ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಮಂದಿರಕ್ಕೆ ಬೆಳ್ಳಿ ಇಟ್ಟಿಗೆಯಿಂದ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ

ಅಯೋಧ್ಯೆ : ಕೋಟ್ಯಾಂತರ ಭಾರತೀಯರ ಪಾಲಿಗೆ ಇಂದು ಐತಿಹಾಸಿಕ ಕ್ಷಣ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದಲ್ಲಿ ಭೂಮಿ ಪೂಜೆಯನ್ನು ನೆರವೇರಿಸಿ ಶಿಲಾನ್ಯಾಸ ಮಾಡಿದರು.

ಮಧ್ಯಾಹ್ನ 12.44ರ ಶುಭ ಮುಹೂರ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ್ದಾರೆ. ಈ ಮೂಲಕ ಲಕ್ಷಾಂತರ ರಾಮಭಕ್ತರ ಐದು ದಶಕಗಳ ಕನಸು ನನಸಾಗಿದೆ. ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ 6 ವರ್ಷಗಳ ಕಾಲ ಅಯೋಧ್ಯೆಗೆ ನರೇಂದ್ರ ಮೋದಿ ಅವರು ಭೇಟಿಕೊಟ್ಟಿರಲಿಲ್ಲ. ಇದೀಗ ತಮ್ಮ ಶಪತವನ್ನು ಈಡೇರಿಸಿಕೊಂಡಿದ್ದು, ಕೊಟ್ಟ ಭರವಸೆಯಂತೆಯೇ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ನೀಡಿದ್ದಾರೆ.

ಪ್ರಧಾನಿ ಮೋದಿ ಅವರು ರಾಮಮಂದಿರದ ಶಿಲಾನ್ಯಾಸಕ್ಕೂ ಮೊದಲು ದೇವ ವೃಕ್ಷವೆಂದು ಕರೆಯಲ್ಪಡುವ ಕೃಷ್ಣಪ್ರಿಯ ಪಾರಿಜಾತ ಗಿಡವೊಂದನ್ನು ನೆಡುವ ಮೂಲಕ ಭೂಮಿ ಪೂಜೆಯನ್ನು ನೆರವೇರಿಸಿದ್ದಾರೆ. ದೆಹಲಿಯಿಂದ ಅಯೋಧ್ಯೆಗೆ ಆಗಮಿಸುವ ಮೊದಲು ನರೇಂದ್ರ ಮೋದಿ ಅವರು ಹನುಮಾನ್ ಗಢಿ ದೇವಾಲಯಕ್ಕೆ ಭೇಟಿ ನೀಡಿದ್ರು, ನಂತರ ರಾಮಲಲ್ಲಾ ದೇಗುಲದಲ್ಲಿ ದರ್ಶನ ಪಡೆದಿದ್ದರು.

ಶ್ರೀ ರಾಮಚಂದ್ರ ಪರಿವರ್ತನೆಯ ಪ್ರತಿಪಾದಕ, ಶ್ರೀರಾಮನು ವಿರೋಧದ ಬದಲಾಗಿ ನಮಗೆ ಬೋಧ, ಶೋಧಗಳ ದಾರಿ ತೋರಿಸಿದ್ದಾನೆ. ಆತನ ಜೀವನಾದರ್ಶಗಳನ್ನು ಪಾಲಿಸುತ್ತ ನಾವೆಲ್ಲರೂ ಸ್ವಾವಲಂಬಿ ಭಾರತವನ್ನು ನಿರ್ಮಿಸೋಣವೆಂದು ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿದ್ದಾರೆ.

ಶ್ರೀರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಯುಗಯುಗ ಗಳ ತನಕ ಈ ರಾಮಮಂದಿರ ಜಗತ್ತಿಗೆ ಮಾನವತೆಯ ಮಾರ್ಗದರ್ಶನ ಮಾಡಲಿದೆ. ಸದ್ಯ ನಾವೆಲ್ಲರೂ ಮುನ್ನಡೆಯಬೇಕು. ಭಾರತವೂ ಮುನ್ನಡೆಯ ಬೇಕು. ಸದ್ಯದ ಪರಿಸ್ಥಿತಿಯಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಮಾಡಬೇಕು. ಎಲ್ಲರಿಗೂ ಆರೋಗ್ಯ ನೀಡುವಂತೆ ಶ್ರೀರಾಮಚಂದ್ರ, ಸೀತಾದೇವಿಯರಲ್ಲಿ ಬೇಡಿಕೊಳ್ಳುತ್ತೇವೆ ಎಂದಿದ್ದಾರೆ.

ಅನೇಕತೆಯಲ್ಲಿ ಏಕತೆಯನ್ನು ತಂದುಕೊಡಬಲ್ಲವನು ರಾಮ. ಪ್ರತಿಯೊಂದು ಸಮುದಾಯ, ದೇಶದವರೂ ರಾಮ. ರಾಮಾಯಣದ ಜತೆಗೆ ನಂಟು ಹೊಂದಿದ್ದಾರೆ. ಭಾರತದಲ್ಲೇ ಒಂದೊಂದು ರಾಜ್ಯದಲ್ಲಿ ಒಂದೊಂದು ರಾಮಾಯಣದ ಕಥೆ ಸಿಗುತ್ತದೆ. ವಿದೇಶಗಳಲ್ಲೂ ರಾಮಕಥಾ ವಿವರಣೆ, ರಾಮಾಯಣದ ವಿವರಣೆ ಸಿಗುತ್ತದೆ. ನಮ್ಮ ಅರಿವು, ಜೀವನಾದರ್ಶಗಳು ಜಗತ್ತಿನಾದ್ಯಂತ ಹೇಗೆ ಪಸರಿಸಿದೆ ನೋಡಿ. ಅಯೋಧ್ಯಾ ಕೇಂದ್ರ ಸ್ಥಾನವಾಗಿ ಎಲ್ಲೆಲ್ಲಿ ರಾಮ, ರಾಮಾಯಣ ಪಸರಿಸಿಕೊಂಡಿದೆಯೋ ಅವೆಲ್ಲವನ್ನೂ ಜೋಡಿಸುವ ಸರ್ಕೀಟ್ ರಚನೆಯಾಗಲಿದೆ ಎಂದಿದ್ದಾರೆ.

ಇದೊಂದು ಐತಿಹಾಸಿಕ ದಿನ. ದೀರ್ಘಾವಧಿಗೆ ಈ ದಿನ ಸ್ಮರಣೀಯವಾಗಿ ಉಳಿಯಲಿದೆ. ರಾಮಮಂದಿರ ನಿರ್ಮಾಣವಾಗುವುದೆಂಬ ವಿಶ್ವಾಸವಿದೆ. ಅದೇ ರೀತಿ ಭಾರತದಲ್ಲಿ ರಾಮರಾಜ್ಯವೂ ಸ್ಥಾಪನೆಯಾಗಲಿದೆ ಎಂದ ಯೋಗ ಗುರು ಬಾಬಾ ರಾಮದೇವ್ ಅವರು ಹೇಳಿದ್ದಾರೆ.

ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲದಾಸ್, ಉತ್ತರಪ್ರದೇಶ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತ್ರವೇ ಶಿಲಾನ್ಯಾಸದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    • By admin
    • September 15, 2026
    • 0 views

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ