ಕೊರೋನಾ ವಿಷಾಣುವಿನ ಸಂಕಟದಿಂದಾಗಿ ಉದ್ಭವಿಸಿದ ಆಪತ್ಕಾಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪೂಜೆಯನ್ನು ಹೇಗೆ ಮಾಡಬೇಕು ?

ಪ್ರತಿವರ್ಷ ಭಾರತದಲ್ಲಿ ದೇವಸ್ಥಾನಗಳು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಉತ್ಸವವನ್ನು ದೊಡ್ಡ ಪ್ರಮಾಣದಲ್ಲಿ ಆಚರಿಸಲಾಗುತ್ತದೆ.
ಉತ್ಸವವನ್ನು ಆಚರಿಸುವಾಗ ಪ್ರಾಂತಗಳಿಗನುಸಾರ ಉತ್ಸವವನ್ನು ಆಚರಿಸುವ ಪದ್ಧತಿಯಲ್ಲಿ ಭಿನ್ನತೆ ಇರುತ್ತದೆ. ಉತ್ಸವದ ನಿಮಿತ್ತ ಬಹಳಷ್ಟು ಜನರು ಒಟ್ಟು ಸೇರಿ ಭಕ್ತಿಭಾವದಿಂದ ಈ ಉತ್ಸವವನ್ನು ಆಚರಿಸುತ್ತಾರೆ. ಈ ವರ್ಷ ಕೊರೋನಾ ವಿಷಾಣುಗಳ ಸಂಕಟದಿಂದಾಗಿ ಸಂಚಾರ ಸಾರಿಗೆ ನಿರ್ಬಂಧವಿದ್ದುದರಿಂದ ಮನೆಯಿಂದ ಹೊರಗೆ ಬರಲು ಅನೇಕ ಬಂಧನಗಳಿವೆ.

ಕೊರೋನಾದಂತಹ ಆಪತ್ಕಾಲದ ಹಿನ್ನೆಲೆಯಲ್ಲಿ ಎಲ್ಲರೂ ಸೇರಿ ಈ ಉತ್ಸವವನ್ನು ಆಚರಿಸುವಲ್ಲಿ ಮಿತಿ ಬಂದಿದೆ. ಕೊರೋನಾ ವೈರಾಣುಗಳ ಹರಡುವಿಕೆಯಿಂದಾಗಿ ಎಲ್ಲಿ ಸಂಚಾರಸಾರಿಗೆ ನಿರ್ಬಂಧವಿದೆಯೋ (ಲಾಕ್‌ಡೌನ್) ಅಲ್ಲಿ ಒಟ್ಟಾಗಿ ಸೇರಿ ಪೂಜೆ ಮಾಡುವುದು ಅಸಾಧ್ಯವಿದೆ. ಆದರೆ ಎಲ್ಲಿ ಕೊರೋನಾ ವಿಷಾಣುಗಳ ಹರಡುವಿಕೆ ಕಡಿಮೆಯಿರುವುದರಿಂದ ಸಂಚಾರಸಾರಿಗೆ ನಿರ್ಬಂಧದ ನಿಯಮವು ಕೆಲವು ಪ್ರಮಾಣದಲ್ಲಿ ಸಡಿಲ ಗೊಳಿಸಲಾಗಿದೆಯೋ, ಅಲ್ಲಿ ಸರಕಾರವು ಕೊರೋನಾ ಸಂದರ್ಭದಲ್ಲಿ ಹೇಳಿದ ಮಾರ್ಗದರ್ಶಕ ಅಂಶಗಳನ್ನು ಪಾಲಿಸಿ ಕಡಿಮೆ ಜನರು ಸೇರಿ ಈ ಜನ್ಮೋತ್ಸವವನ್ನು ಆಚರಿಸಬೇಕು. ಇದರಿಂದ ಒಟ್ಟಿಗೆ ಸೇರದಿದ್ದರೂ ನಮ್ಮ ನಮ್ಮ ಮನೆಯಲ್ಲಿಯೇ ಶ್ರೀಕೃಷ್ಣಜನ್ಮಾಷ್ಟಮಿಯ ಪೂಜೆಯನ್ನು ಹೇಗೆ ಮಾಡಬಹುದು ಎಂಬ ಬಗ್ಗೆ ಈ ಲೇಖನದಲ್ಲಿ ಮುಖ್ಯವಾಗಿ ವಿಚಾರ ಮಾಡಲಾಗಿದೆ. ಹಿಂದೂ ಧರ್ಮವು ಹೇಳಿದ ‘ಆಪದ್ಧರ್ಮದ ಭಾಗವೆಂದು ಲೇಖನದಲ್ಲಿ ವಿವೇಚನೆಯನ್ನು ಮಾಡಲಾಗಿದೆ.

ಪ್ರತಿ ವರ್ಷ ಶ್ರೀಕೃಷ್ಣಜನ್ಮಾಷ್ಟಮಿಯ ಉತ್ಸವವನ್ನು ದೊಡ್ಡ ಪ್ರಮಾಣದಲ್ಲಿ ಆಚರಿಸಲಾಗುತ್ತದೆ. ಈ ವರ್ಷ 11.8.2020 ಈ ದಿನದಂದು ‘ಶ್ರೀಕೃಷ್ಣ ಜನ್ಮಾಷ್ಟಮಿ ಇದೆ.

೧. ಶ್ರೀಕೃಷ್ಣನ ಪೂಜೆಯ ಸಮಯ : ಶ್ರೀಕೃಷ್ಣನ ಜನ್ಮದ ಸಮಯವು ರಾತ್ರಿ 12 ಗಂಟೆಗಿರುತ್ತದೆ. ಆದುದರಿಂದ ಅದಕ್ಕೂ ಮೊದಲು ಪೂಜೆಯ ಎಲ್ಲ ತಯಾರಿಯನ್ನು ಮಾಡಿಟ್ಟು ಕೊಳ್ಳಬೇಕು. ರಾತ್ರಿ 12 ಗಂಟೆಗೆ ಸಾಧ್ಯವಿದ್ದರೆ ಶ್ರೀಕೃಷ್ಣಜನ್ಮದ ಜೋಗುಳವನ್ನು (ಹಾಡನ್ನು) ಹಚ್ಚಬೇಕು.

೨. ಶ್ರೀಕೃಷ್ಣನ ಪೂಜೆ

೨ ಅ. ಶ್ರೀಕೃಷ್ಣಜನ್ಮದ ಜೋಗುಳವಾದ ನಂತರ ಶ್ರೀಕೃಷ್ಣನ ಮೂರ್ತಿ ಅಥವಾ ಚಿತ್ರದ ಪೂಜೆಯನ್ನು ಮಾಡಬೇಕು.

೨ ಆ. ಷೋಡಷೋಪಚಾರ ಪೂಜೆ : ಯಾರಿಗೆ ಶ್ರೀಕೃಷ್ಣನ ‘ಷೋಡಷೋಪಚಾರ ಪೂಜೆ’ಯನ್ನು ಮಾಡುವುದು ಸಾಧ್ಯವಿದೆಯೋ, ಅವರು ಷೋಡಷೋಪಚಾರ ಪೂಜೆಯನ್ನು ಮಾಡಬೇಕು.

೨ ಇ. ಪಂಚೋಪಚಾರ ಪೂಜೆ : ಯಾರಿಗೆ ಶ್ರೀಕೃಷ್ಣನ ‘ಷೋಡಷೋಪಚಾರ ಪೂಜೆ’ಯನ್ನು ಮಾಡುವುದು ಸಾಧ್ಯವಿಲ್ಲವೋ, ಅವರು ‘ಪಂಚೋಪಚಾರ ಪೂಜೆ’ಯನ್ನು ಮಾಡಬೇಕು. ಪೂಜೆಯನ್ನು ಮಾಡುವಾಗ ‘ಸಪರಿವಾರಾಯ ಶ್ರೀಕೃಷ್ಣಾಯ ನಮಃ |’ ಈ ನಾಮಮಂತ್ರವನ್ನು ಹೇಳುತ್ತಾ ಒಂದೊಂದು ಉಪಚಾರವನ್ನು ಶ್ರೀಕೃಷ್ಣ ನಿಗೆ ಅರ್ಪಿಸಬೇಕು. ಶ್ರೀಕೃಷ್ಣನಿಗೆ ಮೊಸರವಲಕ್ಕಿ ಮತ್ತು ಬೆಣ್ಣೆಯ ನೈವೇದ್ಯವನ್ನು ತೋರಿಸಬೇಕು. ತದನಂತರ ಶ್ರೀಕೃಷ್ಣನಿಗೆ ಆರತಿಯನ್ನು ಮಾಡಬೇಕು. (ಪಂಚೋಪಚಾರ ಪೂಜೆ : ಗಂಧ, ಅರಿಶಿಣ-ಕುಂಕುಮ, ಪುಷ್ಪ, ಧೂಪ, ದೀಪ ಮತ್ತು ನೈವೇದ್ಯ ಈ ಕ್ರಮದಲ್ಲಿ ಪೂಜೆಯನ್ನು ಮಾಡಬೇಕು.)

೩. ಶ್ರೀಕೃಷ್ಣನ ಮಾನಸಪೂಜೆ
ಏನಾದರೂ ಕಾರಣದಿಂದ ಶ್ರೀಕೃಷ್ಣನ ಪ್ರತ್ಯಕ್ಷ ಪೂಜೆಯನ್ನು ಮಾಡಲು ಸಾಧ್ಯವಿಲ್ಲದಿದ್ದರೆ, ಶ್ರೀಕೃಷ್ಣನ ‘ಮಾನಸಪೂಜೆ’ಯನ್ನು ಮಾಡಬೇಕು. (‘ಮಾನಸಪೂಜೆ’ ಎಂದರೆ ಪೂಜೆಯ ಎಲ್ಲ ಉಪಚಾರಗಳನ್ನು ಮನಸ್ಸಿನಿಂದ ಶ್ರೀಕೃಷ್ಣನಿಗೆ ಅರ್ಪಿಸುವುದು.)

೪. ಪೂಜೆಯ ನಂತರ ನಾಮಜಪ ಮಾಡುವುದು
ಪೂಜೆಯಾದ ನಂತರ ಕೆಲವು ಸಮಯ ಶ್ರೀಕೃಷ್ಣನ ‘ಓಂ ಓಂ ನಮೋ ಭಗವತೇ ವಾಸುದೇವಾಯ ನಮಃ ಓಂ ಓಂ |’ ಈ ನಾಮಜಪವನ್ನು ಮಾಡಬೇಕು.

೫. ‘ಅರ್ಜುನನಂತೆ ಅಪಾರ ಭಕ್ತಿ ನಿರ್ಮಾಣವಾಗಲಿ’, ಎಂದು ಶ್ರೀಕೃಷ್ಣನಿಗೆ ಮನಃಪೂರ್ವಕ ಪ್ರಾರ್ಥನೆ ಮಾಡುವುದು.
ಇದರ ನಂತರ ಶ್ರೀಕೃಷ್ಣನು ಶ್ರೀಮದ್ಭಗವದ್ಗೀತೆ ಯಲ್ಲಿ ನೀಡಿದ ‘ನ ಮೇ ಭಕ್ತಃ ಪ್ರಣಶ್ಯತಿ |’ ಅಂದರೆ ‘ನನ್ನ ಭಕ್ತರ ನಾಶವಾಗುವುದಿಲ್ಲ.’ ಈ ವಚನವನ್ನು ಸ್ಮರಿಸಿ ನಮ್ಮಲ್ಲಿ ‘ಅರ್ಜುನನಂತೆ ಅಪಾರ ಭಕ್ತಿ ನಿರ್ಮಾಣವಾಗಲಿ’, ಎಂದು ಶ್ರೀಕೃಷ್ಣನಿಗೆ ಮನಃಪೂರ್ವಕ ಪ್ರಾರ್ಥನೆಯನ್ನು ಮಾಡಬೇಕು.

ಸೌಜನ್ಯ : ಸನಾತನ ಸಂಸ್ಥೆ

Spread the love
  • Related Posts

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ ಜ. 12 ರಂದು ಜರಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ ಮಕ್ಕಳ ಗ್ರಾಮ ಸಭೆಯ ಮಹತ್ವ ಮಕ್ಕಳ ಹಕ್ಕುಗಳು ಮತ್ತು ಸಮಸ್ಯೆಗಳು ಸೂಕ್ತ ಪರಿಹಾರದ ಬಗ್ಗೆ…

    Spread the love

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    Ujire: ಜನವರಿ 11ನೇ ಆದಿತ್ಯವಾರದಂದು ಬೆಲಾಲು ಗುತ್ತು ಮನೆಯಲ್ಲಿ ಇದೇ ಬರುವ 24ನೇ ತಾರೀಕು ಶನಿವಾರದಂದು ನಡೆಯುವ ರಾಜನ್ ದೈವವಾದ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ” ಕಲ್ಕುಡ ಕಲ್ಲುರ್ಟಿ ದೈವಗಳ ಉತ್ಸವ ಹಾಗೂ ಮಾರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ…

    Spread the love

    You Missed

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    • By admin
    • January 12, 2026
    • 12 views
    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    • By admin
    • January 12, 2026
    • 16 views
    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    • By admin
    • January 10, 2026
    • 36 views
    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    • By admin
    • January 10, 2026
    • 101 views
    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    • By admin
    • January 10, 2026
    • 87 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    • By admin
    • January 8, 2026
    • 40 views
    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ