ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ ಇದರ ವತಿಯಿಂದ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ತಾಲೂಕಿನ JSS ಕಾಲೇಜನಲ್ಲಿ ಹಮ್ಮಿಕೊಳ್ಳಲಾಯಿತು.

ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ ಯವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಬಳಿಕ ಮಾತನಾಡುತ್ತಾ ಯುವಜನತೆಯಲ್ಲಿ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸಲು, ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಆಯೋಜಿಸುವ ಒಂದು ಕಾರ್ಯಕ್ರಮವಾಗಿದೆ. ಇದು ದುಶ್ಚಟಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು ಮತ್ತು ವ್ಯಸನ ಮುಕ್ತ ಸಮಾಜ ನಿರ್ಮಾಣದ ಬಗ್ಗೆ ಪ್ರತಿಜ್ಞೆ ಮಾಡಿಸುವುದನ್ನು ಒಳಗೊಂಡಿರುತ್ತದೆ. ಯುವಜನರು ದುಶ್ಚಟಗಳಿಗೆ ಬಲಿಯಾಗದಂತೆ ತಡೆಯುವುದು ಮತ್ತು ಆರೋಗ್ಯಕರ, ವ್ಯಸನ ಮುಕ್ತ ಜೀವನ ನಡೆಸಲು ಪ್ರೇರೇಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಹದಿಹರೆಯದ ವಯಸ್ಸಿನಲ್ಲಿ ಯುವಕ ಯುವತಿಯರು ದಾರಿ ತಪ್ಪುತ್ತಿದ್ದು ಇಂತಹ ಸಮಯದಲ್ಲಿ ಸರಿಯಾದ ಮಾರ್ಗದರ್ಶನ ಹಾಗೂ ನೈತಿಕ ಶಿಕ್ಷಣ ನೀಡುವ ಮೂಲಕ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ರೂಢಿಸಿಕೊಳ್ಳಲು ಸಹಕಾರಿಯಾಗುತ್ತದೆ ನಾವೆಲ್ಲರೂ ದುಶ್ಚಟಗಳ ವಿರುದ್ಧ ಜಾಗೃತರಾಗಿ ದೇಶದ ಸುಭದ್ರತೆ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಾಗಿದೆ ಇದರಲ್ಲಿ ಯುವಜನತೆಯ ಪಾತ್ರ ಬಹುಮುಖ್ಯವಾಗಿದೆ. ಡ್ರಗ್ಸ್ ಅಫೀಮು ಗಾಂಜಾ, ಇಂತಹ ವ್ಯಸನಿಗಳಿಂದ ಯುವ ಸಮುದಾಯವನ್ನು ದೂರ ಇರುವಂತೆ ಪ್ರತಿಯೊಬ್ಬರು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಬಹುಮುಖ್ಯವಾಗಿ ಪಾಲಕರು ಪೋಷಕರು ತಮ್ಮ ಮಕ್ಕಳನ್ನು ದಾರಿತಪ್ಪದಂತೆ ಕೈ ಹಿಡಿದು ಮುನ್ನಡೆಸುವ ಬಗ್ಗೆ ಮಹತ್ತರದ ಪಾತ್ರ ವಹಿಸಬೇಕು. ಮನುಷ್ಯ ತನ್ನ ಅಲ್ಪ ಸುಖಕ್ಕಾಗಿ ಬೇಡವಾದ ಯೋಚನೆಗಳ ಕಡೆ ಯೋಚಿಸಿಕೊಂಡು ಬದುಕನ್ನೇ ಕಳೆದುಕೊಳ್ಳುವ ಸ್ಥಿತಿಗೆ ಬರುತ್ತಾರೆ. ಪ್ರೀತಿ ಪ್ರೇಮ ಎಂಬ ವ್ಯಾಮೋಹದ ನಡುವೆ ತಂದೆ ತಾಯಂದಿರ ಹಿತ ಕಲುಕುವ ಯುವಕರು ತಂದೆ ತಾಯಿ ಬಾಲ್ಯದಲ್ಲಿ ನಮಗಾಗಿ ಜೀವ ಸವೇದ ಕ್ಷಣವನ್ನು ಹೆಚ್ಚಾಗಿ ಆಲೋಚಿಸಿ ಮುಂದಿನ ಹೆಜ್ಜೆ ಇಡಬೇಕು. ಹೆತ್ತವರನ್ನು ಗುರುವೃಂದದವರನ್ನು ಗೌರವಿಸಿ ಮುನ್ನಡೆಯಬೇಕು, ದುಶ್ಚಟಗಳಿಂದ ಮುಕ್ತರಾಗಿ ಬದುಕಬೇಕು ಸಮಾಜದಲ್ಲಿ ಒಳ್ಳೆಯ ಆದರ್ಶ ವಿದ್ಯಾರ್ಥಿಗಳಾಗಿ ಒಳ್ಳೆಯ ವ್ಯಕ್ತಿಯಾಗಳಾಗಬೇಕು, ಮಾದಕ ದ್ರವ್ಯ ವಸ್ತುಗಳಿಂದ ದೂರವಿರಬೇಕು, ಮತ್ತು ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸುವಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಮಧುಕುಮಾರ ಹಾಗೂ ಬಾಗೆ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ರಾಮಕೃಷ್ಣ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ರಾಜೇಶ.ಎಂ, ಒಕ್ಕೂಟದ ಅಧ್ಯಕ್ಷರಾದ ಸುಧಾ, ಶಿಕ್ಷಕರಾದ ಯೊಗೀಶ್, ಸುರೇಶ, ಹಾಗೂ ಬಾಗೆ ವಲಯದ ಮೇಲ್ವಿಚಾರಕರಾದ ಶಿವಾನಂದ ಓಂಕಾರಪ್ಪ, ಈ ಶಾಲೆಯ ಎಲ್ಲಾ ಶಿಕ್ಷಕರು, ಸಿಬ್ಬಂದಿಗಳು, ಸೇವಾಪ್ರತಿನಿಧಿಗಳು, ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Spread the love
  • Related Posts

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    ಸಕಲೇಶಪುರ, ಜೂನ್ 5: ತಾಲೂಕಿನ ಉದೇವಾರ ಗ್ರಾಮದ ಕೂಲಿ ಕಾರ್ಮಿಕರಾದ ಸರೋಜಮ್ಮ ಅವರ ಮನೆ ಮೇಲೆ ಭಾರೀ ಗಾಳಿ-ಮಳೆಯಿಂದ ತೆಂಗಿನಮರ ಬಿದ್ದು ಮನೆಗೆ ಅಪಾರ ಹಾನಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಸರೋಜಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಈ ವಿಷಯ…

    Spread the love

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    ಬೆಳ್ತಂಗಡಿ, ಜೂನ್ 4: ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಚಾರಣತಾಣ ಗಡಾಯಿಕಲ್ಲಿಗೆ ಭೇಟಿ ನೀಡಿದ್ದ ಪ್ರವಾಸಿಗನೊಬ್ಬ ಕಾಲು ತಿರುಗಿ (ಟ್ವಿಸ್ಟ್) ಗಾಯಗೊಂಡು ಕೆಳಗಿಳಿಯಲು ಸಾಧ್ಯವಾಗದೆ ಸಿಲುಕಿದ್ದ ಘಟನೆ ಗುರುವಾರ ಸಂಜೆ ನಡೆದಿದೆ. ಸ್ಥಳೀಯರು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಶ್ರೀ ಕ್ಷೇತ್ರ…

    Spread the love

    You Missed

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    • By admin
    • June 5, 2026
    • 63 views
    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 73 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 35 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 33 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    • By admin
    • June 1, 2026
    • 103 views
    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

    • By admin
    • June 1, 2026
    • 178 views
    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ