“ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡ ಉದ್ಘಾಟನೆ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಇಂದು ಭಕ್ತಿಭಾವ ಹಾಗೂ ಸಂಭ್ರಮದ ವಾತಾವರಣದಲ್ಲಿ ನೆರವೇರಿತು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ ಅವರು ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರಗಳ ಅಭಿವೃದ್ಧಿಯು ಸಮಾಜದ ಏಕತೆ ಹಾಗೂ ಸಂಸ್ಕೃತಿ ಸಂರಕ್ಷಣೆಗೆ ಮಹತ್ವದ ಕೊಡುಗೆ ನೀಡುತ್ತದೆ

ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಬೇಕು. ಧಾರ್ಮಿಕ ಕೇಂದ್ರಗಳು ಕೇವಲ ಪೂಜೆ-ಪ್ರಾರ್ಥನೆಗೆ ಸೀಮಿತವಾಗದೆ, ಸಮಾಜದ ಒಳಿತಿಗಾಗಿ ಸೇವಾ ಕಾರ್ಯಗಳಿಗೆ ಪ್ರೇರಣೆಯಾಗಬೇಕು. ಕುಟುಂಬ ಮೌಲ್ಯಗಳು ಗಟ್ಟಿಯಾಗುವ ಮೂಲಕ ವೃದ್ಧಾಶ್ರಮಗಳ ಅವಶ್ಯಕತೆ ಕಡಿಮೆಯಾಗುವಂತಾಗಬೇಕು ಮಕ್ಕಳಿಗೆ ಭಜನೆ, ಧಾರ್ಮಿಕ ಮೌಲ್ಯಗಳು ಹಾಗೂ ನಮ್ಮ ಸಂಸ್ಕೃತಿಯ ಮಹತ್ವವನ್ನು ತಿಳಿಸುವ ಜವಾಬ್ದಾರಿ ಹಿರಿಯರ ಮೇಲಿದೆ. ಇಂದಿನ ಪೀಳಿಗೆಗೆ ಭಜನೆಯ ಬಗ್ಗೆ ಅರಿವು ಮೂಡಿಸುವ ಮೂಲಕ ಉತ್ತಮ ಸಂಸ್ಕಾರ, ಶಿಸ್ತು ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಬಹುದು ಭಜನೆಯ ಮೂಲಕ ಉತ್ತಮ ಸಂಸ್ಕಾರ ಮತ್ತು ಜೀವನ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ವರ್ಗಾಯಿಸಬೇಕು” ಎಂದು ಶಾಸಕ ಹರೀಶ್ ಪೂಂಜಾ ಹೇಳಿದರು.

“ಕಟ್ಟಡಗಳು ಕೇವಲ ಸಾಂಕೇತಿಕವಾಗಿರದೆ, ಸಂಸ್ಕಾರ ತುಂಬುವ ಶ್ರದ್ಧಾ ಕೇಂದ್ರಗಳಾಗಬೇಕು. ಅಭಿವೃದ್ಧಿಯ ಜೊತೆಗೆ ಜ್ಞಾನ ಮತ್ತು ಮೌಲ್ಯಗಳ ಬೆಳವಣಿಗೆಯೂ ಅಗತ್ಯ” : ಡಾ. ಪ್ರದೀಪ್ ನಾವುರ

ಡಾ. ಪ್ರದೀಪ್ ನಾವುರ ಅವರು ಮಾತನಾಡುತ್ತಾ ಅಭಿವೃದ್ಧಿಯ ಜೊತೆಗೆ ಜ್ಞಾನವೂ ಅಭಿವೃದ್ಧಿಯಾಗಬೇಕು. ಸಮಾಜದ ಪ್ರಗತಿ ಕೇವಲ ಕಟ್ಟಡಗಳ ನಿರ್ಮಾಣದಿಂದ ಅಳೆಯಲಾಗುವುದಿಲ್ಲ. ನಿರ್ಮಾಣವಾಗುವ ಕಟ್ಟಡಗಳು ಕೇವಲ ಸಾಂಕೇತಿಕವಾಗಿರದೆ, ಸಂಸ್ಕಾರ ತುಂಬುವ ಶ್ರದ್ಧಾ ಕೇಂದ್ರಗಳಾಗಬೇಕು. ಇಂತಹ ಭಜನಾ ಮಂದಿರಗಳು ಮಕ್ಕಳಲ್ಲಿ ಮತ್ತು ಯುವಜನರಲ್ಲಿ ಧಾರ್ಮಿಕ ಪ್ರಜ್ಞೆ, ನೈತಿಕ ಮೌಲ್ಯಗಳು ಹಾಗೂ ಸಮಾಜಸೇವೆಯ ಮನೋಭಾವ ಬೆಳೆಸುವ ಕೇಂದ್ರಗಳಾಗಿ ಪರಿವರ್ತನೆಯಾಗಬೇಕು ಎಂದು ಶುಭಹಾರೈಸಿದರು.

oplus_18

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಗಣಹೋಮ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ಹಾಗೂ ಪೂಜಾ ಕೈಂಕರ್ಯಗಳು ನಡೆದವು.

ಕಾರ್ಯಕ್ರಮದಲ್ಲಿ ಜಯಂತ ಗೌಡ ಗುರಿಪಳ್ಳ, ಹರೀಶ್ ಸಾಲಿಯಾನ್ ಮೊರ್ತಾಜೆ ಅಧ್ಯಕ್ಷರು, ಸಿಎ ಬ್ಯಾಂಕ್, ಸುದರ್ಶನ್ ಜೈನ್ ಬೆಳ್ಳೂರು ಗುತ್ತು, ವಸಂತ ಗೌಡ ಕಲ್ಲಾಜೆ (ಮಾಜಿ ಉಪಾಧ್ಯಕ್ಷರು, ಸಿಎ ಬ್ಯಾಂಕ್), ಆನಂದ ಗೌಡ ಬರಮೇಲು (ಉಪಾಧ್ಯಕ್ಷರು, ಸಿಎ ಬ್ಯಾಂಕ್), ಭರತ್ ಹಾನಿಬೆಟ್ಟು, ಗ್ರಾಮಪಂಚಾಯತ್ ಮಾಜಿ ಸದಸ್ಯರುಗಳಾದ, ಸೂರಜ್ ವಳಂಭ್ರ, ಅಶೋಕ್ ಕುಮಾರ್, ರತ್ನಾವತಿ ಕಾನರ್ಪ, ಸಾವಿತ್ರಿ, ಬೇಬಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಚಾಮುಂಡೇಶ್ವರಿ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದ ಧಾರ್ಮಿಕ ವಿಧಿವಿಧಾನಗಳನ್ನು ಆನಂದ ಭಟ್ ಪುರೋಹಿತರು ನೆರವೇರಿಸಿದರು. ಗ್ರಾಮಸ್ಥರು, ಭಕ್ತಾದಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಕೊನೆಯಲ್ಲಿ ಆಯೋಜಕರ ವತಿಯಿಂದ ಅತಿಥಿಗಳನ್ನು ಸನ್ಮಾನಿಸಿ, ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಲಾಯಿತು.

Spread the love
  • Related Posts

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ (ಜು.18) ನಿಧನ ಹೊಂದಿದರು, ಅವರಿಗೆ 85 ವರ್ಷ ವಯಸ್ಸಾಗಿತ್ತು. ಚೆನ್ನಮ್ಮ ಅವರಿಗೆ ಕಳೆದ ಮೂರು ದಿನಗಳಿಂದ…

    Spread the love

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಂಗಳೂರು, ಜು.17: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 6 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 7 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 10 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 9 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 15 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 16 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ