ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಮಂದಿರಕ್ಕೆ ಬೆಳ್ಳಿ ಇಟ್ಟಿಗೆಯಿಂದ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ

ಅಯೋಧ್ಯೆ : ಕೋಟ್ಯಾಂತರ ಭಾರತೀಯರ ಪಾಲಿಗೆ ಇಂದು ಐತಿಹಾಸಿಕ ಕ್ಷಣ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದಲ್ಲಿ ಭೂಮಿ ಪೂಜೆಯನ್ನು ನೆರವೇರಿಸಿ ಶಿಲಾನ್ಯಾಸ ಮಾಡಿದರು.

ಮಧ್ಯಾಹ್ನ 12.44ರ ಶುಭ ಮುಹೂರ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ್ದಾರೆ. ಈ ಮೂಲಕ ಲಕ್ಷಾಂತರ ರಾಮಭಕ್ತರ ಐದು ದಶಕಗಳ ಕನಸು ನನಸಾಗಿದೆ. ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ 6 ವರ್ಷಗಳ ಕಾಲ ಅಯೋಧ್ಯೆಗೆ ನರೇಂದ್ರ ಮೋದಿ ಅವರು ಭೇಟಿಕೊಟ್ಟಿರಲಿಲ್ಲ. ಇದೀಗ ತಮ್ಮ ಶಪತವನ್ನು ಈಡೇರಿಸಿಕೊಂಡಿದ್ದು, ಕೊಟ್ಟ ಭರವಸೆಯಂತೆಯೇ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ನೀಡಿದ್ದಾರೆ.

ಪ್ರಧಾನಿ ಮೋದಿ ಅವರು ರಾಮಮಂದಿರದ ಶಿಲಾನ್ಯಾಸಕ್ಕೂ ಮೊದಲು ದೇವ ವೃಕ್ಷವೆಂದು ಕರೆಯಲ್ಪಡುವ ಕೃಷ್ಣಪ್ರಿಯ ಪಾರಿಜಾತ ಗಿಡವೊಂದನ್ನು ನೆಡುವ ಮೂಲಕ ಭೂಮಿ ಪೂಜೆಯನ್ನು ನೆರವೇರಿಸಿದ್ದಾರೆ. ದೆಹಲಿಯಿಂದ ಅಯೋಧ್ಯೆಗೆ ಆಗಮಿಸುವ ಮೊದಲು ನರೇಂದ್ರ ಮೋದಿ ಅವರು ಹನುಮಾನ್ ಗಢಿ ದೇವಾಲಯಕ್ಕೆ ಭೇಟಿ ನೀಡಿದ್ರು, ನಂತರ ರಾಮಲಲ್ಲಾ ದೇಗುಲದಲ್ಲಿ ದರ್ಶನ ಪಡೆದಿದ್ದರು.

ಶ್ರೀ ರಾಮಚಂದ್ರ ಪರಿವರ್ತನೆಯ ಪ್ರತಿಪಾದಕ, ಶ್ರೀರಾಮನು ವಿರೋಧದ ಬದಲಾಗಿ ನಮಗೆ ಬೋಧ, ಶೋಧಗಳ ದಾರಿ ತೋರಿಸಿದ್ದಾನೆ. ಆತನ ಜೀವನಾದರ್ಶಗಳನ್ನು ಪಾಲಿಸುತ್ತ ನಾವೆಲ್ಲರೂ ಸ್ವಾವಲಂಬಿ ಭಾರತವನ್ನು ನಿರ್ಮಿಸೋಣವೆಂದು ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿದ್ದಾರೆ.

ಶ್ರೀರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಯುಗಯುಗ ಗಳ ತನಕ ಈ ರಾಮಮಂದಿರ ಜಗತ್ತಿಗೆ ಮಾನವತೆಯ ಮಾರ್ಗದರ್ಶನ ಮಾಡಲಿದೆ. ಸದ್ಯ ನಾವೆಲ್ಲರೂ ಮುನ್ನಡೆಯಬೇಕು. ಭಾರತವೂ ಮುನ್ನಡೆಯ ಬೇಕು. ಸದ್ಯದ ಪರಿಸ್ಥಿತಿಯಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಮಾಡಬೇಕು. ಎಲ್ಲರಿಗೂ ಆರೋಗ್ಯ ನೀಡುವಂತೆ ಶ್ರೀರಾಮಚಂದ್ರ, ಸೀತಾದೇವಿಯರಲ್ಲಿ ಬೇಡಿಕೊಳ್ಳುತ್ತೇವೆ ಎಂದಿದ್ದಾರೆ.

ಅನೇಕತೆಯಲ್ಲಿ ಏಕತೆಯನ್ನು ತಂದುಕೊಡಬಲ್ಲವನು ರಾಮ. ಪ್ರತಿಯೊಂದು ಸಮುದಾಯ, ದೇಶದವರೂ ರಾಮ. ರಾಮಾಯಣದ ಜತೆಗೆ ನಂಟು ಹೊಂದಿದ್ದಾರೆ. ಭಾರತದಲ್ಲೇ ಒಂದೊಂದು ರಾಜ್ಯದಲ್ಲಿ ಒಂದೊಂದು ರಾಮಾಯಣದ ಕಥೆ ಸಿಗುತ್ತದೆ. ವಿದೇಶಗಳಲ್ಲೂ ರಾಮಕಥಾ ವಿವರಣೆ, ರಾಮಾಯಣದ ವಿವರಣೆ ಸಿಗುತ್ತದೆ. ನಮ್ಮ ಅರಿವು, ಜೀವನಾದರ್ಶಗಳು ಜಗತ್ತಿನಾದ್ಯಂತ ಹೇಗೆ ಪಸರಿಸಿದೆ ನೋಡಿ. ಅಯೋಧ್ಯಾ ಕೇಂದ್ರ ಸ್ಥಾನವಾಗಿ ಎಲ್ಲೆಲ್ಲಿ ರಾಮ, ರಾಮಾಯಣ ಪಸರಿಸಿಕೊಂಡಿದೆಯೋ ಅವೆಲ್ಲವನ್ನೂ ಜೋಡಿಸುವ ಸರ್ಕೀಟ್ ರಚನೆಯಾಗಲಿದೆ ಎಂದಿದ್ದಾರೆ.

ಇದೊಂದು ಐತಿಹಾಸಿಕ ದಿನ. ದೀರ್ಘಾವಧಿಗೆ ಈ ದಿನ ಸ್ಮರಣೀಯವಾಗಿ ಉಳಿಯಲಿದೆ. ರಾಮಮಂದಿರ ನಿರ್ಮಾಣವಾಗುವುದೆಂಬ ವಿಶ್ವಾಸವಿದೆ. ಅದೇ ರೀತಿ ಭಾರತದಲ್ಲಿ ರಾಮರಾಜ್ಯವೂ ಸ್ಥಾಪನೆಯಾಗಲಿದೆ ಎಂದ ಯೋಗ ಗುರು ಬಾಬಾ ರಾಮದೇವ್ ಅವರು ಹೇಳಿದ್ದಾರೆ.

ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಾಂತ ನೃತ್ಯ ಗೋಪಾಲದಾಸ್, ಉತ್ತರಪ್ರದೇಶ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತ್ರವೇ ಶಿಲಾನ್ಯಾಸದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Spread the love
  • Related Posts

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    Manglore: ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ನಗರ ಜೆಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಕಂಕನಾಡಿ ನಗರ ಪೊಲೀಸರಿಗೆ…

    Spread the love

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಕನ್ಯಾಡಿ: ಇಂದು ಅಕ್ಷಯ ತೃತೀಯ – ಹೊಸ ಆರಂಭಗಳಿಗೆ, ಸಮೃದ್ಧಿಗೆ ನಾಂದಿ ಹಾಡುವ ಪವಿತ್ರ ದಿನ. ಈ ಶುಭ ಸಂದರ್ಭದಲ್ಲಿ ನಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಒಂದು ಮಹತ್ವದ ನಿರ್ಧಾರ ತೆಗೆದುಕೊಳ್ಳೋಣ. ಜ್ಞಾನದ ಅಕ್ಷಯ ಪಾತ್ರೆಯಂತಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ…

    Spread the love

    You Missed

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 32 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    • By admin
    • April 20, 2026
    • 28 views
    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    • By admin
    • April 20, 2026
    • 77 views
    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    • By admin
    • April 19, 2026
    • 36 views
    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು ಬಂಧನ

    • By admin
    • April 19, 2026
    • 146 views
    ಅಪ್ರಾಪ್ತ ಬಾಲಕಿ ಮೇಲೆ  ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು  ಬಂಧನ

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    • By admin
    • April 18, 2026
    • 224 views
    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”