ಚಿರತೆಯೊಂದಿಗೆ ಸೆಣಸಾಡಿ ತಾಯಿಯ ಪ್ರಾಣ ಉಳಿಸಿದ ಮಗ! ಹಾಸನ ಜಿಲ್ಲೆಯ ಅರಸೀಕೆರೆ ಬೈರಗೊಂಡನಹಳ್ಳಿಯಲ್ಲಿ ನಡೆದ ಘಟನೆ!

ಹಾಸನ : ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಈಗ ಕಾಡುಪ್ರಾಣಿಗಳ ಹಾವಳಿ ಜಾಸ್ತಿಯಾಗುತ್ತಿದೆ. ಅದರಲ್ಲೂ ಚಿರತೆ ದಾಳಿ ಸಾಮಾನ್ಯ ಅನ್ನೋ ಹಾಗಾಗಿದೆ. ಇದೇ ರೀತಿ ದಾಳಿ ನಡೆಸಿದ ಚಿರತೆಯೊಂದಿಗೆ ಸೆಣಸಿ ಯುವಕನೊಬ್ಬ ತಾಯಿಯ ಜೀವ ಉಳಿಸಿದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆಯ ಬೈರಗೊಂಡನಹಳ್ಳಿಯಲ್ಲಿ ನಡೆದಿದೆ.

ನಿನ್ನೆ ಬೆಳಗ್ಗೆ 7 ಗಂಟೆ ಸುಮಾರಿಗೆ ಕಿರಣ್ ಹಾಗೂ ಆತನ ತಾಯಿ ಚಂದ್ರಮ್ಮ ತಮ್ಮ ಜಮೀನಿಗೆ ಹೋಗುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಚಂದ್ರಮ್ಮನ ಮೇಲೆ ಚಿರತೆಯೊಂದು ದಾಳಿ ನಡೆಸಿದೆ. ಆಗ ಅಲ್ಲೇ ಇದ್ದ ಕಿರಣ್ ಕೂಡಲೇ ಚಿರತೆ ಮೇಲೆ ಎರಗಿ , ಚಿರತೆ ಜೊತೆ ಸೆಣಸಾಡಿ ತನ್ನ ತಾಯಿಯನ್ನು ಚಿರತೆಯಿಂದ ಕಾಪಾಡಿದ್ದಾನೆ. ಅಮ್ಮನ ಮೇಲೆರಗಿದ ಚಿರತೆಯ ಕುತ್ತಿಗೆಯನ್ನು ಬಿಗಿ ಹಿಡಿದು ಸೆಣಸಾಡಿದ ಕಿರಣ್ ಬರೋಬ್ಬರಿ 15 ನಿಮಿಷಗಳ ಕಾಲ ಸೆಣಸಾಟ ನಡೆಸಿ ಚಿರತೆಯನ್ನು ಹೊಡೆದು ಸಾಯಿಸಿದ್ದಾನೆ.

ಘಟನೆಯಲ್ಲಿ ಕಿರಣ್ ಹಾಗೂ ಚಂದ್ರಮ್ಮ ಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟಿನಲ್ಲಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಹೆತ್ತವ್ವನ ಪ್ರಾಣ ಕಾಪಾಡಿದ ಸಾಹಸಿ ಮಗನಿಗೆ ನಾವು ಶಹಬ್ಬಾಸ್ ಹೇಳಲೇಬೇಕು.!

Spread the love
  • Related Posts

    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    ಬೆಂಗಳೂರು: ದಿನಾಂಕ: 09-04-2026 ರಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ. https://karresults.nic.in KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್‌ಎಂಎಸ್ (SMS) ಮೂಲಕವೂ…

    Spread the love

    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

    Manglore: ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ ಮಾಡಿಕೊಂಡಿರುವ ಒಪ್ಪಂದ (MoU) ಸಂಬಂಧ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಬೆಂಗಳೂರುನಲ್ಲಿ ಏಪ್ರಿಲ್ 4, 2026ರಂದು ಹೊರಡಿಸಿದ ಈ ಆದೇಶದಲ್ಲಿ, ಜಿಲ್ಲೆಯ ಮಟ್ಟದಲ್ಲಿ ಆರೋಗ್ಯ ಸೇವೆಗಳನ್ನು ಪರಿಣಾಮಕಾರಿಯಾಗಿ…

    Spread the love

    You Missed

    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    • By admin
    • April 9, 2026
    • 21 views
    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

    • By admin
    • April 7, 2026
    • 62 views
    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

    • By admin
    • April 7, 2026
    • 29 views
     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ

    • By admin
    • April 6, 2026
    • 53 views
    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ

    ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಕುಟುಂಬಸ್ಥರ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

    • By admin
    • April 6, 2026
    • 71 views
    ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಕುಟುಂಬಸ್ಥರ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

    ನಾವೂರಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣಾವಕಾಶಗಳ ಕುರಿತು ಕಾರ್ಯಾಗಾರ

    • By admin
    • April 6, 2026
    • 20 views
    ನಾವೂರಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣಾವಕಾಶಗಳ ಕುರಿತು ಕಾರ್ಯಾಗಾರ