“ಬಜೆ”ಯಲ್ಲಿದೆ ಹಲವು ರೋಗಗಳ ಉಪಶಮನ ಮಾಡೋ ಶಕ್ತಿ

ಬಜೆ ‘ಏರೇಸಿ’ ಕುಟುಂಬಕ್ಕೆ ಸೇರಿದ ಸಸ್ಯಮೂಲಿಕೆ. ಇದು ಸಾಮಾನ್ಯವಾಗಿ ತಗ್ಗು ಪ್ರದೇಶದಲ್ಲಿ ಬೆಳೆಯುತ್ತದೆ. ನೀರಿನಂಶ ಜಾಸ್ತಿ ಇರುವ ಕಡೆ ಬೆಳೆಯುತ್ತದೆ. ಈ ಬೆಳೆಯು ವಾಣಿಜ್ಯವಾಗಿ ರಷ್ಯಾ, ಮಧ್ಯ ಯೂರೋಪ್, ರುಮೇನಿಯ, ಭಾರತ ಮತ್ತು ಜಪಾನ್ ದೇಶಗಳಲ್ಲಿ ಬೆಳೆಯುತ್ತಾರೆ. ಭಾರತದಲ್ಲಿ ಬಜೆ, ಕರ್ನಾಟಕ, ಮಣಿಪುರ, ಅರುಣಚಲಪ್ರದೇಶ, ಮೇಘಾಲಯ ಮತ್ತು ಹಿಮಾಲಯ ತಪ್ಪಲಲ್ಲಿ ೧೮೦೦ಮೀ. ಎತ್ತರದಲ್ಲಿ ಬೆಳೆಯಲಾಗುತ್ತದೆ.

ಕರ್ನಾಟಕದ ತುಮಕೂರು, ಕೊರಟಗೆರೆ, ಮಧುಗಿರಿ ತಾಲೂಕುಗಳಲ್ಲಿ ಗದ್ದೆಪ್ರದೇಶಗಳಲ್ಲಿ ಬೆಳೆಯಲಾಗುತ್ತದೆ. ಇದು ದೇಹಕ್ಕೆ ತುಂಬಾ ತಂಪು ಇದು ನೀರಿನಾಸರೆ ಇರುವ ಕಡೆ ಬೆಳೆಯುವ ಸಸಿಯಾಗಿದೆ. ಹಾಸನ, ತುಮಕೂರು, ಕೊರಟಗೆರೆ, ಮಧುಗಿರಿ ತಾಲೂಕುಗಳಲ್ಲಿ ಗದ್ದೆಗಳಲ್ಲಿ ಬಜೆಯನ್ನು ಬೆಳೆಸುತ್ತಾರೆ.

ಎಲೆಗಳು ಹಸಿರು ಮತ್ತು ಉದ್ದವಾಗಿದ್ದು ಚಿಕ್ಕ ಕಬ್ಬಿಣ ಪತ್ರಗಳನ್ನು ಹೋಲುತ್ತವೆ, ಬಢರುಗಳು ಗಂಟು ಗಂಟಾಗಿ ಉದ್ದವಾಗಿರುವುವು. ಬೇರುಗಳ ಮೇಲೆ ಮಾಸಲು ಬಣ್ಣದ ರೋಮಗಳಿರುವುವು, ಬೇರುಗಳಿಗೆ ಸುವಾಸನೆಯಿರುವುದು. ರುಚಿ ಖಾರವಾಗಿರುವಿದು. ಹೂಗಳು ಸಣ್ಣ ಸಣ್ಣದಾಗಿದ್ದು ತಿಳಿ ಹಸಿರಾಗಿರುವುವು. ಗ್ರಾಮವಾಸಿಗಳಿಗೆ, ಅಜ್ಜಿಯಂದಿಯರಿಗೆ ಚಿರಪರಿಚಿತ ಮೂಲಿಕೆ, ಸಣ್ಣ ಮಕ್ಕಳಿರುವ ಪ್ರತಿ ಮನೆಯಲ್ಲೂ ಬಜೆ ಇದ್ದೇ ಇರುತ್ತದೆ.

ಭತ್ತ ಬೆಳೆಯುವ ಮಣ್ಣುಗಳಾದ ಜೇಡಿ, ಗೋಡು ಮತ್ತು ಮೆಕ್ಕಲು ಮಣ್ಣಿನಲ್ಲಿ ಬೆಳೆಯಬಹುದು ಹಾಗೂ ನೀರಾವರಿ ಇರುವ ಅಥವಾ ನದೀ ತೀರದಲ್ಲೂ ಬೆಳೆಯಬಹುದು.

ಬಜೆಗಿಡದ ಕಂದುಗಳನ್ನು ಕತ್ತರಿಸಿ ತುಂಡು ಮಾಡಿ ಒಣಗಿಸಿ ಮಾರಾಟ ಮಾಡಲಾಗುತ್ತದೆ ಈ ಕಂದುವೇ ಔಷಧಿಗೆ ಮುಖ್ಯವಾಗಿದೆ.

ಬಜೆಯನ್ನು ಸುಟ್ಟು ಭಸ್ಮವನ್ನು ಮಾಡಿ, ಅರ್ಧ ಚಮಚ ಭಸ್ಮಕ್ಕೆ ಸ್ವಲ್ಪ ಜೇನುತುಪ್ಪ ಸೇರಿಸಿ ದಿವಸಕ್ಕೆ ೨-೩ ವೇಳೆ ತಿನ್ನುವುದರಿಂದ ನೆಗಡಿ, ಕೆಮ್ಮು ಕಡಿಮೆಯಾಗುತ್ತದೆ.

ಬಜೆಯನ್ನು ತೇಯ್ದು ತುಪ್ಪದೊಡನೆ ಕಲಸಿ ಮಕ್ಕಳಿಗೆ ತಿನ್ನಿಸುವುದರಿಂದ ವಾಕ್ ಶಕ್ತಿ, ಬುದ್ಧಿಶಕ್ತಿ ಮತ್ತು ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.

ಬಟ್ಟೆಯಲ್ಲಿ ಶೋಧಿಸಿದ ಬಜೆಯ ಚೂರ್ಣ 10ಗ್ರಾಂ ನಷ್ಟನ್ನು ದಿವಸಕ್ಕೊಮ್ಮೆ ಬೆಳಗ್ಗೆ ಬಿಸಿ ನೀರಿನಲ್ಲಿ ಅಥವಾ ಜೇನಿನಲ್ಲಾಗಲೀ ಇಟ್ಟು ೪೦ ದಿನ ಸೇವಿಸಿದರೆ ಮೂರ್ಛೆ ಗುಣವಾಗುತ್ತದೆ.

ಬಜೆಯನ್ನು ಅರೆದು ಲೇಪಿಸುವುದರಿಂದ, ಸಂಧಿವಾತ ಮತ್ತು ಲಕ್ವ ಗುಣವಾಗುತ್ತದೆ. ಹಸಿ ಬಜೆಯ ರಸವನ್ನು ಕಿವಿಗೆ ಹಿಂಡುವುದರಿಂದ ಕಿವಿನೋವು ಕಡಿಮೆಯಾಗುತ್ತದೆ.

ಬಜೆ, ನಾಗಕೇಸರಿ, ಹಿಪ್ಪಲಿ ಬೇರಿನ ಚೂರ್ಣಗಳನ್ನು ಸೇರಿಸಿ ಸೇವಿಸಿದರೆ ಸುಖ ಪ್ರಸವವಾಗುತ್ತದೆ.

ಬಜೆ ಸೇವಿಸುವುದರಿಂದ ಜಂತುಹುಳುಗಳು ನಾಶವಾಗುತ್ತವೆ. ಬಜೆಯ ಕಷಾಯ ಸೇವನೆಯಿಂದ ಮೂತ್ರಕೋಶದ ಕಲ್ಲು ಕರಗಿ ಹೋಗುತ್ತದೆ. ಮೂತ್ರ ಬಂಧವೂ ನಿವಾರಣೆಯಾಗುತ್ತದೆ.

ಮಕ್ಕಳಲ್ಲಿ ಹಲ್ಲು ಹುಟ್ಟುವಾಗ ಜ್ವರ ಕಾಣಿಸಿಕೊಂಡಲ್ಲಿ ಬಜೆಯನ್ನು ಅರೆದು ತಿನ್ನಿಸುವುದರಿಂದ ಜ್ವರ ವಾಸಿಯಾಗುತ್ತದೆ.

ಬಜೆ ಮತ್ತು ಸೈಂಧಲವಣ ಇವೆರಡನ್ನು ನೀರಿನೊಡನೆ ಕುಡಿಯುವುದರಿಂದ ಕಫ ವಾಂತಿಯಾಗಿ ಕೆಮ್ಮು ಶಮನವಾಗುತ್ತದೆ.

ಬಜೆಯ ಗಂಧ ತಯಾರಿಸಿ ಸೇವಿಸುವುದರಿಂದ ಅಜೀರ್ಣ, ಹೊಟ್ಟೆನೋವು ಮತ್ತು ಮೂಲವ್ಯಾಧಿ ಗುಣವಾಗುತ್ತದೆ.

ಒಂದು ತಿಂಗಳಿಂದ ಆರು ತಿಂಗಳ ಮಕ್ಕಳಲ್ಲಿ ಭೇದಿಯಾಗುತ್ತಿದ್ದಲ್ಲಿ ಹಾಗೂ ಹೊಟ್ಟೆ ಉಬ್ಬರವಿದ್ದಲ್ಲಿ ಬಜೆ ಪುಡಿಯನ್ನು ಹರಳೆಣ್ಣೆಯಲ್ಲಿ ಬೆರೆಸಿ ಹೊಟ್ಟೆಯ ಮೇಲೆ ಲೇಪಿಸಬೇಕು.

Spread the love
  • Related Posts

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಬಂಟ್ವಾಳ: ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ, ಐ.ಪಿ.ಎಸ್ ರವರ ನೇತೃತ್ವದ ತಂಡವು, ಬಂಟ್ವಾಳ‌ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಎಂಬಲ್ಲಿ ದಾಳಿ ನಡೆಸಿ, ಸುಮಾರು 2 ಲಕ್ಷ 25 ಸಾವಿರ ಮೌಲ್ಯದ 22.57…

    Spread the love

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ಗುರುವಾಯನಕೆರೆ, ಆ.14: ಎಕ್ಸೆಲ್ ಪದವಿ ಪೂರ್ವ ಕಾಲೇಜು, ಗುರುವಾಯನಕೆರೆಯಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದ ಅಂಗವಾಗಿ ಆಗಸ್ಟ್ 15 ಹಾಗೂ 16ರಂದು ಎರಡು ದಿನಗಳ ಕಾಲ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಶೈಕ್ಷಣಿಕ ಸಾಧಕರ ಅಭಿನಂದನೆ ಹಾಗೂ “ರಕ್ಷಕ ನಮನ-2026” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆಗಸ್ಟ್ 15ರಂದು…

    Spread the love

    You Missed

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 3 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 3 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 11 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 12 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 8 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 11 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ