ಮುಷ್ಕರ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು: ದಿನೇಶ್ ಗುಂಡೂರಾವ್

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ನೀಡುತ್ತಿರುವ 8 ಸಾವಿರ ರೂ. ಖಚಿತ ಗೌರವಧನ ಬದಲಾಗಿ 9,500 ರೂಪಾಯಿಗಳನ್ನು ಮುಂಗಡವಾಗಿ ನೀಡಲು ಸರಕಾರ ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಫ್ರೀಡಂ ಪಾರ್ಕ್‍ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಮುಷ್ಕರ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು.ಹೆಚ್ಚಿನ ಪ್ರೋತ್ಸಾಹಧನ ಕೇಂದ್ರ ಸರಕಾರದ ಅನುದಾನದ ಮೇಲೆ ಒದಗಿಸಲಾಗುತ್ತಿದೆ.

ಆರ್.ಸಿ.ಎಚ್ ಪೊರ್ಟಲ್ ನಲ್ಲಿ ಆಶಾ ಕಾರ್ಯಕರ್ತೆಯರ ಕಾರ್ಯಚಟುವಟುಕೆಗಳ ಆಧಾರದ ಮೇಲೆ ಪ್ರೋತ್ಸಾಹಧನ ಲಭ್ಯವಾಗುವಂತದ್ದು ಎಂದರು. ಪ್ರಸ್ತುತ ಗೌರವಧನ ಹಾಗೂ ಪ್ರೋತ್ಸಾಹಧನ ಸೇರಿ ಸರಾಸರಿ ಒಬ್ಬ ಆಶಾ ಕಾರ್ಯಕರ್ತೆಗೆ ಮಾಸಿಕ 9,500 ರೂ. ಪಾವತಿ ಮಾಡಲಾಗುತ್ತಿದೆ. ಇದನ್ನು ಮುಂಗಡವಾಗಿ ಆಶಾ ಕಾರ್ಯಕರ್ತೆಯರಿಗೆ ಒದಗಿಸಲು ಸಿದ್ಧ. ಆದರೆ ಗೌರವಧನದ ಹೊರತಾಗಿ ಆಶಾ ಕಾರ್ಯಕರ್ತೆಯರಿಗೆ ಲಭ್ಯವಾಗುತ್ತಿರುವ ಪ್ರೋತ್ಸಾಹಧನವನ್ನೂ ಮಾಸಿಕ ವೇತನದ ರೂಪದಲ್ಲಿ ನಿಗದಿಪಡಿಸಿ ನೀಡುವುದು ಸದ್ಯದ ಪರಿಸ್ಥಿತಿಯಲ್ಲಿ ಕಷ್ಟ ಎಂದು ಅವರು ತಿಳಿಸಿದರು.

ಮುಂಬರುವ ರಾಜ್ಯ ಬಜೆಟ್‍ನಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು. ರಾಜ್ಯ ಸರಕಾರದಿಂದ ನೀಡುತ್ತಿರುವ ಗೌರವಧನ ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಸಕಾರಾತ್ಮಕ ಚಿಂತನೆ ಹೊಂದಿದ್ದಾರೆ. ಈ ಬಾರಿಯ ಬಜೆಟ್‍ನಲ್ಲಿ ಈ ಬಗ್ಗೆ ನಿರ್ಧಾರ ಹೊರಬೀಳಲಿದೆ. ಹೀಗಾಗಿ ಆಶಾ ಕಾರ್ಯಕರ್ತೆಯರು ಮುಷ್ಕರ ಕೈ ಬಿಡಬೇಕು ಎಂದು ಅವರು ಮನವಿ ಮಾಡಿದರು. ಇನ್ನು ರಜೆಗಳನ್ನು ಕೇಳುವುದು ಆಶಾ ಕಾರ್ಯಕರ್ತೆಯರ ಹಕ್ಕು. ಈ ನಿಟ್ಟಿನಲ್ಲಿ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ದಿನೇಶ್ ಗುಂಡೂರಾವ್ ಭರವಸೆ ನೀಡಿದರು

ಬೇಡಿಕೆ ಈಡೇರುವವರೆಗೆ ಮುಷ್ಕರ ವಾಪಾಸ್ ಇಲ್ಲ:

ಸಚಿವರ ಭೇಟಿ ನಂತರವೂ ಸಂಘದ ಮುಖಂಡರು ಸಭೆ ನಡೆಸಿದ್ದು, ಈಗಾಗಲೇ ಈ ಎಲ್ಲ ಸಮಸ್ಯೆಗಳ ಕುರಿತು, ವಿವಿಧ ಹಂತದಲ್ಲಿ 16ಕ್ಕೂ ಹೆಚ್ಚು ಸಭೆಗಳು ನಡೆದಿವೆ. ಆದರೆ ಈ ಸಮಸ್ಯೆಗಳು ಬಗೆಹರಿದಿಲ್ಲ. ಅಲ್ಲದೇ ನಿಶ್ಚಿತವಾಗಿ 15ಸಾವಿರ ರೂ.ಗೌರವಧನವನ್ನು ನಿಗದಿ ಮಾಡಬೇಕು. ಇದನ್ನು ಒಪ್ಪುವವರೆಗೂ ಮುಷ್ಕರ ಮುಂದುವರೆಯಲಿದೆ ಎಂದು ನಿರ್ಧರಿಸಿದ್ದಾರೆ.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 8 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ