ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಮಂದಿರಕ್ಕೆ ಬೆಳ್ಳಿ ಇಟ್ಟಿಗೆಯಿಂದ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ

ಅಯೋಧ್ಯೆ : ಕೋಟ್ಯಾಂತರ ಭಾರತೀಯರ ಪಾಲಿಗೆ ಇಂದು ಐತಿಹಾಸಿಕ ಕ್ಷಣ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದಲ್ಲಿ ಭೂಮಿ ಪೂಜೆಯನ್ನು ನೆರವೇರಿಸಿ ಶಿಲಾನ್ಯಾಸ ಮಾಡಿದರು.

ಮಧ್ಯಾಹ್ನ 12.44ರ ಶುಭ ಮುಹೂರ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ್ದಾರೆ. ಈ ಮೂಲಕ ಲಕ್ಷಾಂತರ ರಾಮಭಕ್ತರ ಐದು ದಶಕಗಳ ಕನಸು ನನಸಾಗಿದೆ. ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ 6 ವರ್ಷಗಳ ಕಾಲ ಅಯೋಧ್ಯೆಗೆ ನರೇಂದ್ರ ಮೋದಿ ಅವರು ಭೇಟಿಕೊಟ್ಟಿರಲಿಲ್ಲ. ಇದೀಗ ತಮ್ಮ ಶಪತವನ್ನು ಈಡೇರಿಸಿಕೊಂಡಿದ್ದು, ಕೊಟ್ಟ ಭರವಸೆಯಂತೆಯೇ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ನೀಡಿದ್ದಾರೆ.

ಪ್ರಧಾನಿ ಮೋದಿ ಅವರು ರಾಮಮಂದಿರದ ಶಿಲಾನ್ಯಾಸಕ್ಕೂ ಮೊದಲು ದೇವ ವೃಕ್ಷವೆಂದು ಕರೆಯಲ್ಪಡುವ ಕೃಷ್ಣಪ್ರಿಯ ಪಾರಿಜಾತ ಗಿಡವೊಂದನ್ನು ನೆಡುವ ಮೂಲಕ ಭೂಮಿ ಪೂಜೆಯನ್ನು ನೆರವೇರಿಸಿದ್ದಾರೆ. ದೆಹಲಿಯಿಂದ ಅಯೋಧ್ಯೆಗೆ ಆಗಮಿಸುವ ಮೊದಲು ನರೇಂದ್ರ ಮೋದಿ ಅವರು ಹನುಮಾನ್ ಗಢಿ ದೇವಾಲಯಕ್ಕೆ ಭೇಟಿ ನೀಡಿದ್ರು, ನಂತರ ರಾಮಲಲ್ಲಾ ದೇಗುಲದಲ್ಲಿ ದರ್ಶನ ಪಡೆದಿದ್ದರು.

ಶ್ರೀ ರಾಮಚಂದ್ರ ಪರಿವರ್ತನೆಯ ಪ್ರತಿಪಾದಕ, ಶ್ರೀರಾಮನು ವಿರೋಧದ ಬದಲಾಗಿ ನಮಗೆ ಬೋಧ, ಶೋಧಗಳ ದಾರಿ ತೋರಿಸಿದ್ದಾನೆ. ಆತನ ಜೀವನಾದರ್ಶಗಳನ್ನು ಪಾಲಿಸುತ್ತ ನಾವೆಲ್ಲರೂ ಸ್ವಾವಲಂಬಿ ಭಾರತವನ್ನು ನಿರ್ಮಿಸೋಣವೆಂದು ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿದ್ದಾರೆ.

ಶ್ರೀರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಯುಗಯುಗ ಗಳ ತನಕ ಈ ರಾಮಮಂದಿರ ಜಗತ್ತಿಗೆ ಮಾನವತೆಯ ಮಾರ್ಗದರ್ಶನ ಮಾಡಲಿದೆ. ಸದ್ಯ ನಾವೆಲ್ಲರೂ ಮುನ್ನಡೆಯಬೇಕು. ಭಾರತವೂ ಮುನ್ನಡೆಯ ಬೇಕು. ಸದ್ಯದ ಪರಿಸ್ಥಿತಿಯಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಮಾಡಬೇಕು. ಎಲ್ಲರಿಗೂ ಆರೋಗ್ಯ ನೀಡುವಂತೆ ಶ್ರೀರಾಮಚಂದ್ರ, ಸೀತಾದೇವಿಯರಲ್ಲಿ ಬೇಡಿಕೊಳ್ಳುತ್ತೇವೆ ಎಂದಿದ್ದಾರೆ.

ಅನೇಕತೆಯಲ್ಲಿ ಏಕತೆಯನ್ನು ತಂದುಕೊಡಬಲ್ಲವನು ರಾಮ. ಪ್ರತಿಯೊಂದು ಸಮುದಾಯ, ದೇಶದವರೂ ರಾಮ. ರಾಮಾಯಣದ ಜತೆಗೆ ನಂಟು ಹೊಂದಿದ್ದಾರೆ. ಭಾರತದಲ್ಲೇ ಒಂದೊಂದು ರಾಜ್ಯದಲ್ಲಿ ಒಂದೊಂದು ರಾಮಾಯಣದ ಕಥೆ ಸಿಗುತ್ತದೆ. ವಿದೇಶಗಳಲ್ಲೂ ರಾಮಕಥಾ ವಿವರಣೆ, ರಾಮಾಯಣದ ವಿವರಣೆ ಸಿಗುತ್ತದೆ. ನಮ್ಮ ಅರಿವು, ಜೀವನಾದರ್ಶಗಳು ಜಗತ್ತಿನಾದ್ಯಂತ ಹೇಗೆ ಪಸರಿಸಿದೆ ನೋಡಿ. ಅಯೋಧ್ಯಾ ಕೇಂದ್ರ ಸ್ಥಾನವಾಗಿ ಎಲ್ಲೆಲ್ಲಿ ರಾಮ, ರಾಮಾಯಣ ಪಸರಿಸಿಕೊಂಡಿದೆಯೋ ಅವೆಲ್ಲವನ್ನೂ ಜೋಡಿಸುವ ಸರ್ಕೀಟ್ ರಚನೆಯಾಗಲಿದೆ ಎಂದಿದ್ದಾರೆ.

ಇದೊಂದು ಐತಿಹಾಸಿಕ ದಿನ. ದೀರ್ಘಾವಧಿಗೆ ಈ ದಿನ ಸ್ಮರಣೀಯವಾಗಿ ಉಳಿಯಲಿದೆ. ರಾಮಮಂದಿರ ನಿರ್ಮಾಣವಾಗುವುದೆಂಬ ವಿಶ್ವಾಸವಿದೆ. ಅದೇ ರೀತಿ ಭಾರತದಲ್ಲಿ ರಾಮರಾಜ್ಯವೂ ಸ್ಥಾಪನೆಯಾಗಲಿದೆ ಎಂದ ಯೋಗ ಗುರು ಬಾಬಾ ರಾಮದೇವ್ ಅವರು ಹೇಳಿದ್ದಾರೆ.

ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲದಾಸ್, ಉತ್ತರಪ್ರದೇಶ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತ್ರವೇ ಶಿಲಾನ್ಯಾಸದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 4 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ