ಲಾಕ್ ಡೌನ್ ನಲ್ಲೊಂದು ಯುವಕರ ಮಹಾತ್ಕಾರ್ಯ, ಸೂರಿಲ್ಲದ ಕುಟುಂಬಕ್ಕೆ ಆಸರೆಯಾದ ವಿಶ್ವ ಹಿಂದೂ ಪರಿಷತ್, ಭಜರಂಗದಳದ ಚಾರ್ಮಾಡಿಯ ಕಾರ್ಯಕರ್ತರ ತಂಡ

ಬೆಳ್ತಂಗಡಿ: ಇಡೀ ದೇಶವೇ ಕೊರೋನಾ ಮಹಾಮಾರಿಗೆ ಸೆಡ್ದು ಹೊಡೆದು ತನ್ನ ಜನತೆಯ ಸುರಕ್ಷತೆಗೆ “lockdown” ಅಸ್ತಿತ್ವಕ್ಕೆ ತಂದ ಸಮಯದಲ್ಲಿ ಇಲ್ಲೊಂದು ಯುವತಂಡ ಸೂರಿಲ್ಲದೆ ಇರುವ ಬಡಕುಟುಂಬಕ್ಕೆ ಸೂರು ಕಲ್ಪಿಸುವ ಮಹತ್ಕಾರ್ಯ ಮಾಡಿ ಮಾದರಿಯಾಗಿದ್ದಾರೆ.

ಚಾರ್ಮಾಡಿ ವಿಶ್ವಹಿಂದೂ ಪರಿಷತ್ ವತಿಯಿಂದ ನಿರ್ಮಿಸಿದ ನೂತನ ಗೃಹ ಶ್ರೀರಾಮ ನಿವಾಸವನ್ನು ತಾಲೂಕು ವಿಶ್ವಹಿಂದೂ ಪರಿಷತ್ ಅಧ್ಯಕ್ಷ ನ್ಯಾಯವಾದಿ ಅಗರ್ತ ಸುಬ್ರಹ್ಮಣ್ಯ ಕುಮಾರ್ ದೀಪ ಬೆಳಗಿಸಿ ಗೃಹ ಪ್ರವೇಶವನ್ನು ನೆರವೇರಿಸಿದರು.

ಚಾರ್ಮಾಡಿ ವಿಶ್ವಹಿಂದೂ ಪರಿಷತ್ ವತಿಯಿಂದ ದಾನಿಗಳ ಹಾಗೂ ವಿಶ್ವ ಹಿಂದೂ ಪರಿಷತ್‌ನ ಯುವಕರು ಒಟ್ಟು ಸೇರಿ ರೂ.6 ಲಕ್ಷ ಅಂದಾಜು ವೆಚ್ಚದಲ್ಲಿ ನಿರ್ಮಿಸಿಕೊಟ್ಟ ಭಾರಿ ಪ್ರಸಂಶೆಗೆ ಪಾತ್ರರಾಗಿದ್ದಾರೆ.

ಯುವ ಸಮೂಹವು ಶ್ರಮಸೇವೆಯ ಮೂಲಕ ಅತೀ ಕಡಿಮೆ ಅವಧಿಯಲ್ಲಿ (65 ದಿನಗಳಲ್ಲಿ) ಮನೆ ನಿರ್ಮಾಣದ ತನ್ನ ಸಂಕಲ್ಪವನ್ನು ಪೂರ್ಣ ಗೊಳಿಸಿ “ಸೇವೆಯೆಮಗೆ ರಾಷ್ಟ್ರ ಕಾರ್ಯ ಋಣವ ಕಳೆ‍ಯೆ ಕಾರಣ ! ಮನುಜ ಜನ್ಮ ಧನ್ಯತೆಗಿದು ಏಕಮೇವ ಸಾಧನ” ಎಂಬ ಸಂಘ ಗೀತೆಯ ಪದ ಪುಂಜಗಳಿಗೆ ಮಾದರಿಯಾಗಿದೆ.

ಪ್ರಸಾದ್ ದಂಪತಿಗಳಿಗೆ ನಿರ್ಮಿಸಿಕೊಟ್ಟ ಮನೆ ಕೇವಲ 3 ತಿಂಗಳಲ್ಲಿ ಆಗಿದೆ. ವಾಸಕ್ಕೆ ಸೂರಿಲ್ಲದ ಪ್ರಸಾದ್ ದಂಪತಿಗೆ ಸೂರು ನಿರ್ಮಿಸಿದ ಎಲ್ಲರಿಗೂ ಪ್ರಸಾದ್ ಕೃತಜ್ಞತೆ ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ಜಿಲ್ಲಾ ಭಜರಂಗದಳ ಸಂಚಾಲಕ ಭಾಸ್ಕರ, ಧರ್ಮಸ್ಥಳ ತಾಲೂಕು ವಿಶ್ವ ಹಿಂದು ಪರಿಷತ್ ಕಾರ್ಯದರ್ಶಿ ನವೀನ್ ನೆರಿಯ, ತಾಲೂಕು ಗೋರಕ್ಷ ಸಂಚಾಲಕ ದಿನೇಶ್ ಚಾರ್ಮಾಡಿ, ಮಾಜಿ ಚಾರ್ಮಾಡಿ ಪಂಚಾಯತ್ ಅಧ್ಯಕ್ಷರುಗಳಾದ ಅಶೋಕ್ ಕುಮಾರ್ ಜೈನ್, ಶ್ರೀಮತಿ ಶಾರದಾ, ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಕಾಶ್ ಹೊಸಮಠ, ಮಾಜಿ ಅಧ್ಯಕ್ಷ ಕೋಡಿಹಿತ್ತಿಲು ಕೃಷ್ಣಭಟ್ ಉಜಿರೆ ಬೆಳಕು ವಿನಯಚಂದ್ರ, ಅಡಿಮಾರು ಬಾಲಕೃಷ್ಣ ಗೌಡ, ಅಖಿಲೇಶ್ ಭಟ್ ಚಾರ್ಮಾಡಿ.ರಥಬೀದಿ ಸುಧೀರ್, ಗೃಹನಿರ್ಮಾಣದ ಪ್ರೇರಣ ಶಕ್ತಿಗಳಾದ ಅಧ್ಯಕ್ಷ ಜಗದೀಶ, ಉಪಾಧ್ಯಕ್ಷ ಪವನ್ ರಾವ್, ಕಾರ್ಯದರ್ಶಿ ದಿವಿನೇಶ್, ಖಾಜಾಂಚಿ ಸುಧೀರ್ ಹಾಗೂ ಊರವರು ದಾನಿಗಳು ಉಪಸ್ಥಿತರಿದ್ದರು.

Spread the love
  • Related Posts

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    ಬಂಗಾಡಿ, ಆ.7: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 29, 2026ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು…

    Spread the love

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    🖊️• ವರದಿ: ರಾಜೇಶ್ ಎಂ ಕಾನರ್ಪ ಬೆಳ್ತಂಗಡಿಯ ಶೈಕ್ಷಣಿಕ ಘನತೆಗೆ ಕಪ್ಪುಚುಕ್ಕೆಯಾಗುತ್ತಿರುವ ಮಾದಕ ದ್ರವ್ಯ ಜಾಲ: ಈಗಲೇ ಎಚ್ಚೆತ್ತುಕೊಳ್ಳಬೇಕಾದ ಸಮಯ ಒಂದು ಕಾಲದಲ್ಲಿ ಶಿಕ್ಷಣ, ಸಂಸ್ಕಾರ ಮತ್ತು ಶಾಂತಿಯ ನೆಲವೆಂದು ಗುರುತಿಸಿಕೊಂಡಿದ್ದ ಬೆಳ್ತಂಗಡಿ ತಾಲೂಕು ಇಂದು ರಾಜ್ಯದ ಶೈಕ್ಷಣಿಕ ನಕ್ಷೆಯಲ್ಲಿ ತನ್ನದೇ…

    Spread the love

    You Missed

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 3 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 9 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 5 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 7 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    • By admin
    • August 6, 2026
    • 5 views
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 6 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ