ಲಾಕ್ ಡೌನ್ ನಲ್ಲೊಂದು ಯುವಕರ ಮಹಾತ್ಕಾರ್ಯ, ಸೂರಿಲ್ಲದ ಕುಟುಂಬಕ್ಕೆ ಆಸರೆಯಾದ ವಿಶ್ವ ಹಿಂದೂ ಪರಿಷತ್, ಭಜರಂಗದಳದ ಚಾರ್ಮಾಡಿಯ ಕಾರ್ಯಕರ್ತರ ತಂಡ

ಬೆಳ್ತಂಗಡಿ: ಇಡೀ ದೇಶವೇ ಕೊರೋನಾ ಮಹಾಮಾರಿಗೆ ಸೆಡ್ದು ಹೊಡೆದು ತನ್ನ ಜನತೆಯ ಸುರಕ್ಷತೆಗೆ “lockdown” ಅಸ್ತಿತ್ವಕ್ಕೆ ತಂದ ಸಮಯದಲ್ಲಿ ಇಲ್ಲೊಂದು ಯುವತಂಡ ಸೂರಿಲ್ಲದೆ ಇರುವ ಬಡಕುಟುಂಬಕ್ಕೆ ಸೂರು ಕಲ್ಪಿಸುವ ಮಹತ್ಕಾರ್ಯ ಮಾಡಿ ಮಾದರಿಯಾಗಿದ್ದಾರೆ.

ಚಾರ್ಮಾಡಿ ವಿಶ್ವಹಿಂದೂ ಪರಿಷತ್ ವತಿಯಿಂದ ನಿರ್ಮಿಸಿದ ನೂತನ ಗೃಹ ಶ್ರೀರಾಮ ನಿವಾಸವನ್ನು ತಾಲೂಕು ವಿಶ್ವಹಿಂದೂ ಪರಿಷತ್ ಅಧ್ಯಕ್ಷ ನ್ಯಾಯವಾದಿ ಅಗರ್ತ ಸುಬ್ರಹ್ಮಣ್ಯ ಕುಮಾರ್ ದೀಪ ಬೆಳಗಿಸಿ ಗೃಹ ಪ್ರವೇಶವನ್ನು ನೆರವೇರಿಸಿದರು.

ಚಾರ್ಮಾಡಿ ವಿಶ್ವಹಿಂದೂ ಪರಿಷತ್ ವತಿಯಿಂದ ದಾನಿಗಳ ಹಾಗೂ ವಿಶ್ವ ಹಿಂದೂ ಪರಿಷತ್‌ನ ಯುವಕರು ಒಟ್ಟು ಸೇರಿ ರೂ.6 ಲಕ್ಷ ಅಂದಾಜು ವೆಚ್ಚದಲ್ಲಿ ನಿರ್ಮಿಸಿಕೊಟ್ಟ ಭಾರಿ ಪ್ರಸಂಶೆಗೆ ಪಾತ್ರರಾಗಿದ್ದಾರೆ.

ಯುವ ಸಮೂಹವು ಶ್ರಮಸೇವೆಯ ಮೂಲಕ ಅತೀ ಕಡಿಮೆ ಅವಧಿಯಲ್ಲಿ (65 ದಿನಗಳಲ್ಲಿ) ಮನೆ ನಿರ್ಮಾಣದ ತನ್ನ ಸಂಕಲ್ಪವನ್ನು ಪೂರ್ಣ ಗೊಳಿಸಿ “ಸೇವೆಯೆಮಗೆ ರಾಷ್ಟ್ರ ಕಾರ್ಯ ಋಣವ ಕಳೆ‍ಯೆ ಕಾರಣ ! ಮನುಜ ಜನ್ಮ ಧನ್ಯತೆಗಿದು ಏಕಮೇವ ಸಾಧನ” ಎಂಬ ಸಂಘ ಗೀತೆಯ ಪದ ಪುಂಜಗಳಿಗೆ ಮಾದರಿಯಾಗಿದೆ.

ಪ್ರಸಾದ್ ದಂಪತಿಗಳಿಗೆ ನಿರ್ಮಿಸಿಕೊಟ್ಟ ಮನೆ ಕೇವಲ 3 ತಿಂಗಳಲ್ಲಿ ಆಗಿದೆ. ವಾಸಕ್ಕೆ ಸೂರಿಲ್ಲದ ಪ್ರಸಾದ್ ದಂಪತಿಗೆ ಸೂರು ನಿರ್ಮಿಸಿದ ಎಲ್ಲರಿಗೂ ಪ್ರಸಾದ್ ಕೃತಜ್ಞತೆ ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ಜಿಲ್ಲಾ ಭಜರಂಗದಳ ಸಂಚಾಲಕ ಭಾಸ್ಕರ, ಧರ್ಮಸ್ಥಳ ತಾಲೂಕು ವಿಶ್ವ ಹಿಂದು ಪರಿಷತ್ ಕಾರ್ಯದರ್ಶಿ ನವೀನ್ ನೆರಿಯ, ತಾಲೂಕು ಗೋರಕ್ಷ ಸಂಚಾಲಕ ದಿನೇಶ್ ಚಾರ್ಮಾಡಿ, ಮಾಜಿ ಚಾರ್ಮಾಡಿ ಪಂಚಾಯತ್ ಅಧ್ಯಕ್ಷರುಗಳಾದ ಅಶೋಕ್ ಕುಮಾರ್ ಜೈನ್, ಶ್ರೀಮತಿ ಶಾರದಾ, ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಕಾಶ್ ಹೊಸಮಠ, ಮಾಜಿ ಅಧ್ಯಕ್ಷ ಕೋಡಿಹಿತ್ತಿಲು ಕೃಷ್ಣಭಟ್ ಉಜಿರೆ ಬೆಳಕು ವಿನಯಚಂದ್ರ, ಅಡಿಮಾರು ಬಾಲಕೃಷ್ಣ ಗೌಡ, ಅಖಿಲೇಶ್ ಭಟ್ ಚಾರ್ಮಾಡಿ.ರಥಬೀದಿ ಸುಧೀರ್, ಗೃಹನಿರ್ಮಾಣದ ಪ್ರೇರಣ ಶಕ್ತಿಗಳಾದ ಅಧ್ಯಕ್ಷ ಜಗದೀಶ, ಉಪಾಧ್ಯಕ್ಷ ಪವನ್ ರಾವ್, ಕಾರ್ಯದರ್ಶಿ ದಿವಿನೇಶ್, ಖಾಜಾಂಚಿ ಸುಧೀರ್ ಹಾಗೂ ಊರವರು ದಾನಿಗಳು ಉಪಸ್ಥಿತರಿದ್ದರು.

Spread the love
  • Related Posts

    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಂಗಳೂರು: (ನ.13) ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮ ಖಂಡಿಗ ನಿವಾಸಿ ಶ್ರೀಮತಿ ಚೆನ್ನಮ್ಮ ರಾಮ್ಮಣ್ಣ ಗೌಡ ದಂಪತಿಗಳ ಮೊಮ್ಮಗ ಬಂಟ್ವಾಳ ತಾಲೂಕು ವಿಟ್ಲ ದೇವಸ್ಯ ನೀವಾಸಿ ಶ್ರೀಮತಿ ಮೀನಾಕ್ಷಿ ಚೆನ್ನಪ್ಪ ದಂಪತಿಗಳ ಪುತ್ರ ವಿಟ್ಲ ಪಿ.ಎಂ. ಶ್ರೀ.…

    Spread the love

    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    ಬಾರ್ಯ : ಬಾರ್ಯ ಗ್ರಾಮದ ಮುಜ್ಜಾಳೆ -ಪೆರಿಯೊಟ್ಟು ಭಾಗದ ನಾಗರಿಕರ ಹಲವಾರು ವರ್ಷದ ಬಹುಬೇಡಿಕೆಯ ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ನೀಡಿದ ಭರವಸೆಯಂತೆ ರೂ. 10 ಲಕ್ಷ ಅನುದಾನ ಒದಗಿಸಿ ಕಾಂಕ್ರೀಟ್ ರಸ್ತೆ ನಿರ್ಮಾಣಗೊಂಡು ಸಂಚಾರಕ್ಕೆ ಸುಗಮವಾಗಿದೆ. ಶಾಸಕರಿಗೆ…

    Spread the love

    You Missed

    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • November 13, 2025
    • 14 views
    14 ನೇ ವಯೋಮಾನದ ಬಾಲಕರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ತೀರ್ಥೇಶ್ ಬೆಸ್ಟ್ ರೈಡರ್ ವೈಯಕ್ತಿಕ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    • By admin
    • November 12, 2025
    • 122 views
    ಬಾರ್ಯ ಗ್ರಾಮದ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ

    • By admin
    • November 11, 2025
    • 188 views
    ಹದಗೆಟ್ಟ ರಸ್ತೆ ದುರಸ್ತಿ, ಕಾನರ್ಪದ ನವೀನ್ ರವರಿಂದ ಸ್ವಂತ ಖರ್ಚಿನಲ್ಲಿ ದುರಸ್ತಿ ಕಾರ್ಯ

    ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾರಿಂದ ಕ್ರೀಡಾ ಸಮವಸ್ತ್ರ ವಿತರಣೆ

    • By admin
    • November 10, 2025
    • 67 views
    ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕ ಹರೀಶ್ ಪೂಂಜಾರಿಂದ ಕ್ರೀಡಾ ಸಮವಸ್ತ್ರ ವಿತರಣೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ಸಂಭ್ರಮ

    • By admin
    • November 9, 2025
    • 243 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನವೆಂಬರ್ 15ರಿಂದ 19ರವರೆಗೆ ಲಕ್ಷದೀಪೋತ್ಸವ ಸಂಭ್ರಮ

    ಪುತ್ತೂರಿನ ಶಾಸಕರ ಮನವಿ ಮೇರೆಗೆ ದೇವಸ್ಥಾನ, ದೈವಸ್ಥಾನ ಹಾಗೂ ಸಂಘ ಸಂಸ್ಥೆಗಳ ಜಾಗವನ್ನು ಸಕ್ರಮಗೊಳಿಸಲು ಕಂದಾಯ ಸಚಿವರಿಂದ ಆದೇಶ

    • By admin
    • November 5, 2025
    • 195 views
    ಪುತ್ತೂರಿನ ಶಾಸಕರ ಮನವಿ ಮೇರೆಗೆ ದೇವಸ್ಥಾನ, ದೈವಸ್ಥಾನ ಹಾಗೂ ಸಂಘ ಸಂಸ್ಥೆಗಳ ಜಾಗವನ್ನು ಸಕ್ರಮಗೊಳಿಸಲು ಕಂದಾಯ ಸಚಿವರಿಂದ ಆದೇಶ