ಹಲವು ಔಷಧೀಯ ಗುಣವುಳ್ಳ ಮುಳ್ಳು ಹಾಲವಾಣ ಮತ್ತು ಹಾಲವಾಣ

🖊️• ಸುಮನಾ ಮಳಲಗದ್ದೆ ಪಾರಂಪರಿಕ ವೈದ್ಯರು 9980182883

ಮುಳ್ಳು ಹಾಲವಾಣ ಮತ್ತು ಹಾಲವಾಣ ಎರಡೂ ಗಿಡದ ಔಷಧಿ ಗುಣ ಸುಮಾರಾಗಿ ಒಂದೇ ಆದರೂ ಮುಳ್ಳು ಹಾಲವಾಣ ಕೆಲವು ಕಾಯಿಲೆ ಗೆ ಒಳ್ಳೆಯದಾದರೆ ಹಾಲವಾಣ ಕೆಲವು ಕಾಯಿಲೆ ಗಳಿಗೆ ಒಳ್ಳೆಯದು. ಔಷಧಿ ದೃಷ್ಟಿಯಿಂದ ಬಿಳಿ ಹೂ ಬಿಡುವ ಹಾಲವಾಣ ಇನ್ನೂ ಹೆಚ್ಚು ಪರಿಣಾಮಕಾರಿ. ಸಣ್ಣ ವಯಸ್ಸಿನಲ್ಲಿ ಕೈಗೆ ಮದರಂಗಿ ಕಟ್ಟಲು ಬಳಸುತ್ತಿದ್ದ ಎಲೆ ಹಾಲವಣ. ಇದರ ಬಳಕೆ ಒಂದೇ ಎರಡೇ. ರೈತರ ಹೊಲದಲ್ಲಿ ನೆಟ್ಟು ಎಲೆ ಬಳ್ಳಿ ಮೆಣಸಿನ ಬಳ್ಳಿ ಹಂಭಿಸಲು. ದನ ಕರುಗಳಿಗೆ ಮೇವು. ದನ ಕರುಗಳ ಕಾಲಿಗೆ ಹಾಸಿದರೆ ಗೊಬ್ಬರ. ಬೆಳೆದ ಕಾಯಿ ಆಟವಾಡಲು ಚೆನ್ನೈ ಮನೆ.(ಅಡುಗುಳಿ). ಚಕ್ಕೆ ಕೆತ್ತಿತಂದರೆ ದೇವರ ಮೂರ್ತಿ. ತೋಟದ ಬದುವಿನಂಚಿನಲ್ಲಿ ನೆರಳು ಇಷ್ಟೆಲ್ಲದರ ಜೊತೆಯಲ್ಲಿ ಔಷಧೀಯ ಗುಣವನ್ನು ಹೊಂದಿರುವ ಸಸ್ಯ
ಹಸಿಯ ಕಾಯಿಗಳನ್ನು ಬಿಡಿಸಿ ಒಳಬಾಗದಲ್ಲಿ ಕೊರೆದು ಉಂಗುರ ಮಾಡಿ ಹಾಕಿಕೊಳ್ಳುವುದೇ ಒಂದು ಚೆಂದ ಸಣ್ಣವರಿದ್ದಾಗ. ನೆಲದಲ್ಲಿ ಚೆನ್ನಾಗಿ ತೈದು ಬೇರೆಯವರಿಗೆ ಬಿಸಿ ಮುಟ್ಟಿಸುವುದು ಇದು ಸಣ್ಣ ವಯಸ್ಸಿನಲ್ಲಿ ಮಾಡುತ್ತಿದ್ದ ಕಿತಾಪತಿಗಳಲ್ಲಿ ಒಂದು.


ಹಾಲವಾಣದಲ್ಲಿ ಅನೇಕ ವಿಧ ಆದರೆ ಅದರಲ್ಲಿ ಪ್ರಮುಖವಾಗಿ ಮೂರು ವಿಧ ಬಿಳಿಹಾಲವಾಣ ಕೆಂಪು ಹಾಲವಾಣ ಮುಳ್ಳು ಹಾಲವಾಣ.
ಔಷಧಿಯಾಗಿ ಹೆಚ್ಚು ಉಪಯೋಗಿಸುವುದು ಬಿಳಿ ಹಾಲವಣವನ್ನು. ಇದರ ಬೇರು ಕಾಂಡ ಎಲೆ ಕಾಯಿ ಹೂವು ಇವುಗಳು ಹೆಚ್ಚಿನ ಔಷಧೀಯ ಉಪಯೋಗಕ್ಕಾಗಿ ಬಳಸುತ್ತಾರೆ.


1) ನಾಲ್ಕೈದು ಸೊಪ್ಪನ್ನು ಚೆನ್ನಾಗಿ ಅರೆದು ಜೇನುತುಪ್ಪದೊಂದಿಗೆ ಸೇರಿಸಿ ಸೇವಿಸುವುದರಿಂದ ಹೊಟ್ಟೆಯ ಹುಳುಗಳು ಹೊರ ಬಿದ್ದು ನಾಶವಾಗುತ್ತವೆ.


2) ಸೊಪ್ಪನ್ನು ಚೆನ್ನಾಗಿ ಅರೆದು ಅರಿಶಿನ ಪುಡಿ ಸೇರಿಸಿ ಮೈಗೆ ಹಚ್ಚಿ ಒಣಗಿದ ನಂತರ ಸ್ನಾನ ಮಾಡುವುದರಿಂದ ಬೇಸಿಗೆಯಲ್ಲಿ ಆಗುವ ಬೆವರು ಸಾಲೆ ಗುಣವಾಗುತ್ತದೆ.


3) ಎಲೆಯೊಂದಿಗೆ ಈರುಳ್ಳಿಯನ್ನು ಸೇರಿಸಿ ಪಲ್ಯ ಮಾಡಿ ಸೇವಿಸುವುದರಿಂದ ಬಾಣಂತಿಯ ಎದೆ ಹಾಲು ಹೆಚ್ಚುತ್ತದೆ.


4) ಬಿಳಿ ಹಾಲವಣದ ಬೇರನ್ನು ದೇಸಿಯ ಹಸುವಿನ ಹಾಲಿನಲ್ಲಿ ತೇಯಿದು ಉಪಯೋಗಿಸುವುದರಿಂದ ಬಿಳಿ ಮುಟ್ಟು ಗುಣವಾಗುತ್ತದೆ.


5) ತೊಗಟೆಯನ್ನು ಸುಟ್ಟು ಕರುಕು ಮಾಡಿ ತುಪ್ಪದೊಂದಿಗೆ ಬೆರೆಸಿ ಕಣ್ಣಿಗೆ ಅಂಜನ ಹಚ್ಚುವುದರಿಂದ ಕಣ್ಣಿನಲ್ಲಿ ನೀರು ಬಂದು ಕಣ್ಣಿನ ಸಮಸ್ಯೆ ಗುಣವಾಗುತ್ತದೆ.


6) ಎಲೆಯ ರಸವನ್ನು ಬೆಳ್ಳುಳ್ಳಿಯನ್ನು ಸೇರಿಸಿ ಅಕ್ಕಿಯೊಂದಿಗೆ ಬೇಯಿಸಿ ಅನ್ನ ಮಾಡಿ ಸೇವಿಸುವುದರಿಂದ ಸಂಧಿವಾತ ಗುಣವಾಗುತ್ತದೆ.


7) ಗಸಗಸೆ ಉದ್ದು ಬಾದಾಮಿ ಹಾಲವಣದ ಹೂವು ಸೇರಿಸಿ ಹಾಲು ಹಾಕಿ ಪಾಯಸ ಮಾಡಿ ಸೇವಿಸುವುದರಿಂದ ಕಾಮ ವಾಂಛೆ ಹೆಚ್ಚಾಗುತ್ತದೆ.


8) ಧನತ್ರ ಯೋದಶಿಯ ದಿನ ಮರವನ್ನು ಪೂಜಿಸಿ ತರುವ ಚಕ್ಕೆಯಿಂದ ದೀಪಾವಳಿ ಅಮಾವಾಸ್ಯೆ ಯಂದು ನಾನು ಮಾಡುವ ತಾಯಿತ ಒಂದು ವರ್ಷದವರೆಗೆ ಮನೆಯಲ್ಲಿ ಯಾವುದೇ ದುಷ್ಟ ಶಕ್ತಿಗಳು ಬರದಂತೆ ಕಾಪಾಡುತ್ತದೆ ಇದು ನಮ್ಮ ಹಿಂದಿನವರ ನಂಬಿಕೆ. ಪ್ರತಿ ವರ್ಷ ನಾನು ಇದನ್ನು ಮಾಡಿ ಕೊಟ್ಟು ಇದರ ಲಾಭವನ್ನು ಅನೇಕರು ಪಡೆದಿರುತ್ತಾರೆ.


9) ಚಕ್ಕೆಯ ರಸವನ್ನು ಹಾಲು ಸೇರಿಸಿ ಸೇವಿಸುವುದರಿಂದ ಸರ್ಪ ಸುತ್ತು ಗುಣವಾಗುತ್ತದೆ ಮತ್ತು ರಸವನ್ನು ಹಚ್ಚುವುದರಿಂದ ಬೇಗನೆ ಗುಣವಾಗುತ್ತದೆ.


10) ಕ್ರಿಮಿಯುಕ್ತವಾದ ಋಣಕ್ಕೆ ಎಲೆಯರಸವನ್ನು ಹಚ್ಚುವುದರಿಂದ ಗುಣವಾಗುತ್ತದೆ.


11) ಎಲೆಯನ್ನು ಸ್ವಲ್ಪ ಬೆಚ್ಚಗೆ ಮಾಡಿ ಕಿವಿಗೆ ಹಾಕುವುದರಿಂದ ಕಿವಿ ನೋವು ಗುಣವಾಗುತ್ತದೆ.


12) ಎಲೆ ರಸ ತೆಗೆದು ಸ್ವಲ್ಪ ಬೆಳ್ಳುಳ್ಳಿ ಸೇರಿಸಿ ಬಿಸಿ ಮಾಡಿ ತಡೆದುಕೊಳ್ಳುವಷ್ಟು ಬಿಸಿ ಇರುವಾಗ ಉಂಡೆ ಮಾಡಿ ಹಲ್ಲಿನಲ್ಲಿ ಇಡುವುದರಿಂದ ಹಲ್ಲು ನೋವು ಗುಣವಾಗುತ್ತದೆ.


13) ಹಸು ಕರು ಹಾಕಿದಾಗ ಗಂಜಿಯೊಂದಿಗೆ ಸೊಪ್ಪನ್ನು ಬೇಯಿಸಿ ಕೊಡುವ ಪದ್ಧತಿ, ಈಗಲೂ ನಮ್ಮಲ್ಲಿ ಇದೆ. ಇದರಿಂದ ಹಾಲು ಹೆಚ್ಚು ಉತ್ಪತ್ತಿಯಾಗುತ್ತದೆ.


14) ಬೆತ್ತದ ಮರದಲ್ಲಿ ಹಾಲವಣದ ಎಲೆಗಳನ್ನು ಜೋಡಿಸಿ ದಿನ ತುಂಬದೆ ಹುಟ್ಟಿದ ಮಗುವನ್ನು ಮಲಗಿಸಿದರೆ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ಯಾವುದೇ ರೋಗ ಮಗುವಿಗೆ ಬರುವುದಿಲ್ಲ. ನನ್ನ ಅಜ್ಜಿ ಅನೇಕ ಮಕ್ಕಳನ್ನು ಮಲಗಿಸಿ ಬದುಕಿಸಿದ್ದನ್ನು ನಾನು ಕಣ್ಣಾರೆ ಕಂಡಿದ್ದೇನೆ.

Spread the love
  • Related Posts

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    Manglore: ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ನಗರ ಜೆಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಕಂಕನಾಡಿ ನಗರ ಪೊಲೀಸರಿಗೆ…

    Spread the love

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಕನ್ಯಾಡಿ: ಇಂದು ಅಕ್ಷಯ ತೃತೀಯ – ಹೊಸ ಆರಂಭಗಳಿಗೆ, ಸಮೃದ್ಧಿಗೆ ನಾಂದಿ ಹಾಡುವ ಪವಿತ್ರ ದಿನ. ಈ ಶುಭ ಸಂದರ್ಭದಲ್ಲಿ ನಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಒಂದು ಮಹತ್ವದ ನಿರ್ಧಾರ ತೆಗೆದುಕೊಳ್ಳೋಣ. ಜ್ಞಾನದ ಅಕ್ಷಯ ಪಾತ್ರೆಯಂತಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ…

    Spread the love

    You Missed

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 47 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    • By admin
    • April 20, 2026
    • 35 views
    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    • By admin
    • April 20, 2026
    • 80 views
    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    • By admin
    • April 19, 2026
    • 40 views
    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು ಬಂಧನ

    • By admin
    • April 19, 2026
    • 154 views
    ಅಪ್ರಾಪ್ತ ಬಾಲಕಿ ಮೇಲೆ  ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು  ಬಂಧನ

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    • By admin
    • April 18, 2026
    • 241 views
    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”