ಹಲವು ಔಷಧೀಯ ಗುಣವುಳ್ಳ ಮುಳ್ಳು ಹಾಲವಾಣ ಮತ್ತು ಹಾಲವಾಣ

🖊️• ಸುಮನಾ ಮಳಲಗದ್ದೆ ಪಾರಂಪರಿಕ ವೈದ್ಯರು 9980182883

ಮುಳ್ಳು ಹಾಲವಾಣ ಮತ್ತು ಹಾಲವಾಣ ಎರಡೂ ಗಿಡದ ಔಷಧಿ ಗುಣ ಸುಮಾರಾಗಿ ಒಂದೇ ಆದರೂ ಮುಳ್ಳು ಹಾಲವಾಣ ಕೆಲವು ಕಾಯಿಲೆ ಗೆ ಒಳ್ಳೆಯದಾದರೆ ಹಾಲವಾಣ ಕೆಲವು ಕಾಯಿಲೆ ಗಳಿಗೆ ಒಳ್ಳೆಯದು. ಔಷಧಿ ದೃಷ್ಟಿಯಿಂದ ಬಿಳಿ ಹೂ ಬಿಡುವ ಹಾಲವಾಣ ಇನ್ನೂ ಹೆಚ್ಚು ಪರಿಣಾಮಕಾರಿ. ಸಣ್ಣ ವಯಸ್ಸಿನಲ್ಲಿ ಕೈಗೆ ಮದರಂಗಿ ಕಟ್ಟಲು ಬಳಸುತ್ತಿದ್ದ ಎಲೆ ಹಾಲವಣ. ಇದರ ಬಳಕೆ ಒಂದೇ ಎರಡೇ. ರೈತರ ಹೊಲದಲ್ಲಿ ನೆಟ್ಟು ಎಲೆ ಬಳ್ಳಿ ಮೆಣಸಿನ ಬಳ್ಳಿ ಹಂಭಿಸಲು. ದನ ಕರುಗಳಿಗೆ ಮೇವು. ದನ ಕರುಗಳ ಕಾಲಿಗೆ ಹಾಸಿದರೆ ಗೊಬ್ಬರ. ಬೆಳೆದ ಕಾಯಿ ಆಟವಾಡಲು ಚೆನ್ನೈ ಮನೆ.(ಅಡುಗುಳಿ). ಚಕ್ಕೆ ಕೆತ್ತಿತಂದರೆ ದೇವರ ಮೂರ್ತಿ. ತೋಟದ ಬದುವಿನಂಚಿನಲ್ಲಿ ನೆರಳು ಇಷ್ಟೆಲ್ಲದರ ಜೊತೆಯಲ್ಲಿ ಔಷಧೀಯ ಗುಣವನ್ನು ಹೊಂದಿರುವ ಸಸ್ಯ
ಹಸಿಯ ಕಾಯಿಗಳನ್ನು ಬಿಡಿಸಿ ಒಳಬಾಗದಲ್ಲಿ ಕೊರೆದು ಉಂಗುರ ಮಾಡಿ ಹಾಕಿಕೊಳ್ಳುವುದೇ ಒಂದು ಚೆಂದ ಸಣ್ಣವರಿದ್ದಾಗ. ನೆಲದಲ್ಲಿ ಚೆನ್ನಾಗಿ ತೈದು ಬೇರೆಯವರಿಗೆ ಬಿಸಿ ಮುಟ್ಟಿಸುವುದು ಇದು ಸಣ್ಣ ವಯಸ್ಸಿನಲ್ಲಿ ಮಾಡುತ್ತಿದ್ದ ಕಿತಾಪತಿಗಳಲ್ಲಿ ಒಂದು.


ಹಾಲವಾಣದಲ್ಲಿ ಅನೇಕ ವಿಧ ಆದರೆ ಅದರಲ್ಲಿ ಪ್ರಮುಖವಾಗಿ ಮೂರು ವಿಧ ಬಿಳಿಹಾಲವಾಣ ಕೆಂಪು ಹಾಲವಾಣ ಮುಳ್ಳು ಹಾಲವಾಣ.
ಔಷಧಿಯಾಗಿ ಹೆಚ್ಚು ಉಪಯೋಗಿಸುವುದು ಬಿಳಿ ಹಾಲವಣವನ್ನು. ಇದರ ಬೇರು ಕಾಂಡ ಎಲೆ ಕಾಯಿ ಹೂವು ಇವುಗಳು ಹೆಚ್ಚಿನ ಔಷಧೀಯ ಉಪಯೋಗಕ್ಕಾಗಿ ಬಳಸುತ್ತಾರೆ.


1) ನಾಲ್ಕೈದು ಸೊಪ್ಪನ್ನು ಚೆನ್ನಾಗಿ ಅರೆದು ಜೇನುತುಪ್ಪದೊಂದಿಗೆ ಸೇರಿಸಿ ಸೇವಿಸುವುದರಿಂದ ಹೊಟ್ಟೆಯ ಹುಳುಗಳು ಹೊರ ಬಿದ್ದು ನಾಶವಾಗುತ್ತವೆ.


2) ಸೊಪ್ಪನ್ನು ಚೆನ್ನಾಗಿ ಅರೆದು ಅರಿಶಿನ ಪುಡಿ ಸೇರಿಸಿ ಮೈಗೆ ಹಚ್ಚಿ ಒಣಗಿದ ನಂತರ ಸ್ನಾನ ಮಾಡುವುದರಿಂದ ಬೇಸಿಗೆಯಲ್ಲಿ ಆಗುವ ಬೆವರು ಸಾಲೆ ಗುಣವಾಗುತ್ತದೆ.


3) ಎಲೆಯೊಂದಿಗೆ ಈರುಳ್ಳಿಯನ್ನು ಸೇರಿಸಿ ಪಲ್ಯ ಮಾಡಿ ಸೇವಿಸುವುದರಿಂದ ಬಾಣಂತಿಯ ಎದೆ ಹಾಲು ಹೆಚ್ಚುತ್ತದೆ.


4) ಬಿಳಿ ಹಾಲವಣದ ಬೇರನ್ನು ದೇಸಿಯ ಹಸುವಿನ ಹಾಲಿನಲ್ಲಿ ತೇಯಿದು ಉಪಯೋಗಿಸುವುದರಿಂದ ಬಿಳಿ ಮುಟ್ಟು ಗುಣವಾಗುತ್ತದೆ.


5) ತೊಗಟೆಯನ್ನು ಸುಟ್ಟು ಕರುಕು ಮಾಡಿ ತುಪ್ಪದೊಂದಿಗೆ ಬೆರೆಸಿ ಕಣ್ಣಿಗೆ ಅಂಜನ ಹಚ್ಚುವುದರಿಂದ ಕಣ್ಣಿನಲ್ಲಿ ನೀರು ಬಂದು ಕಣ್ಣಿನ ಸಮಸ್ಯೆ ಗುಣವಾಗುತ್ತದೆ.


6) ಎಲೆಯ ರಸವನ್ನು ಬೆಳ್ಳುಳ್ಳಿಯನ್ನು ಸೇರಿಸಿ ಅಕ್ಕಿಯೊಂದಿಗೆ ಬೇಯಿಸಿ ಅನ್ನ ಮಾಡಿ ಸೇವಿಸುವುದರಿಂದ ಸಂಧಿವಾತ ಗುಣವಾಗುತ್ತದೆ.


7) ಗಸಗಸೆ ಉದ್ದು ಬಾದಾಮಿ ಹಾಲವಣದ ಹೂವು ಸೇರಿಸಿ ಹಾಲು ಹಾಕಿ ಪಾಯಸ ಮಾಡಿ ಸೇವಿಸುವುದರಿಂದ ಕಾಮ ವಾಂಛೆ ಹೆಚ್ಚಾಗುತ್ತದೆ.


8) ಧನತ್ರ ಯೋದಶಿಯ ದಿನ ಮರವನ್ನು ಪೂಜಿಸಿ ತರುವ ಚಕ್ಕೆಯಿಂದ ದೀಪಾವಳಿ ಅಮಾವಾಸ್ಯೆ ಯಂದು ನಾನು ಮಾಡುವ ತಾಯಿತ ಒಂದು ವರ್ಷದವರೆಗೆ ಮನೆಯಲ್ಲಿ ಯಾವುದೇ ದುಷ್ಟ ಶಕ್ತಿಗಳು ಬರದಂತೆ ಕಾಪಾಡುತ್ತದೆ ಇದು ನಮ್ಮ ಹಿಂದಿನವರ ನಂಬಿಕೆ. ಪ್ರತಿ ವರ್ಷ ನಾನು ಇದನ್ನು ಮಾಡಿ ಕೊಟ್ಟು ಇದರ ಲಾಭವನ್ನು ಅನೇಕರು ಪಡೆದಿರುತ್ತಾರೆ.


9) ಚಕ್ಕೆಯ ರಸವನ್ನು ಹಾಲು ಸೇರಿಸಿ ಸೇವಿಸುವುದರಿಂದ ಸರ್ಪ ಸುತ್ತು ಗುಣವಾಗುತ್ತದೆ ಮತ್ತು ರಸವನ್ನು ಹಚ್ಚುವುದರಿಂದ ಬೇಗನೆ ಗುಣವಾಗುತ್ತದೆ.


10) ಕ್ರಿಮಿಯುಕ್ತವಾದ ಋಣಕ್ಕೆ ಎಲೆಯರಸವನ್ನು ಹಚ್ಚುವುದರಿಂದ ಗುಣವಾಗುತ್ತದೆ.


11) ಎಲೆಯನ್ನು ಸ್ವಲ್ಪ ಬೆಚ್ಚಗೆ ಮಾಡಿ ಕಿವಿಗೆ ಹಾಕುವುದರಿಂದ ಕಿವಿ ನೋವು ಗುಣವಾಗುತ್ತದೆ.


12) ಎಲೆ ರಸ ತೆಗೆದು ಸ್ವಲ್ಪ ಬೆಳ್ಳುಳ್ಳಿ ಸೇರಿಸಿ ಬಿಸಿ ಮಾಡಿ ತಡೆದುಕೊಳ್ಳುವಷ್ಟು ಬಿಸಿ ಇರುವಾಗ ಉಂಡೆ ಮಾಡಿ ಹಲ್ಲಿನಲ್ಲಿ ಇಡುವುದರಿಂದ ಹಲ್ಲು ನೋವು ಗುಣವಾಗುತ್ತದೆ.


13) ಹಸು ಕರು ಹಾಕಿದಾಗ ಗಂಜಿಯೊಂದಿಗೆ ಸೊಪ್ಪನ್ನು ಬೇಯಿಸಿ ಕೊಡುವ ಪದ್ಧತಿ, ಈಗಲೂ ನಮ್ಮಲ್ಲಿ ಇದೆ. ಇದರಿಂದ ಹಾಲು ಹೆಚ್ಚು ಉತ್ಪತ್ತಿಯಾಗುತ್ತದೆ.


14) ಬೆತ್ತದ ಮರದಲ್ಲಿ ಹಾಲವಣದ ಎಲೆಗಳನ್ನು ಜೋಡಿಸಿ ದಿನ ತುಂಬದೆ ಹುಟ್ಟಿದ ಮಗುವನ್ನು ಮಲಗಿಸಿದರೆ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ಯಾವುದೇ ರೋಗ ಮಗುವಿಗೆ ಬರುವುದಿಲ್ಲ. ನನ್ನ ಅಜ್ಜಿ ಅನೇಕ ಮಕ್ಕಳನ್ನು ಮಲಗಿಸಿ ಬದುಕಿಸಿದ್ದನ್ನು ನಾನು ಕಣ್ಣಾರೆ ಕಂಡಿದ್ದೇನೆ.

Spread the love
  • Related Posts

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    ಸಕಲೇಶಪುರ, ಜೂನ್ 5: ತಾಲೂಕಿನ ಉದೇವಾರ ಗ್ರಾಮದ ಕೂಲಿ ಕಾರ್ಮಿಕರಾದ ಸರೋಜಮ್ಮ ಅವರ ಮನೆ ಮೇಲೆ ಭಾರೀ ಗಾಳಿ-ಮಳೆಯಿಂದ ತೆಂಗಿನಮರ ಬಿದ್ದು ಮನೆಗೆ ಅಪಾರ ಹಾನಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಸರೋಜಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಈ ವಿಷಯ…

    Spread the love

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    ಬೆಳ್ತಂಗಡಿ, ಜೂನ್ 4: ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಚಾರಣತಾಣ ಗಡಾಯಿಕಲ್ಲಿಗೆ ಭೇಟಿ ನೀಡಿದ್ದ ಪ್ರವಾಸಿಗನೊಬ್ಬ ಕಾಲು ತಿರುಗಿ (ಟ್ವಿಸ್ಟ್) ಗಾಯಗೊಂಡು ಕೆಳಗಿಳಿಯಲು ಸಾಧ್ಯವಾಗದೆ ಸಿಲುಕಿದ್ದ ಘಟನೆ ಗುರುವಾರ ಸಂಜೆ ನಡೆದಿದೆ. ಸ್ಥಳೀಯರು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಶ್ರೀ ಕ್ಷೇತ್ರ…

    Spread the love

    You Missed

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    • By admin
    • June 5, 2026
    • 55 views
    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 73 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 35 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 33 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    • By admin
    • June 1, 2026
    • 103 views
    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

    • By admin
    • June 1, 2026
    • 178 views
    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ