“ಬಜೆ”ಯಲ್ಲಿದೆ ಹಲವು ರೋಗಗಳ ಉಪಶಮನ ಮಾಡೋ ಶಕ್ತಿ

ಬಜೆ ‘ಏರೇಸಿ’ ಕುಟುಂಬಕ್ಕೆ ಸೇರಿದ ಸಸ್ಯಮೂಲಿಕೆ. ಇದು ಸಾಮಾನ್ಯವಾಗಿ ತಗ್ಗು ಪ್ರದೇಶದಲ್ಲಿ ಬೆಳೆಯುತ್ತದೆ. ನೀರಿನಂಶ ಜಾಸ್ತಿ ಇರುವ ಕಡೆ ಬೆಳೆಯುತ್ತದೆ. ಈ ಬೆಳೆಯು ವಾಣಿಜ್ಯವಾಗಿ ರಷ್ಯಾ, ಮಧ್ಯ ಯೂರೋಪ್, ರುಮೇನಿಯ, ಭಾರತ ಮತ್ತು ಜಪಾನ್ ದೇಶಗಳಲ್ಲಿ ಬೆಳೆಯುತ್ತಾರೆ. ಭಾರತದಲ್ಲಿ ಬಜೆ, ಕರ್ನಾಟಕ, ಮಣಿಪುರ, ಅರುಣಚಲಪ್ರದೇಶ, ಮೇಘಾಲಯ ಮತ್ತು ಹಿಮಾಲಯ ತಪ್ಪಲಲ್ಲಿ ೧೮೦೦ಮೀ. ಎತ್ತರದಲ್ಲಿ ಬೆಳೆಯಲಾಗುತ್ತದೆ.

ಕರ್ನಾಟಕದ ತುಮಕೂರು, ಕೊರಟಗೆರೆ, ಮಧುಗಿರಿ ತಾಲೂಕುಗಳಲ್ಲಿ ಗದ್ದೆಪ್ರದೇಶಗಳಲ್ಲಿ ಬೆಳೆಯಲಾಗುತ್ತದೆ. ಇದು ದೇಹಕ್ಕೆ ತುಂಬಾ ತಂಪು ಇದು ನೀರಿನಾಸರೆ ಇರುವ ಕಡೆ ಬೆಳೆಯುವ ಸಸಿಯಾಗಿದೆ. ಹಾಸನ, ತುಮಕೂರು, ಕೊರಟಗೆರೆ, ಮಧುಗಿರಿ ತಾಲೂಕುಗಳಲ್ಲಿ ಗದ್ದೆಗಳಲ್ಲಿ ಬಜೆಯನ್ನು ಬೆಳೆಸುತ್ತಾರೆ.

ಎಲೆಗಳು ಹಸಿರು ಮತ್ತು ಉದ್ದವಾಗಿದ್ದು ಚಿಕ್ಕ ಕಬ್ಬಿಣ ಪತ್ರಗಳನ್ನು ಹೋಲುತ್ತವೆ, ಬಢರುಗಳು ಗಂಟು ಗಂಟಾಗಿ ಉದ್ದವಾಗಿರುವುವು. ಬೇರುಗಳ ಮೇಲೆ ಮಾಸಲು ಬಣ್ಣದ ರೋಮಗಳಿರುವುವು, ಬೇರುಗಳಿಗೆ ಸುವಾಸನೆಯಿರುವುದು. ರುಚಿ ಖಾರವಾಗಿರುವಿದು. ಹೂಗಳು ಸಣ್ಣ ಸಣ್ಣದಾಗಿದ್ದು ತಿಳಿ ಹಸಿರಾಗಿರುವುವು. ಗ್ರಾಮವಾಸಿಗಳಿಗೆ, ಅಜ್ಜಿಯಂದಿಯರಿಗೆ ಚಿರಪರಿಚಿತ ಮೂಲಿಕೆ, ಸಣ್ಣ ಮಕ್ಕಳಿರುವ ಪ್ರತಿ ಮನೆಯಲ್ಲೂ ಬಜೆ ಇದ್ದೇ ಇರುತ್ತದೆ.

ಭತ್ತ ಬೆಳೆಯುವ ಮಣ್ಣುಗಳಾದ ಜೇಡಿ, ಗೋಡು ಮತ್ತು ಮೆಕ್ಕಲು ಮಣ್ಣಿನಲ್ಲಿ ಬೆಳೆಯಬಹುದು ಹಾಗೂ ನೀರಾವರಿ ಇರುವ ಅಥವಾ ನದೀ ತೀರದಲ್ಲೂ ಬೆಳೆಯಬಹುದು.

ಬಜೆಗಿಡದ ಕಂದುಗಳನ್ನು ಕತ್ತರಿಸಿ ತುಂಡು ಮಾಡಿ ಒಣಗಿಸಿ ಮಾರಾಟ ಮಾಡಲಾಗುತ್ತದೆ ಈ ಕಂದುವೇ ಔಷಧಿಗೆ ಮುಖ್ಯವಾಗಿದೆ.

ಬಜೆಯನ್ನು ಸುಟ್ಟು ಭಸ್ಮವನ್ನು ಮಾಡಿ, ಅರ್ಧ ಚಮಚ ಭಸ್ಮಕ್ಕೆ ಸ್ವಲ್ಪ ಜೇನುತುಪ್ಪ ಸೇರಿಸಿ ದಿವಸಕ್ಕೆ ೨-೩ ವೇಳೆ ತಿನ್ನುವುದರಿಂದ ನೆಗಡಿ, ಕೆಮ್ಮು ಕಡಿಮೆಯಾಗುತ್ತದೆ.

ಬಜೆಯನ್ನು ತೇಯ್ದು ತುಪ್ಪದೊಡನೆ ಕಲಸಿ ಮಕ್ಕಳಿಗೆ ತಿನ್ನಿಸುವುದರಿಂದ ವಾಕ್ ಶಕ್ತಿ, ಬುದ್ಧಿಶಕ್ತಿ ಮತ್ತು ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.

ಬಟ್ಟೆಯಲ್ಲಿ ಶೋಧಿಸಿದ ಬಜೆಯ ಚೂರ್ಣ 10ಗ್ರಾಂ ನಷ್ಟನ್ನು ದಿವಸಕ್ಕೊಮ್ಮೆ ಬೆಳಗ್ಗೆ ಬಿಸಿ ನೀರಿನಲ್ಲಿ ಅಥವಾ ಜೇನಿನಲ್ಲಾಗಲೀ ಇಟ್ಟು ೪೦ ದಿನ ಸೇವಿಸಿದರೆ ಮೂರ್ಛೆ ಗುಣವಾಗುತ್ತದೆ.

ಬಜೆಯನ್ನು ಅರೆದು ಲೇಪಿಸುವುದರಿಂದ, ಸಂಧಿವಾತ ಮತ್ತು ಲಕ್ವ ಗುಣವಾಗುತ್ತದೆ. ಹಸಿ ಬಜೆಯ ರಸವನ್ನು ಕಿವಿಗೆ ಹಿಂಡುವುದರಿಂದ ಕಿವಿನೋವು ಕಡಿಮೆಯಾಗುತ್ತದೆ.

ಬಜೆ, ನಾಗಕೇಸರಿ, ಹಿಪ್ಪಲಿ ಬೇರಿನ ಚೂರ್ಣಗಳನ್ನು ಸೇರಿಸಿ ಸೇವಿಸಿದರೆ ಸುಖ ಪ್ರಸವವಾಗುತ್ತದೆ.

ಬಜೆ ಸೇವಿಸುವುದರಿಂದ ಜಂತುಹುಳುಗಳು ನಾಶವಾಗುತ್ತವೆ. ಬಜೆಯ ಕಷಾಯ ಸೇವನೆಯಿಂದ ಮೂತ್ರಕೋಶದ ಕಲ್ಲು ಕರಗಿ ಹೋಗುತ್ತದೆ. ಮೂತ್ರ ಬಂಧವೂ ನಿವಾರಣೆಯಾಗುತ್ತದೆ.

ಮಕ್ಕಳಲ್ಲಿ ಹಲ್ಲು ಹುಟ್ಟುವಾಗ ಜ್ವರ ಕಾಣಿಸಿಕೊಂಡಲ್ಲಿ ಬಜೆಯನ್ನು ಅರೆದು ತಿನ್ನಿಸುವುದರಿಂದ ಜ್ವರ ವಾಸಿಯಾಗುತ್ತದೆ.

ಬಜೆ ಮತ್ತು ಸೈಂಧಲವಣ ಇವೆರಡನ್ನು ನೀರಿನೊಡನೆ ಕುಡಿಯುವುದರಿಂದ ಕಫ ವಾಂತಿಯಾಗಿ ಕೆಮ್ಮು ಶಮನವಾಗುತ್ತದೆ.

ಬಜೆಯ ಗಂಧ ತಯಾರಿಸಿ ಸೇವಿಸುವುದರಿಂದ ಅಜೀರ್ಣ, ಹೊಟ್ಟೆನೋವು ಮತ್ತು ಮೂಲವ್ಯಾಧಿ ಗುಣವಾಗುತ್ತದೆ.

ಒಂದು ತಿಂಗಳಿಂದ ಆರು ತಿಂಗಳ ಮಕ್ಕಳಲ್ಲಿ ಭೇದಿಯಾಗುತ್ತಿದ್ದಲ್ಲಿ ಹಾಗೂ ಹೊಟ್ಟೆ ಉಬ್ಬರವಿದ್ದಲ್ಲಿ ಬಜೆ ಪುಡಿಯನ್ನು ಹರಳೆಣ್ಣೆಯಲ್ಲಿ ಬೆರೆಸಿ ಹೊಟ್ಟೆಯ ಮೇಲೆ ಲೇಪಿಸಬೇಕು.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 6 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 9 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    “ರೀಚಾರ್ಜ್ ಇಲ್ಲದೆ ಆರಿದ ಹೆದ್ದಾರಿ ದಾರಿದೀಪಗಳು; ಪೋಸ್ಟ್‌ಪೇಯ್ಡ್ ಮೀಟರ್‌ಗೆ ಮನವಿ” ಹೆದ್ದಾರಿ ಬದಿ ದಾರಿದೀಪಕ್ಕೆ ಪ್ರೀ-ಪೇಯ್ಡ್ ರೀಚಾರ್ಜ್: ಕತ್ತಲಲ್ಲಿ ದಾರಿಹೋಕರ ಪರದಾಟ

    • By admin
    • July 15, 2026
    • 7 views
    “ರೀಚಾರ್ಜ್ ಇಲ್ಲದೆ ಆರಿದ ಹೆದ್ದಾರಿ ದಾರಿದೀಪಗಳು; ಪೋಸ್ಟ್‌ಪೇಯ್ಡ್ ಮೀಟರ್‌ಗೆ ಮನವಿ” ಹೆದ್ದಾರಿ ಬದಿ ದಾರಿದೀಪಕ್ಕೆ ಪ್ರೀ-ಪೇಯ್ಡ್ ರೀಚಾರ್ಜ್: ಕತ್ತಲಲ್ಲಿ ದಾರಿಹೋಕರ ಪರದಾಟ

    ಬಿ.ಟಿ. ರಂಜನ್ ವಾರ್ಷಿಕ ಪ್ರಶಸ್ತಿಗೆ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆ

    • By admin
    • July 15, 2026
    • 15 views
    ಬಿ.ಟಿ. ರಂಜನ್ ವಾರ್ಷಿಕ ಪ್ರಶಸ್ತಿಗೆ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆ

    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    • By admin
    • July 13, 2026
    • 9 views
    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.

    • By admin
    • July 12, 2026
    • 15 views
    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.