“ಬಜೆ”ಯಲ್ಲಿದೆ ಹಲವು ರೋಗಗಳ ಉಪಶಮನ ಮಾಡೋ ಶಕ್ತಿ

ಬಜೆ ‘ಏರೇಸಿ’ ಕುಟುಂಬಕ್ಕೆ ಸೇರಿದ ಸಸ್ಯಮೂಲಿಕೆ. ಇದು ಸಾಮಾನ್ಯವಾಗಿ ತಗ್ಗು ಪ್ರದೇಶದಲ್ಲಿ ಬೆಳೆಯುತ್ತದೆ. ನೀರಿನಂಶ ಜಾಸ್ತಿ ಇರುವ ಕಡೆ ಬೆಳೆಯುತ್ತದೆ. ಈ ಬೆಳೆಯು ವಾಣಿಜ್ಯವಾಗಿ ರಷ್ಯಾ, ಮಧ್ಯ ಯೂರೋಪ್, ರುಮೇನಿಯ, ಭಾರತ ಮತ್ತು ಜಪಾನ್ ದೇಶಗಳಲ್ಲಿ ಬೆಳೆಯುತ್ತಾರೆ. ಭಾರತದಲ್ಲಿ ಬಜೆ, ಕರ್ನಾಟಕ, ಮಣಿಪುರ, ಅರುಣಚಲಪ್ರದೇಶ, ಮೇಘಾಲಯ ಮತ್ತು ಹಿಮಾಲಯ ತಪ್ಪಲಲ್ಲಿ ೧೮೦೦ಮೀ. ಎತ್ತರದಲ್ಲಿ ಬೆಳೆಯಲಾಗುತ್ತದೆ.

ಕರ್ನಾಟಕದ ತುಮಕೂರು, ಕೊರಟಗೆರೆ, ಮಧುಗಿರಿ ತಾಲೂಕುಗಳಲ್ಲಿ ಗದ್ದೆಪ್ರದೇಶಗಳಲ್ಲಿ ಬೆಳೆಯಲಾಗುತ್ತದೆ. ಇದು ದೇಹಕ್ಕೆ ತುಂಬಾ ತಂಪು ಇದು ನೀರಿನಾಸರೆ ಇರುವ ಕಡೆ ಬೆಳೆಯುವ ಸಸಿಯಾಗಿದೆ. ಹಾಸನ, ತುಮಕೂರು, ಕೊರಟಗೆರೆ, ಮಧುಗಿರಿ ತಾಲೂಕುಗಳಲ್ಲಿ ಗದ್ದೆಗಳಲ್ಲಿ ಬಜೆಯನ್ನು ಬೆಳೆಸುತ್ತಾರೆ.

ಎಲೆಗಳು ಹಸಿರು ಮತ್ತು ಉದ್ದವಾಗಿದ್ದು ಚಿಕ್ಕ ಕಬ್ಬಿಣ ಪತ್ರಗಳನ್ನು ಹೋಲುತ್ತವೆ, ಬಢರುಗಳು ಗಂಟು ಗಂಟಾಗಿ ಉದ್ದವಾಗಿರುವುವು. ಬೇರುಗಳ ಮೇಲೆ ಮಾಸಲು ಬಣ್ಣದ ರೋಮಗಳಿರುವುವು, ಬೇರುಗಳಿಗೆ ಸುವಾಸನೆಯಿರುವುದು. ರುಚಿ ಖಾರವಾಗಿರುವಿದು. ಹೂಗಳು ಸಣ್ಣ ಸಣ್ಣದಾಗಿದ್ದು ತಿಳಿ ಹಸಿರಾಗಿರುವುವು. ಗ್ರಾಮವಾಸಿಗಳಿಗೆ, ಅಜ್ಜಿಯಂದಿಯರಿಗೆ ಚಿರಪರಿಚಿತ ಮೂಲಿಕೆ, ಸಣ್ಣ ಮಕ್ಕಳಿರುವ ಪ್ರತಿ ಮನೆಯಲ್ಲೂ ಬಜೆ ಇದ್ದೇ ಇರುತ್ತದೆ.

ಭತ್ತ ಬೆಳೆಯುವ ಮಣ್ಣುಗಳಾದ ಜೇಡಿ, ಗೋಡು ಮತ್ತು ಮೆಕ್ಕಲು ಮಣ್ಣಿನಲ್ಲಿ ಬೆಳೆಯಬಹುದು ಹಾಗೂ ನೀರಾವರಿ ಇರುವ ಅಥವಾ ನದೀ ತೀರದಲ್ಲೂ ಬೆಳೆಯಬಹುದು.

ಬಜೆಗಿಡದ ಕಂದುಗಳನ್ನು ಕತ್ತರಿಸಿ ತುಂಡು ಮಾಡಿ ಒಣಗಿಸಿ ಮಾರಾಟ ಮಾಡಲಾಗುತ್ತದೆ ಈ ಕಂದುವೇ ಔಷಧಿಗೆ ಮುಖ್ಯವಾಗಿದೆ.

ಬಜೆಯನ್ನು ಸುಟ್ಟು ಭಸ್ಮವನ್ನು ಮಾಡಿ, ಅರ್ಧ ಚಮಚ ಭಸ್ಮಕ್ಕೆ ಸ್ವಲ್ಪ ಜೇನುತುಪ್ಪ ಸೇರಿಸಿ ದಿವಸಕ್ಕೆ ೨-೩ ವೇಳೆ ತಿನ್ನುವುದರಿಂದ ನೆಗಡಿ, ಕೆಮ್ಮು ಕಡಿಮೆಯಾಗುತ್ತದೆ.

ಬಜೆಯನ್ನು ತೇಯ್ದು ತುಪ್ಪದೊಡನೆ ಕಲಸಿ ಮಕ್ಕಳಿಗೆ ತಿನ್ನಿಸುವುದರಿಂದ ವಾಕ್ ಶಕ್ತಿ, ಬುದ್ಧಿಶಕ್ತಿ ಮತ್ತು ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.

ಬಟ್ಟೆಯಲ್ಲಿ ಶೋಧಿಸಿದ ಬಜೆಯ ಚೂರ್ಣ 10ಗ್ರಾಂ ನಷ್ಟನ್ನು ದಿವಸಕ್ಕೊಮ್ಮೆ ಬೆಳಗ್ಗೆ ಬಿಸಿ ನೀರಿನಲ್ಲಿ ಅಥವಾ ಜೇನಿನಲ್ಲಾಗಲೀ ಇಟ್ಟು ೪೦ ದಿನ ಸೇವಿಸಿದರೆ ಮೂರ್ಛೆ ಗುಣವಾಗುತ್ತದೆ.

ಬಜೆಯನ್ನು ಅರೆದು ಲೇಪಿಸುವುದರಿಂದ, ಸಂಧಿವಾತ ಮತ್ತು ಲಕ್ವ ಗುಣವಾಗುತ್ತದೆ. ಹಸಿ ಬಜೆಯ ರಸವನ್ನು ಕಿವಿಗೆ ಹಿಂಡುವುದರಿಂದ ಕಿವಿನೋವು ಕಡಿಮೆಯಾಗುತ್ತದೆ.

ಬಜೆ, ನಾಗಕೇಸರಿ, ಹಿಪ್ಪಲಿ ಬೇರಿನ ಚೂರ್ಣಗಳನ್ನು ಸೇರಿಸಿ ಸೇವಿಸಿದರೆ ಸುಖ ಪ್ರಸವವಾಗುತ್ತದೆ.

ಬಜೆ ಸೇವಿಸುವುದರಿಂದ ಜಂತುಹುಳುಗಳು ನಾಶವಾಗುತ್ತವೆ. ಬಜೆಯ ಕಷಾಯ ಸೇವನೆಯಿಂದ ಮೂತ್ರಕೋಶದ ಕಲ್ಲು ಕರಗಿ ಹೋಗುತ್ತದೆ. ಮೂತ್ರ ಬಂಧವೂ ನಿವಾರಣೆಯಾಗುತ್ತದೆ.

ಮಕ್ಕಳಲ್ಲಿ ಹಲ್ಲು ಹುಟ್ಟುವಾಗ ಜ್ವರ ಕಾಣಿಸಿಕೊಂಡಲ್ಲಿ ಬಜೆಯನ್ನು ಅರೆದು ತಿನ್ನಿಸುವುದರಿಂದ ಜ್ವರ ವಾಸಿಯಾಗುತ್ತದೆ.

ಬಜೆ ಮತ್ತು ಸೈಂಧಲವಣ ಇವೆರಡನ್ನು ನೀರಿನೊಡನೆ ಕುಡಿಯುವುದರಿಂದ ಕಫ ವಾಂತಿಯಾಗಿ ಕೆಮ್ಮು ಶಮನವಾಗುತ್ತದೆ.

ಬಜೆಯ ಗಂಧ ತಯಾರಿಸಿ ಸೇವಿಸುವುದರಿಂದ ಅಜೀರ್ಣ, ಹೊಟ್ಟೆನೋವು ಮತ್ತು ಮೂಲವ್ಯಾಧಿ ಗುಣವಾಗುತ್ತದೆ.

ಒಂದು ತಿಂಗಳಿಂದ ಆರು ತಿಂಗಳ ಮಕ್ಕಳಲ್ಲಿ ಭೇದಿಯಾಗುತ್ತಿದ್ದಲ್ಲಿ ಹಾಗೂ ಹೊಟ್ಟೆ ಉಬ್ಬರವಿದ್ದಲ್ಲಿ ಬಜೆ ಪುಡಿಯನ್ನು ಹರಳೆಣ್ಣೆಯಲ್ಲಿ ಬೆರೆಸಿ ಹೊಟ್ಟೆಯ ಮೇಲೆ ಲೇಪಿಸಬೇಕು.

Spread the love
  • Related Posts

    ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್

    ಬೆಳ್ತಂಗಡಿ: ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುವ ಮೂಲಕ ರಾಜ್ಯಾದ್ಯಂತ ಗುಣಮಟ್ಟದ ಶಿಕ್ಷಣಕ್ಕೆ ಹೆಸರು ವಾಸಿಯಾಗಿರುವ ಶೈಕ್ಷಣಿಕ ರಂಗದಲ್ಲಿ ತನ್ನ ಸಾಧನೆಗಳಿಂದ ನೂತನ ಮೈಲಿಗಲ್ಲು ಸ್ಥಾಪಿಸಿದ ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಗಳು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಿನೂತನ ಅವಕಾಶ ಕಲ್ಪಿಸಿದೆ. 7…

    Spread the love

    ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ

    ನವದೆಹಲಿ (ಮಾ.27): ದೇಶದಲ್ಲಿ ಮತ್ತೆ ಲಾಕ್‌ಡೌನ್ ಜಾರಿಯಾಗುತ್ತೆ ಅನ್ನೋ ಸುದ್ದಿ ಹಬ್ಬಿದೆ. ಆದರೆ, ಕೇಂದ್ರ ಸರ್ಕಾರ ಈ ವದಂತಿಗಳನ್ನು ತಳ್ಳಿಹಾಕಿದೆ. ದೇಶದಲ್ಲಿ ಯಾವುದೇ ಕಾರಣಕ್ಕೂ ಲಾಕ್‌ಡೌನ್ ಇರುವುದಿಲ್ಲ, ಇಂತಹ ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಸ್ಪಷ್ಟಪಡಿಸಿದೆ. ಸದ್ಯಕ್ಕೆ ಲಾಕ್‌ಡೌನ್ ಮಾಡುವಂತಹ ಯಾವುದೇ ಪರಿಸ್ಥಿತಿ…

    Spread the love

    You Missed

    ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್

    • By admin
    • March 27, 2026
    • 22 views
    ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದ ಶಿಕ್ಷಣದ ಜೊತೆಗೆ ಮದ್ಯಾಹ್ನದ ಊಟ ಹಾಗೂ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು: ಸುಮಂತ್ ಕುಮಾರ್ ಜೈನ್

    ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ

    • By admin
    • March 27, 2026
    • 21 views
    ದೇಶದಲ್ಲಿ ‘ಎನರ್ಜಿ ಲಾಕ್‌ಡೌನ್’ ಸುಳ್ಳು ಸುದ್ದಿಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟನೆ

    ಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ

    • By admin
    • March 23, 2026
    • 78 views
    ಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ

    ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

    • By admin
    • March 22, 2026
    • 92 views
    ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

    ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

    • By admin
    • March 22, 2026
    • 49 views
    ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

    ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯ

    • By admin
    • March 21, 2026
    • 117 views
    ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯ