕಾಲ ಸೆಣಸಾಟ ನಡೆಸಿ ಚಿರತೆಯನ್ನು ಹೊಡೆದು ಸಾಯಿಸಿದ್ದಾನೆ.

ಘಟನೆಯಲ್ಲಿ ಕಿರಣ್ ಹಾಗೂ ಚಂದ್ರಮ್ಮ ಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟಿನಲ್ಲಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಹೆತ್ತವ್ವನ ಪ್ರಾಣ ಕಾಪಾಡಿದ ಸಾಹಸಿ ಮಗನಿಗೆ ನಾವು ಶಹಬ್ಬಾಸ್ ಹೇಳಲೇಬೇಕು.!

Spread the love
  • Related Posts

    ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಅಬ್ಬರದ ಮಳೆಯಾಗುತ್ತಿದೆ. ಮಳೆಯ ಅಬ್ಬರದಿಂದ ಹೊನ್ನಾವರ ತಾಲೂಕಿನ ರಾಮತೀರ್ಥ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದು ಹೆದ್ದಾರಿಯ ಮೇಲೆ ಬಿದ್ದಿದೆ.ಅದೃಷ್ಟವಶಾತ್ ಆ ಸಂದರ್ಭದಲ್ಲಿ ಯಾವುದೇ ವಾಹನ ಸಂಚಾರ ಮಾಡದ ಕಾರಣ ದೊಡ್ಡ ಅವಘಡ ಸಂಭವಿಸುವುದು…

    Spread the love

    ನವಜೀವನೋತ್ಸವದಲ್ಲಿ ವ್ಯಸನಮುಕ್ತ ಹಾಗೂ ಮೌಲ್ಯಯುತ ಜೀವನಕ್ಕೆ ಡಾ. ನವೀನ್ ಚಂದ್ರ ಶೆಟ್ಟಿ ಕರೆ

    ವ್ಯಸನ ತೊರೆದು ಮೌಲ್ಯಯುತ ಜೀವನ ನಡೆಸಿ: ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿಸಿ ಟ್ರಸ್ಟ್) ರಿ., ಸಕಲೇಶಪುರ ಇದರ ವತಿಯಿಂದ ಆಯೋಜಿಸಲಾದ ನವಜೀವನೋತ್ಸವ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಡಾ. ನವೀನ್ ಚಂದ್ರ ಶೆಟ್ಟಿ ಅವರು…

    Spread the love

    You Missed

    ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್

    • By admin
    • July 2, 2026
    • 32 views
    ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್

    ನವಜೀವನೋತ್ಸವದಲ್ಲಿ ವ್ಯಸನಮುಕ್ತ ಹಾಗೂ ಮೌಲ್ಯಯುತ ಜೀವನಕ್ಕೆ ಡಾ. ನವೀನ್ ಚಂದ್ರ ಶೆಟ್ಟಿ ಕರೆ

    • By admin
    • July 2, 2026
    • 104 views
    ನವಜೀವನೋತ್ಸವದಲ್ಲಿ ವ್ಯಸನಮುಕ್ತ ಹಾಗೂ ಮೌಲ್ಯಯುತ ಜೀವನಕ್ಕೆ ಡಾ. ನವೀನ್ ಚಂದ್ರ ಶೆಟ್ಟಿ ಕರೆ

    ದಕ್ಷಿಣ ಕನ್ನಡ ಹಾಲು ಒಕ್ಕೂಟದ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    • By admin
    • July 2, 2026
    • 39 views
    ದಕ್ಷಿಣ ಕನ್ನಡ ಹಾಲು ಒಕ್ಕೂಟದ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ
    • By admin
    • July 2, 2026
    • 7 views

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಕಲೇಶಪುರ ಪಾಲಹಳ್ಳಿ ಕರಗೂರು ಕೂಡಿಗೆ ಶ್ರೀ ವಾಯುಪುತ್ರ ದೇವಾಲಯಕ್ಕೆ ಅನುದಾನ ಮಂಜೂರು

    • By admin
    • July 2, 2026
    • 9 views

    ಗುಂಡ್ಯ ಶಿರಾಡಿ ಘಾಟ್ ನಲ್ಲಿ ಕಾರು ಬಸ್ ಅಫಘಾತ ಮೂವರು ಸಾವು

    • By admin
    • July 2, 2026
    • 9 views