ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಮಂದಿರಕ್ಕೆ ಬೆಳ್ಳಿ ಇಟ್ಟಿಗೆಯಿಂದ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ

ಅಯೋಧ್ಯೆ : ಕೋಟ್ಯಾಂತರ ಭಾರತೀಯರ ಪಾಲಿಗೆ ಇಂದು ಐತಿಹಾಸಿಕ ಕ್ಷಣ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದಲ್ಲಿ ಭೂಮಿ ಪೂಜೆಯನ್ನು ನೆರವೇರಿಸಿ ಶಿಲಾನ್ಯಾಸ ಮಾಡಿದರು.

ಮಧ್ಯಾಹ್ನ 12.44ರ ಶುಭ ಮುಹೂರ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ್ದಾರೆ. ಈ ಮೂಲಕ ಲಕ್ಷಾಂತರ ರಾಮಭಕ್ತರ ಐದು ದಶಕಗಳ ಕನಸು ನನಸಾಗಿದೆ. ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ 6 ವರ್ಷಗಳ ಕಾಲ ಅಯೋಧ್ಯೆಗೆ ನರೇಂದ್ರ ಮೋದಿ ಅವರು ಭೇಟಿಕೊಟ್ಟಿರಲಿಲ್ಲ. ಇದೀಗ ತಮ್ಮ ಶಪತವನ್ನು ಈಡೇರಿಸಿಕೊಂಡಿದ್ದು, ಕೊಟ್ಟ ಭರವಸೆಯಂತೆಯೇ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ನೀಡಿದ್ದಾರೆ.

ಪ್ರಧಾನಿ ಮೋದಿ ಅವರು ರಾಮಮಂದಿರದ ಶಿಲಾನ್ಯಾಸಕ್ಕೂ ಮೊದಲು ದೇವ ವೃಕ್ಷವೆಂದು ಕರೆಯಲ್ಪಡುವ ಕೃಷ್ಣಪ್ರಿಯ ಪಾರಿಜಾತ ಗಿಡವೊಂದನ್ನು ನೆಡುವ ಮೂಲಕ ಭೂಮಿ ಪೂಜೆಯನ್ನು ನೆರವೇರಿಸಿದ್ದಾರೆ. ದೆಹಲಿಯಿಂದ ಅಯೋಧ್ಯೆಗೆ ಆಗಮಿಸುವ ಮೊದಲು ನರೇಂದ್ರ ಮೋದಿ ಅವರು ಹನುಮಾನ್ ಗಢಿ ದೇವಾಲಯಕ್ಕೆ ಭೇಟಿ ನೀಡಿದ್ರು, ನಂತರ ರಾಮಲಲ್ಲಾ ದೇಗುಲದಲ್ಲಿ ದರ್ಶನ ಪಡೆದಿದ್ದರು.

ಶ್ರೀ ರಾಮಚಂದ್ರ ಪರಿವರ್ತನೆಯ ಪ್ರತಿಪಾದಕ, ಶ್ರೀರಾಮನು ವಿರೋಧದ ಬದಲಾಗಿ ನಮಗೆ ಬೋಧ, ಶೋಧಗಳ ದಾರಿ ತೋರಿಸಿದ್ದಾನೆ. ಆತನ ಜೀವನಾದರ್ಶಗಳನ್ನು ಪಾಲಿಸುತ್ತ ನಾವೆಲ್ಲರೂ ಸ್ವಾವಲಂಬಿ ಭಾರತವನ್ನು ನಿರ್ಮಿಸೋಣವೆಂದು ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿದ್ದಾರೆ.

ಶ್ರೀರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಯುಗಯುಗ ಗಳ ತನಕ ಈ ರಾಮಮಂದಿರ ಜಗತ್ತಿಗೆ ಮಾನವತೆಯ ಮಾರ್ಗದರ್ಶನ ಮಾಡಲಿದೆ. ಸದ್ಯ ನಾವೆಲ್ಲರೂ ಮುನ್ನಡೆಯಬೇಕು. ಭಾರತವೂ ಮುನ್ನಡೆಯ ಬೇಕು. ಸದ್ಯದ ಪರಿಸ್ಥಿತಿಯಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಮಾಡಬೇಕು. ಎಲ್ಲರಿಗೂ ಆರೋಗ್ಯ ನೀಡುವಂತೆ ಶ್ರೀರಾಮಚಂದ್ರ, ಸೀತಾದೇವಿಯರಲ್ಲಿ ಬೇಡಿಕೊಳ್ಳುತ್ತೇವೆ ಎಂದಿದ್ದಾರೆ.

ಅನೇಕತೆಯಲ್ಲಿ ಏಕತೆಯನ್ನು ತಂದುಕೊಡಬಲ್ಲವನು ರಾಮ. ಪ್ರತಿಯೊಂದು ಸಮುದಾಯ, ದೇಶದವರೂ ರಾಮ. ರಾಮಾಯಣದ ಜತೆಗೆ ನಂಟು ಹೊಂದಿದ್ದಾರೆ. ಭಾರತದಲ್ಲೇ ಒಂದೊಂದು ರಾಜ್ಯದಲ್ಲಿ ಒಂದೊಂದು ರಾಮಾಯಣದ ಕಥೆ ಸಿಗುತ್ತದೆ. ವಿದೇಶಗಳಲ್ಲೂ ರಾಮಕಥಾ ವಿವರಣೆ, ರಾಮಾಯಣದ ವಿವರಣೆ ಸಿಗುತ್ತದೆ. ನಮ್ಮ ಅರಿವು, ಜೀವನಾದರ್ಶಗಳು ಜಗತ್ತಿನಾದ್ಯಂತ ಹೇಗೆ ಪಸರಿಸಿದೆ ನೋಡಿ. ಅಯೋಧ್ಯಾ ಕೇಂದ್ರ ಸ್ಥಾನವಾಗಿ ಎಲ್ಲೆಲ್ಲಿ ರಾಮ, ರಾಮಾಯಣ ಪಸರಿಸಿಕೊಂಡಿದೆಯೋ ಅವೆಲ್ಲವನ್ನೂ ಜೋಡಿಸುವ ಸರ್ಕೀಟ್ ರಚನೆಯಾಗಲಿದೆ ಎಂದಿದ್ದಾರೆ.

ಇದೊಂದು ಐತಿಹಾಸಿಕ ದಿನ. ದೀರ್ಘಾವಧಿಗೆ ಈ ದಿನ ಸ್ಮರಣೀಯವಾಗಿ ಉಳಿಯಲಿದೆ. ರಾಮಮಂದಿರ ನಿರ್ಮಾಣವಾಗುವುದೆಂಬ ವಿಶ್ವಾಸವಿದೆ. ಅದೇ ರೀತಿ ಭಾರತದಲ್ಲಿ ರಾಮರಾಜ್ಯವೂ ಸ್ಥಾಪನೆಯಾಗಲಿದೆ ಎಂದ ಯೋಗ ಗುರು ಬಾಬಾ ರಾಮದೇವ್ ಅವರು ಹೇಳಿದ್ದಾರೆ.

ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲದಾಸ್, ಉತ್ತರಪ್ರದೇಶ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತ್ರವೇ ಶಿಲಾನ್ಯಾಸದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 150 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 286 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 192 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 295 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 155 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 88 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ