ಕೊರೋನಾ ವಿಷಾಣುವಿನ ಸಂಕಟದಿಂದಾಗಿ ಉದ್ಭವಿಸಿದ ಆಪತ್ಕಾಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪೂಜೆಯನ್ನು ಹೇಗೆ ಮಾಡಬೇಕು ?

ಪ್ರತಿವರ್ಷ ಭಾರತದಲ್ಲಿ ದೇವಸ್ಥಾನಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಉತ್ಸವವನ್ನು ದೊಡ್ಡ ಪ್ರಮಾಣದಲ್ಲಿ ಆಚರಿಸಲಾಗುತ್ತದೆ.
ಉತ್ಸವವನ್ನು ಆಚರಿಸುವಾಗ ಪ್ರಾಂತಗಳಿಗನುಸಾರ ಉತ್ಸವವನ್ನು ಆಚರಿಸುವ ಪದ್ಧತಿಯಲ್ಲಿ ಭಿನ್ನತೆ ಇರುತ್ತದೆ. ಉತ್ಸವದ ನಿಮಿತ್ತ ಬಹಳಷ್ಟು ಜನರು ಒಟ್ಟು ಸೇರಿ ಭಕ್ತಿಭಾವದಿಂದ ಈ ಉತ್ಸವವನ್ನು ಆಚರಿಸುತ್ತಾರೆ. ಈ ವರ್ಷ ಕೊರೋನಾ ವಿಷಾಣುಗಳ ಸಂಕಟದಿಂದಾಗಿ ಸಂಚಾರ ಸಾರಿಗೆ ನಿರ್ಬಂಧವಿದ್ದುದರಿಂದ ಮನೆಯಿಂದ ಹೊರಗೆ ಬರಲು ಅನೇಕ ಬಂಧನಗಳಿವೆ.

ಕೊರೋನಾದಂತಹ ಆಪತ್ಕಾಲದ ಹಿನ್ನೆಲೆಯಲ್ಲಿ ಎಲ್ಲರೂ ಸೇರಿ ಈ ಉತ್ಸವವನ್ನು ಆಚರಿಸುವಲ್ಲಿ ಮಿತಿ ಬಂದಿದೆ. ಕೊರೋನಾ ವೈರಾಣುಗಳ ಹರಡುವಿಕೆಯಿಂದಾಗಿ ಎಲ್ಲಿ ಸಂಚಾರಸಾರಿಗೆ ನಿರ್ಬಂಧವಿದೆಯೋ (ಲಾಕ್‌ಡೌನ್) ಅಲ್ಲಿ ಒಟ್ಟಾಗಿ ಸೇರಿ ಪೂಜೆ ಮಾಡುವುದು ಅಸಾಧ್ಯವಿದೆ. ಆದರೆ ಎಲ್ಲಿ ಕೊರೋನಾ ವಿಷಾಣುಗಳ ಹರಡುವಿಕೆ ಕಡಿಮೆಯಿರುವುದರಿಂದ ಸಂಚಾರಸಾರಿಗೆ ನಿರ್ಬಂಧದ ನಿಯಮವು ಕೆಲವು ಪ್ರಮಾಣದಲ್ಲಿ ಸಡಿಲ ಗೊಳಿಸಲಾಗಿದೆಯೋ, ಅಲ್ಲಿ ಸರಕಾರವು ಕೊರೋನಾ ಸಂದರ್ಭದಲ್ಲಿ ಹೇಳಿದ ಮಾರ್ಗದರ್ಶಕ ಅಂಶಗಳನ್ನು ಪಾಲಿಸಿ ಕಡಿಮೆ ಜನರು ಸೇರಿ ಈ ಜನ್ಮೋತ್ಸವವನ್ನು ಆಚರಿಸಬೇಕು. ಇದರಿಂದ ಒಟ್ಟಿಗೆ ಸೇರದಿದ್ದರೂ ನಮ್ಮ ನಮ್ಮ ಮನೆಯಲ್ಲಿಯೇ ಶ್ರೀಕೃಷ್ಣಜನ್ಮಾಷ್ಟಮಿಯ ಪೂಜೆಯನ್ನು ಹೇಗೆ ಮಾಡಬಹುದು ಎಂಬ ಬಗ್ಗೆ ಈ ಲೇಖನದಲ್ಲಿ ಮುಖ್ಯವಾಗಿ ವಿಚಾರ ಮಾಡಲಾಗಿದೆ. ಹಿಂದೂ ಧರ್ಮವು ಹೇಳಿದ ‘ಆಪದ್ಧರ್ಮದ ಭಾಗವೆಂದು ಲೇಖನದಲ್ಲಿ ವಿವೇಚನೆಯನ್ನು ಮಾಡಲಾಗಿದೆ.

ಪ್ರತಿ ವರ್ಷ ಶ್ರೀಕೃಷ್ಣಜನ್ಮಾಷ್ಟಮಿಯ ಉತ್ಸವವನ್ನು ದೊಡ್ಡ ಪ್ರಮಾಣದಲ್ಲಿ ಆಚರಿಸಲಾಗುತ್ತದೆ. ಈ ವರ್ಷ 11.8.2020 ಈ ದಿನದಂದು ‘ಶ್ರೀಕೃಷ್ಣ ಜನ್ಮಾಷ್ಟಮಿ ಇದೆ.

೧. ಶ್ರೀಕೃಷ್ಣನ ಪೂಜೆಯ ಸಮಯ : ಶ್ರೀಕೃಷ್ಣನ ಜನ್ಮದ ಸಮಯವು ರಾತ್ರಿ 12 ಗಂಟೆಗಿರುತ್ತದೆ. ಆದುದರಿಂದ ಅದಕ್ಕೂ ಮೊದಲು ಪೂಜೆಯ ಎಲ್ಲ ತಯಾರಿಯನ್ನು ಮಾಡಿಟ್ಟು ಕೊಳ್ಳಬೇಕು. ರಾತ್ರಿ 12 ಗಂಟೆಗೆ ಸಾಧ್ಯವಿದ್ದರೆ ಶ್ರೀಕೃಷ್ಣಜನ್ಮದ ಜೋಗುಳವನ್ನು (ಹಾಡನ್ನು) ಹಚ್ಚಬೇಕು.

೨. ಶ್ರೀಕೃಷ್ಣನ ಪೂಜೆ

೨ ಅ. ಶ್ರೀಕೃಷ್ಣಜನ್ಮದ ಜೋಗುಳವಾದ ನಂತರ ಶ್ರೀಕೃಷ್ಣನ ಮೂರ್ತಿ ಅಥವಾ ಚಿತ್ರದ ಪೂಜೆಯನ್ನು ಮಾಡಬೇಕು.

೨ ಆ. ಷೋಡಷೋಪಚಾರ ಪೂಜೆ : ಯಾರಿಗೆ ಶ್ರೀಕೃಷ್ಣನ ‘ಷೋಡಷೋಪಚಾರ ಪೂಜೆ’ಯನ್ನು ಮಾಡುವುದು ಸಾಧ್ಯವಿದೆಯೋ, ಅವರು ಷೋಡಷೋಪಚಾರ ಪೂಜೆಯನ್ನು ಮಾಡಬೇಕು.

೨ ಇ. ಪಂಚೋಪಚಾರ ಪೂಜೆ : ಯಾರಿಗೆ ಶ್ರೀಕೃಷ್ಣನ ‘ಷೋಡಷೋಪಚಾರ ಪೂಜೆ’ಯನ್ನು ಮಾಡುವುದು ಸಾಧ್ಯವಿಲ್ಲವೋ, ಅವರು ‘ಪಂಚೋಪಚಾರ ಪೂಜೆ’ಯನ್ನು ಮಾಡಬೇಕು. ಪೂಜೆಯನ್ನು ಮಾಡುವಾಗ ‘ಸಪರಿವಾರಾಯ ಶ್ರೀಕೃಷ್ಣಾಯ ನಮಃ |’ ಈ ನಾಮಮಂತ್ರವನ್ನು ಹೇಳುತ್ತಾ ಒಂದೊಂದು ಉಪಚಾರವನ್ನು ಶ್ರೀಕೃಷ್ಣ ನಿಗೆ ಅರ್ಪಿಸಬೇಕು. ಶ್ರೀಕೃಷ್ಣನಿಗೆ ಮೊಸರವಲಕ್ಕಿ ಮತ್ತು ಬೆಣ್ಣೆಯ ನೈವೇದ್ಯವನ್ನು ತೋರಿಸಬೇಕು. ತದನಂತರ ಶ್ರೀಕೃಷ್ಣನಿಗೆ ಆರತಿಯನ್ನು ಮಾಡಬೇಕು. (ಪಂಚೋಪಚಾರ ಪೂಜೆ : ಗಂಧ, ಅರಿಶಿಣ-ಕುಂಕುಮ, ಪುಷ್ಪ, ಧೂಪ, ದೀಪ ಮತ್ತು ನೈವೇದ್ಯ ಈ ಕ್ರಮದಲ್ಲಿ ಪೂಜೆಯನ್ನು ಮಾಡಬೇಕು.)

೩. ಶ್ರೀಕೃಷ್ಣನ ಮಾನಸಪೂಜೆ
ಏನಾದರೂ ಕಾರಣದಿಂದ ಶ್ರೀಕೃಷ್ಣನ ಪ್ರತ್ಯಕ್ಷ ಪೂಜೆಯನ್ನು ಮಾಡಲು ಸಾಧ್ಯವಿಲ್ಲದಿದ್ದರೆ, ಶ್ರೀಕೃಷ್ಣನ ‘ಮಾನಸಪೂಜೆ’ಯನ್ನು ಮಾಡಬೇಕು. (‘ಮಾನಸಪೂಜೆ’ ಎಂದರೆ ಪೂಜೆಯ ಎಲ್ಲ ಉಪಚಾರಗಳನ್ನು ಮನಸ್ಸಿನಿಂದ ಶ್ರೀಕೃಷ್ಣನಿಗೆ ಅರ್ಪಿಸುವುದು.)

೪. ಪೂಜೆಯ ನಂತರ ನಾಮಜಪ ಮಾಡುವುದು
ಪೂಜೆಯಾದ ನಂತರ ಕೆಲವು ಸಮಯ ಶ್ರೀಕೃಷ್ಣನ ‘ಓಂ ಓಂ ನಮೋ ಭಗವತೇ ವಾಸುದೇವಾಯ ನಮಃ ಓಂ ಓಂ |’ ಈ ನಾಮಜಪವನ್ನು ಮಾಡಬೇಕು.

೫. ‘ಅರ್ಜುನನಂತೆ ಅಪಾರ ಭಕ್ತಿ ನಿರ್ಮಾಣವಾಗಲಿ’, ಎಂದು ಶ್ರೀಕೃಷ್ಣನಿಗೆ ಮನಃಪೂರ್ವಕ ಪ್ರಾರ್ಥನೆ ಮಾಡುವುದು.
ಇದರ ನಂತರ ಶ್ರೀಕೃಷ್ಣನು ಶ್ರೀಮದ್ಭಗವದ್ಗೀತೆ ಯಲ್ಲಿ ನೀಡಿದ ‘ನ ಮೇ ಭಕ್ತಃ ಪ್ರಣಶ್ಯತಿ |’ ಅಂದರೆ ‘ನನ್ನ ಭಕ್ತರ ನಾಶವಾಗುವುದಿಲ್ಲ.’ ಈ ವಚನವನ್ನು ಸ್ಮರಿಸಿ ನಮ್ಮಲ್ಲಿ ‘ಅರ್ಜುನನಂತೆ ಅಪಾರ ಭಕ್ತಿ ನಿರ್ಮಾಣವಾಗಲಿ’, ಎಂದು ಶ್ರೀಕೃಷ್ಣನಿಗೆ ಮನಃಪೂರ್ವಕ ಪ್ರಾರ್ಥನೆಯನ್ನು ಮಾಡಬೇಕು.

ಸೌಜನ್ಯ : ಸನಾತನ ಸಂಸ್ಥೆ

Spread the love
  • Related Posts

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    ಮುಂಡಾಜೆ: ಬೆಳ್ತಂಗಡಿ ತಾಲೂಕಿನಲ್ಲಿ ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಗ್ರಾಮಗಳಲ್ಲಿ ಮುಂಡಾಜೆ ಗ್ರಾಮವು ಪ್ರಮುಖ ಸ್ಥಾನದಲ್ಲಿದೆ. ಮುಂಡಾಜೆ ಗ್ರಾಮದ ಸೋಮಂತಡ್ಕವು ಹಲವು ಗ್ರಾಮಗಳ ಸಂಪರ್ಕ ಕೊಂಡಿಯಾಗಿದ್ದು, ಬ್ಯಾಂಕಿಂಗ್ ಸೇವೆಗಳು, ಶಾಲಾ-ಕಾಲೇಜುಗಳು, ಆಸ್ಪತ್ರೆಗಳು ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿದೆ. ಇದರ ಪರಿಣಾಮವಾಗಿ ಈ…

    Spread the love

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    You Missed

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    • By admin
    • April 30, 2026
    • 30 views
    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 218 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 55 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 53 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 112 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 50 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ