ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು.

ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭದ್ರತಾ ಸಂಪುಟ ಸಮಿತಿಯು ಪಾಕಿಸ್ತಾನದೊಂದಿಗಿನ ಸಿಂಧೂ ನದಿ ಒಪ್ಪಂದವನ್ನು ರದ್ದುಗೊಳಿಸಲು ಮತ್ತು ಅಟ್ಟಾರಿ ಗಡಿಯನ್ನು ಮುಚ್ಚಲು ನಿರ್ಧರಿಸಿದೆ. ಪಾಕಿಸ್ತಾನದ ರಾಜತಾಂತ್ರಿಕರನ್ನು ಹೊರಹಾಕಲು ಮತ್ತು ಪಾಕಿಸ್ತಾನಿ ಪ್ರಜೆಗಳಿಗೆ 48 ಗಂಟೆಗಳ ಒಳಗೆ ದೇಶ ಬಿಡಲು ಸೂಚಿಸಲಾಗಿದೆ.

ನಾಳೆ ಸರ್ವಪಕ್ಷ ಸಭೆ: ಪೆಹಲ್ಗಾಮ್‌ ದಾಳಿಯ ಬಗ್ಗೆ ನಾಳೆ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದಿದ್ದು, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಇದರ ನೇತೃತ್ವ ವಹಿಸಿಕೊಂಡಿದ್ದಾರೆ.ಈ ಭಯೋತ್ಪಾದಕ ದಾಳಿಯ ಗಂಭೀರತೆಯನ್ನು ಗುರುತಿಸಿ, ಭದ್ರತಾ ಸಂಪುಟ ಸಮಿತಿ (CCS) ಈ ಕೆಳಗಿನ ಕ್ರಮಗಳನ್ನು ನಿರ್ಧರಿಸಿದೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

1. ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ತ್ಯಜಿಸುವವರೆಗೆ 1960 ರ ಸಿಂಧೂ ಜಲ ಒಪ್ಪಂದವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗುತ್ತದೆ.

2. ಭಾರತದ ಹಾಗೂ ಪಾಕಿಸ್ತಾನದ ನಡುವೆ ಇರುವ ಅಟ್ಟಾರಿ ಸಮಗ್ರ ಚೆಕ್‌ಪೋಸ್ಟ್‌ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚಲಾಗುತ್ತದೆ. ಮಾನ್ಯ ಒಪ್ಪಿಗೆಯೊಂದಿಗೆ ಇಲ್ಲಿಂದ ಗಡಿಯನ್ನು ದಾಟಿದವರು ಮೇ 1 ರ ಒಳಗಾಗಿ ಈ ಮಾರ್ಗದ ಮೂಲಕವೇ ವಾಪಾಸಗಬೇಕು ಎಂದು ತಿಳಿಸಲಾಗಿದೆ.

3. SAARC ವೀಸಾ ವಿನಾಯಿತಿ ಯೋಜನೆಯಡಿಯಲ್ಲಿ ಪಾಕಿಸ್ತಾನಿ ಪ್ರಜೆಗಳಿಗೆ ಭಾರತಕ್ಕೆ ಪ್ರಯಾಣಿಸಲು ಅನುಮತಿ ಇರುವುದಿಲ್ಲ. ಪಾಕಿಸ್ತಾನಿ ಪ್ರಜೆಗಳಿಗೆ ಹಿಂದೆ ನೀಡಲಾದ ಯಾವುದೇ SPES ವೀಸಾಗಳನ್ನು ರದ್ದುಗೊಳಿಸಲಾಗುತ್ತದೆ. SPES ವೀಸಾದಡಿಯಲ್ಲಿ ಭಾರತದಲ್ಲಿರುವ ಯಾವುದೇ ಪಾಕಿಸ್ತಾನಿ ಪ್ರಜೆಗೆ ಪ್ರಸ್ತುತ ಭಾರತವನ್ನು ತೊರೆಯಲು 48 ಗಂಟೆಗಳ ಕಾಲಾವಕಾಶವಿದೆ.

4.ನವದೆಹಲಿಯಲ್ಲಿರುವ ಪಾಕಿಸ್ತಾನಿ ಹೈಕಮಿಷನ್‌ನಲ್ಲಿರುವ ರಕ್ಷಣಾ, ಮಿಲಿಟರಿ, ನೌಕಾ ಮತ್ತು ವಾಯು ಸಲಹೆಗಾರರನ್ನು ಪರ್ಸನಾ ನಾನ್ ಗ್ರಾಟಾ ಎಂದು ಘೋಷಿಸಲಾಗಿದೆ. ಅವರು ಭಾರತವನ್ನು ಬಿಡಲು ಒಂದು ವಾರ ಕಾಲಾವಕಾಶ ನೀಡಲಾಗಿದೆ.

5. ಪಾಕಿಸ್ತಾದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್‌ನ ಸೇನಾಪಡೆ, ನೌಕಾಪಡೆ ಮತ್ತು ವಾಯುಪಡೆಯ ಅಧಿಕಾರಿಗಳನ್ನು ಭಾರತ ವಾಪಾಸ್‌ ಕರೆಸಿಕೊಳ್ಳಲಿದೆ. ಆಯಾ ಹೈಕಮಿಷನ್‌ಗಳಲ್ಲಿನ ಈ ಹುದ್ದೆಗಳನ್ನು ರದ್ದುಗೊಳಿಸಲಾಗಿದೆ.

ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಎಸ್ ಜೈಶಂಕರ್ ಮತ್ತು ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವಾರು ನಾಯಕರು ಪ್ರಧಾನಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದರು.

Spread the love
  • Related Posts

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    You Missed

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 6 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 8 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 6 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 9 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ