ಅಯ್ಯೋಧ್ಯಾಪುರದಲ್ಲಿ ವಿರಾಜಮಾನರಾದ ಪ್ರಭು ಶ್ರೀರಾಮಚಂದ್ರ, ಭಕ್ತಿ ಭಾವದಿಂದ ಬಹುಕಾಲದ ಕನಸು ನನಸಾದ ಸಂಭ್ರಮದಲ್ಲಿ ಭಕ್ತಗಣ

ಅಯೋಧ್ಯೆ: ಯುಗಗಳ ಹಿಂದೆ ಅಯೋಧ್ಯೆಯಲ್ಲಿ ದಶರಥನ ಪುಣ್ಯಧಾಮದಲ್ಲಿ ಅವತಾರವೆತ್ತಿದ ಸೂರ್ಯ ವಶಂಜ, ರಘುಕುಲ ತಿಲಕ, ಮರ್ಯಾದಾ ಪುರುಷೋತ್ತಮ ಇಂದು ಕಲಿಯುಗದಲ್ಲಿ ಮತ್ತೆ ಅವತರಿಸಿದ್ದಾನೆ. ಶತ ಶತಮಾನಗಳ ಕನಸು, ಕೋಟ್ಯಂತರ ರಾಮ ಭಕ್ತರ ಅವಿರತ ಹಾರೈಕೆ, ಅದೆಷ್ಟೋ ಕರಸೇವಕರ ಪರಿಶ್ರಮದ ಫಲವಿಂದು ಭರತ ಖಂಡದ ಪುಣ್ಯ ಪುರ ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲ ರಾಮ ಮೂರ್ತಿಗೆ ಅಭಿಜಿನ್ ಸುಮುಹೂರ್ತದಲ್ಲಿ ಪ್ರಾಣ ಪ್ರತಿಷ್ಠೆ ನಡೆದಿದೆ.

ಶತಮಾನಗಳಿಂದ ನಡೆದು ಬಂದ ರಾಮ ಜನ್ಮಭೂಮಿ ವಿವಾದ ಇಂದಿಗೆ ಅಧಿಕೃತವಾಗಿ ಕೊನೆಯಾಗಿದೆ. ತ್ರೇತಾಯುಗದಲ್ಲಿ ದಶರಥ- ಕೌಸಲ್ಯಾ ನಂದನನಾಗಿ ನಡೆದಾಡಿದ್ದ ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಇದೀಗ ಅದೇ ರಾಮನಿಗೆ ಭವ್ಯ ಮಂದಿರ ಲೋಕಾಪರ್ಣೆಯಾಗಿದೆ. 2.7 ಏಕರೆ ವಿಸ್ತೀರ್ಣದ ರಾಮ ಮಂದಿರದಲ್ಲಿ 51 ಇಂಚು ಎತ್ತರದ ಶ್ರೀಬಾಲರಾಮನ ಮೂರ್ತಿಗೆ ಪ್ರಾಣ ನೀಡಲಾಗಿದೆ. ಈ ಮೂಲಕ ಶ್ರೀರಾಮನ ದಿವ್ಯದೃಷ್ಠಿ ಮನುಕುಲದ ಮೇಲೆ ಹರಿದಿದೆ.


ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಾಲರಾಮನ ಪ್ರಾಣಪ್ರತಿಷ್ಠೆಯಲ್ಲಿ ಭಾಗವಹಿಸಿದ್ದಾರೆ. ಸುಮಾರು ಏಳು ಸಾವಿರ ಮಂದಿ ವಿಶೇಷ ಆಹ್ವಾನಿತರ ಸಮ್ಮುಖದಲ್ಲಿ, ಕೋಟ್ಯಂತರ ಜನರು ನೇರಪ್ರಸಾರದಲ್ಲಿ ನೋಡುತ್ತಿದ್ದಂತೆ ಕೋಟಿ ಕೋಟಿ ಜನರ ಹೃದಯ ಕಮಲದಲ್ಲಿ ನೆಲೆನಿಂತಿರುವ ಪ್ರಭು ರಾಮ ಕಣ್ಣರಳಿಸಿ ದರ್ಶನ ನೀಡಿದ್ದಾನೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ