“ಬಜೆ”ಯಲ್ಲಿದೆ ಹಲವು ರೋಗಗಳ ಉಪಶಮನ ಮಾಡೋ ಶಕ್ತಿ

ಬಜೆ ‘ಏರೇಸಿ’ ಕುಟುಂಬಕ್ಕೆ ಸೇರಿದ ಸಸ್ಯಮೂಲಿಕೆ. ಇದು ಸಾಮಾನ್ಯವಾಗಿ ತಗ್ಗು ಪ್ರದೇಶದಲ್ಲಿ ಬೆಳೆಯುತ್ತದೆ. ನೀರಿನಂಶ ಜಾಸ್ತಿ ಇರುವ ಕಡೆ ಬೆಳೆಯುತ್ತದೆ. ಈ ಬೆಳೆಯು ವಾಣಿಜ್ಯವಾಗಿ ರಷ್ಯಾ, ಮಧ್ಯ ಯೂರೋಪ್, ರುಮೇನಿಯ, ಭಾರತ ಮತ್ತು ಜಪಾನ್ ದೇಶಗಳಲ್ಲಿ ಬೆಳೆಯುತ್ತಾರೆ. ಭಾರತದಲ್ಲಿ ಬಜೆ, ಕರ್ನಾಟಕ, ಮಣಿಪುರ, ಅರುಣಚಲಪ್ರದೇಶ, ಮೇಘಾಲಯ ಮತ್ತು ಹಿಮಾಲಯ ತಪ್ಪಲಲ್ಲಿ ೧೮೦೦ಮೀ. ಎತ್ತರದಲ್ಲಿ ಬೆಳೆಯಲಾಗುತ್ತದೆ.

ಕರ್ನಾಟಕದ ತುಮಕೂರು, ಕೊರಟಗೆರೆ, ಮಧುಗಿರಿ ತಾಲೂಕುಗಳಲ್ಲಿ ಗದ್ದೆಪ್ರದೇಶಗಳಲ್ಲಿ ಬೆಳೆಯಲಾಗುತ್ತದೆ. ಇದು ದೇಹಕ್ಕೆ ತುಂಬಾ ತಂಪು ಇದು ನೀರಿನಾಸರೆ ಇರುವ ಕಡೆ ಬೆಳೆಯುವ ಸಸಿಯಾಗಿದೆ. ಹಾಸನ, ತುಮಕೂರು, ಕೊರಟಗೆರೆ, ಮಧುಗಿರಿ ತಾಲೂಕುಗಳಲ್ಲಿ ಗದ್ದೆಗಳಲ್ಲಿ ಬಜೆಯನ್ನು ಬೆಳೆಸುತ್ತಾರೆ.

ಎಲೆಗಳು ಹಸಿರು ಮತ್ತು ಉದ್ದವಾಗಿದ್ದು ಚಿಕ್ಕ ಕಬ್ಬಿಣ ಪತ್ರಗಳನ್ನು ಹೋಲುತ್ತವೆ, ಬಢರುಗಳು ಗಂಟು ಗಂಟಾಗಿ ಉದ್ದವಾಗಿರುವುವು. ಬೇರುಗಳ ಮೇಲೆ ಮಾಸಲು ಬಣ್ಣದ ರೋಮಗಳಿರುವುವು, ಬೇರುಗಳಿಗೆ ಸುವಾಸನೆಯಿರುವುದು. ರುಚಿ ಖಾರವಾಗಿರುವಿದು. ಹೂಗಳು ಸಣ್ಣ ಸಣ್ಣದಾಗಿದ್ದು ತಿಳಿ ಹಸಿರಾಗಿರುವುವು. ಗ್ರಾಮವಾಸಿಗಳಿಗೆ, ಅಜ್ಜಿಯಂದಿಯರಿಗೆ ಚಿರಪರಿಚಿತ ಮೂಲಿಕೆ, ಸಣ್ಣ ಮಕ್ಕಳಿರುವ ಪ್ರತಿ ಮನೆಯಲ್ಲೂ ಬಜೆ ಇದ್ದೇ ಇರುತ್ತದೆ.

ಭತ್ತ ಬೆಳೆಯುವ ಮಣ್ಣುಗಳಾದ ಜೇಡಿ, ಗೋಡು ಮತ್ತು ಮೆಕ್ಕಲು ಮಣ್ಣಿನಲ್ಲಿ ಬೆಳೆಯಬಹುದು ಹಾಗೂ ನೀರಾವರಿ ಇರುವ ಅಥವಾ ನದೀ ತೀರದಲ್ಲೂ ಬೆಳೆಯಬಹುದು.

ಬಜೆಗಿಡದ ಕಂದುಗಳನ್ನು ಕತ್ತರಿಸಿ ತುಂಡು ಮಾಡಿ ಒಣಗಿಸಿ ಮಾರಾಟ ಮಾಡಲಾಗುತ್ತದೆ ಈ ಕಂದುವೇ ಔಷಧಿಗೆ ಮುಖ್ಯವಾಗಿದೆ.

ಬಜೆಯನ್ನು ಸುಟ್ಟು ಭಸ್ಮವನ್ನು ಮಾಡಿ, ಅರ್ಧ ಚಮಚ ಭಸ್ಮಕ್ಕೆ ಸ್ವಲ್ಪ ಜೇನುತುಪ್ಪ ಸೇರಿಸಿ ದಿವಸಕ್ಕೆ ೨-೩ ವೇಳೆ ತಿನ್ನುವುದರಿಂದ ನೆಗಡಿ, ಕೆಮ್ಮು ಕಡಿಮೆಯಾಗುತ್ತದೆ.

ಬಜೆಯನ್ನು ತೇಯ್ದು ತುಪ್ಪದೊಡನೆ ಕಲಸಿ ಮಕ್ಕಳಿಗೆ ತಿನ್ನಿಸುವುದರಿಂದ ವಾಕ್ ಶಕ್ತಿ, ಬುದ್ಧಿಶಕ್ತಿ ಮತ್ತು ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.

ಬಟ್ಟೆಯಲ್ಲಿ ಶೋಧಿಸಿದ ಬಜೆಯ ಚೂರ್ಣ 10ಗ್ರಾಂ ನಷ್ಟನ್ನು ದಿವಸಕ್ಕೊಮ್ಮೆ ಬೆಳಗ್ಗೆ ಬಿಸಿ ನೀರಿನಲ್ಲಿ ಅಥವಾ ಜೇನಿನಲ್ಲಾಗಲೀ ಇಟ್ಟು ೪೦ ದಿನ ಸೇವಿಸಿದರೆ ಮೂರ್ಛೆ ಗುಣವಾಗುತ್ತದೆ.

ಬಜೆಯನ್ನು ಅರೆದು ಲೇಪಿಸುವುದರಿಂದ, ಸಂಧಿವಾತ ಮತ್ತು ಲಕ್ವ ಗುಣವಾಗುತ್ತದೆ. ಹಸಿ ಬಜೆಯ ರಸವನ್ನು ಕಿವಿಗೆ ಹಿಂಡುವುದರಿಂದ ಕಿವಿನೋವು ಕಡಿಮೆಯಾಗುತ್ತದೆ.

ಬಜೆ, ನಾಗಕೇಸರಿ, ಹಿಪ್ಪಲಿ ಬೇರಿನ ಚೂರ್ಣಗಳನ್ನು ಸೇರಿಸಿ ಸೇವಿಸಿದರೆ ಸುಖ ಪ್ರಸವವಾಗುತ್ತದೆ.

ಬಜೆ ಸೇವಿಸುವುದರಿಂದ ಜಂತುಹುಳುಗಳು ನಾಶವಾಗುತ್ತವೆ. ಬಜೆಯ ಕಷಾಯ ಸೇವನೆಯಿಂದ ಮೂತ್ರಕೋಶದ ಕಲ್ಲು ಕರಗಿ ಹೋಗುತ್ತದೆ. ಮೂತ್ರ ಬಂಧವೂ ನಿವಾರಣೆಯಾಗುತ್ತದೆ.

ಮಕ್ಕಳಲ್ಲಿ ಹಲ್ಲು ಹುಟ್ಟುವಾಗ ಜ್ವರ ಕಾಣಿಸಿಕೊಂಡಲ್ಲಿ ಬಜೆಯನ್ನು ಅರೆದು ತಿನ್ನಿಸುವುದರಿಂದ ಜ್ವರ ವಾಸಿಯಾಗುತ್ತದೆ.

ಬಜೆ ಮತ್ತು ಸೈಂಧಲವಣ ಇವೆರಡನ್ನು ನೀರಿನೊಡನೆ ಕುಡಿಯುವುದರಿಂದ ಕಫ ವಾಂತಿಯಾಗಿ ಕೆಮ್ಮು ಶಮನವಾಗುತ್ತದೆ.

ಬಜೆಯ ಗಂಧ ತಯಾರಿಸಿ ಸೇವಿಸುವುದರಿಂದ ಅಜೀರ್ಣ, ಹೊಟ್ಟೆನೋವು ಮತ್ತು ಮೂಲವ್ಯಾಧಿ ಗುಣವಾಗುತ್ತದೆ.

ಒಂದು ತಿಂಗಳಿಂದ ಆರು ತಿಂಗಳ ಮಕ್ಕಳಲ್ಲಿ ಭೇದಿಯಾಗುತ್ತಿದ್ದಲ್ಲಿ ಹಾಗೂ ಹೊಟ್ಟೆ ಉಬ್ಬರವಿದ್ದಲ್ಲಿ ಬಜೆ ಪುಡಿಯನ್ನು ಹರಳೆಣ್ಣೆಯಲ್ಲಿ ಬೆರೆಸಿ ಹೊಟ್ಟೆಯ ಮೇಲೆ ಲೇಪಿಸಬೇಕು.

Spread the love
  • Related Posts

    ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ

    ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ(ರಿ) ಬೆಳ್ತಂಗಡಿ ನೇತೃತ್ವದಲ್ಲಿ ದಿನಾಂಕ 10.02.2026 ರಂದು ತಾಲೂಕಿನಾದ್ಯಂತ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು ಶಾಲಾ ಮಕ್ಕಳಿಗೆ ಮತ್ತು ಜನಸಾಮಾನ್ಯರಿಗೆ ದಿನ ನಿತ್ಯ ಶಾಲೆಗೆ ಹಾಗೂ ಕೆಲಸ ಕಾರ್ಯಗಳಿಗೆ ಹೋಗಲು…

    Spread the love

    ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

    Manglore: ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ಹೈಕೋರ್ಟ್ ನ್ಯಾಯಾಧೀಶರಾದ ಶ್ರೀ ನರೇಂದ್ರ ಪ್ರಸಾದ್ ರನ್ನು ಹೈಕೋರ್ಟ್ ನ್ಯಾಯವಾದಿ ಶ್ರೀ ಪಿ ಪಿ ಹೆಗ್ಡೆ ಯವರ ಜೊತೆ ಭೇಟಿಮಾಡಿ ದಕ್ಷಿಣ ಕನ್ನಡ ಜಿಲ್ಹಾ ವಕೀಲರ, ವಕೀಲರ ಭವನ ಮತ್ತು ನ್ಯಾಯಾಲಯಗಳ ಕುಂದುಕೊರತೆಗಳ…

    Spread the love

    You Missed

    ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ

    • By admin
    • February 10, 2026
    • 22 views
    ಬೆಳ್ತಂಗಡಿ ಚಿರತೆ ಹಾವಳಿ ಕ್ರಮಕ್ಕೆ ಒತ್ತಾಯಿಸಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ದಿಂದ ಮನವಿ

    ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

    • By admin
    • February 10, 2026
    • 31 views
    ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    • By admin
    • February 9, 2026
    • 69 views
    ಚಿರತೆ ದಾಳಿ ಕೂಲಿಕಾರ್ಮಿಕರಿಗೆ ಗಾಯ ಆನೆಹಾವಳಿಯ ಬಳಿಕ ಇದೀಗ ಚಿರತೆ ಕಾಟಕ್ಕೆ ಬೆಚ್ಚಿಬಿದ್ದ ಕಾರ್ಮಿಕರು

    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    • By admin
    • February 8, 2026
    • 49 views
    ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    • By admin
    • February 7, 2026
    • 35 views
    ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಜೊತೆಗೆ ಧಾರ್ಮಿಕ ನಂಬಿಕೆ ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸುವ  ಜವಾಬ್ದಾರಿ ತಾಯಂದಿರದ್ದು: ತೆಂಕಲಗೂಡು ಶ್ರೀ

    ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ

    • By admin
    • February 7, 2026
    • 242 views
    ಗ್ರಾ.ಪಂ ಕಡಿರುದ್ಯಾವರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಾನರ್ಪದಲ್ಲಿ  ನಿರ್ಮಾಣ ಗೊಂಡ ಮುಕ್ತಿದಾಮ ಲೋಕಾರ್ಪಣೆ