ಮುಷ್ಕರ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು: ದಿನೇಶ್ ಗುಂಡೂರಾವ್

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ನೀಡುತ್ತಿರುವ 8 ಸಾವಿರ ರೂ. ಖಚಿತ ಗೌರವಧನ ಬದಲಾಗಿ 9,500 ರೂಪಾಯಿಗಳನ್ನು ಮುಂಗಡವಾಗಿ ನೀಡಲು ಸರಕಾರ ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಫ್ರೀಡಂ ಪಾರ್ಕ್‍ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಮುಷ್ಕರ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು.ಹೆಚ್ಚಿನ ಪ್ರೋತ್ಸಾಹಧನ ಕೇಂದ್ರ ಸರಕಾರದ ಅನುದಾನದ ಮೇಲೆ ಒದಗಿಸಲಾಗುತ್ತಿದೆ.

ಆರ್.ಸಿ.ಎಚ್ ಪೊರ್ಟಲ್ ನಲ್ಲಿ ಆಶಾ ಕಾರ್ಯಕರ್ತೆಯರ ಕಾರ್ಯಚಟುವಟುಕೆಗಳ ಆಧಾರದ ಮೇಲೆ ಪ್ರೋತ್ಸಾಹಧನ ಲಭ್ಯವಾಗುವಂತದ್ದು ಎಂದರು. ಪ್ರಸ್ತುತ ಗೌರವಧನ ಹಾಗೂ ಪ್ರೋತ್ಸಾಹಧನ ಸೇರಿ ಸರಾಸರಿ ಒಬ್ಬ ಆಶಾ ಕಾರ್ಯಕರ್ತೆಗೆ ಮಾಸಿಕ 9,500 ರೂ. ಪಾವತಿ ಮಾಡಲಾಗುತ್ತಿದೆ. ಇದನ್ನು ಮುಂಗಡವಾಗಿ ಆಶಾ ಕಾರ್ಯಕರ್ತೆಯರಿಗೆ ಒದಗಿಸಲು ಸಿದ್ಧ. ಆದರೆ ಗೌರವಧನದ ಹೊರತಾಗಿ ಆಶಾ ಕಾರ್ಯಕರ್ತೆಯರಿಗೆ ಲಭ್ಯವಾಗುತ್ತಿರುವ ಪ್ರೋತ್ಸಾಹಧನವನ್ನೂ ಮಾಸಿಕ ವೇತನದ ರೂಪದಲ್ಲಿ ನಿಗದಿಪಡಿಸಿ ನೀಡುವುದು ಸದ್ಯದ ಪರಿಸ್ಥಿತಿಯಲ್ಲಿ ಕಷ್ಟ ಎಂದು ಅವರು ತಿಳಿಸಿದರು.

ಮುಂಬರುವ ರಾಜ್ಯ ಬಜೆಟ್‍ನಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು. ರಾಜ್ಯ ಸರಕಾರದಿಂದ ನೀಡುತ್ತಿರುವ ಗೌರವಧನ ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಸಕಾರಾತ್ಮಕ ಚಿಂತನೆ ಹೊಂದಿದ್ದಾರೆ. ಈ ಬಾರಿಯ ಬಜೆಟ್‍ನಲ್ಲಿ ಈ ಬಗ್ಗೆ ನಿರ್ಧಾರ ಹೊರಬೀಳಲಿದೆ. ಹೀಗಾಗಿ ಆಶಾ ಕಾರ್ಯಕರ್ತೆಯರು ಮುಷ್ಕರ ಕೈ ಬಿಡಬೇಕು ಎಂದು ಅವರು ಮನವಿ ಮಾಡಿದರು. ಇನ್ನು ರಜೆಗಳನ್ನು ಕೇಳುವುದು ಆಶಾ ಕಾರ್ಯಕರ್ತೆಯರ ಹಕ್ಕು. ಈ ನಿಟ್ಟಿನಲ್ಲಿ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ದಿನೇಶ್ ಗುಂಡೂರಾವ್ ಭರವಸೆ ನೀಡಿದರು

ಬೇಡಿಕೆ ಈಡೇರುವವರೆಗೆ ಮುಷ್ಕರ ವಾಪಾಸ್ ಇಲ್ಲ:

ಸಚಿವರ ಭೇಟಿ ನಂತರವೂ ಸಂಘದ ಮುಖಂಡರು ಸಭೆ ನಡೆಸಿದ್ದು, ಈಗಾಗಲೇ ಈ ಎಲ್ಲ ಸಮಸ್ಯೆಗಳ ಕುರಿತು, ವಿವಿಧ ಹಂತದಲ್ಲಿ 16ಕ್ಕೂ ಹೆಚ್ಚು ಸಭೆಗಳು ನಡೆದಿವೆ. ಆದರೆ ಈ ಸಮಸ್ಯೆಗಳು ಬಗೆಹರಿದಿಲ್ಲ. ಅಲ್ಲದೇ ನಿಶ್ಚಿತವಾಗಿ 15ಸಾವಿರ ರೂ.ಗೌರವಧನವನ್ನು ನಿಗದಿ ಮಾಡಬೇಕು. ಇದನ್ನು ಒಪ್ಪುವವರೆಗೂ ಮುಷ್ಕರ ಮುಂದುವರೆಯಲಿದೆ ಎಂದು ನಿರ್ಧರಿಸಿದ್ದಾರೆ.

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ…

    Spread the love

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 2 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 7 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 9 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 11 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 10 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 16 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ