ರಾಜ್ಯಸರಕಾರ ನೀಡಿದ ಆಶ್ವಾಸನೆ ಇಡೇರದ ಹಿನ್ನಲೆ ಜೂನ್ 30ರಂದು ರಾಜ್ಯವ್ಯಾಪ್ತಿ ಆಶಾ ಕಾರ್ಯಕತೆಯರ ಪ್ರತಿಭಟನೆ!

ಧಾರವಾಡ: ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜೂ.30ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಬಗ್ಗೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಚಿಂತನೆ ನಡೆಸುತ್ತಿದೆ.

ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜೂ.30ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಬಡಿಗೇರ ಹೇಳಿದರು.

ನಗರದಲ್ಲಿಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರಿಗೆ 12 ಸಾವಿರ ರೂ. ಮಾಸಿಕ ಗೌರವ ಧನ ನಿಗದಿ ಮಾಡಬೇಕು. ಈ ಬಗ್ಗೆ ಹಲವು ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಸರಕಾರ ಮಾತ್ರ ಕೇವಲ ಆಶ್ವಾಸನೆ8 ನೀಡುತ್ತಿದೆ. ಇದೀಗ ಕೊರೋನಾ ಹಾವಳಿ ಮಧ್ಯೆಯೂ ಕಾರ್ಯಕರ್ತೆಯರು ಸಮೀಕ್ಷೆ ಕಾರ್ಯದಲ್ಲಿತೊಡಗಿದ್ದಾರೆ. ಆದರೆ ಸರಕಾರ ಅವರಿಗೆ ಅಗತ್ಯ ಸುರಕ್ಷತಾ ವಸ್ತುಗಳನ್ನು ನೀಡದೆ ಅವರ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಿದೆ ಎಂದು ಆರೋಪಿಸಿದರು.

ಹೀಗಾಗಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜೂ.30ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಧಿಕಾರಿ ಕಚೇರಿ, ತಾಲೂಕು ಕೇಂದ್ರಗಳಲ್ಲಿತಹಸೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು. ನಂತರ ಜು.1ರಿಂದ 7ರವರೆಗೆ ಜನಪ್ರತಿನಿಧಿಗಳನ್ನು ಭೇಟಿ ಮಾಡಿ, ಮುಖ್ಯಮಂತ್ರಿ ಮನವೊಲಿಸುವಂತೆ ಮನವಿ ಮಾಡಲಾಗುವುದು. ಆದರೂ ಸರಕಾರ ಸಮಸ್ಯೆ ಪರಿಹರಿಸದೇ ಇದ್ದಲ್ಲಿ ಎಲ್ಲ ಆರೋಗ್ಯ ಸೇವೆಗಳನ್ನು ಬಂದ್‌ ಮಾಡಿ ಚಳವಳಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸುನಂದಾ ವಾಲೀಕಾರ, ಮಂಜುಳಾ ಸಾವಂತ, ದುರ್ಗಮ್ಮ ಹುಬ್ಬಳ್ಳಿ, ಭುವನಾ ಬಳ್ಳಾರಿ, ಸುಜಾತಾ ಕೊಟಬಾಗಿ, ಇತರರು ಸುದ್ದಿಗೋಷ್ಠಿಯಲ್ಲಿದ್ದರು.

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 16 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 53 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 35 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 42 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ