
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರೆಯಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಭಾನುವಾರ ಕೊನೆಯುಸಿರೆಳೆದಿದ್ದಾನೆ. ತೀವ್ರ ಅಸ್ವಸ್ಥಗೊಂಡಿದ್ದ ಬಲರಾಮ ಆನೆಗೆ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.

ಬಲರಾಮನಿಗೆ ಸುಮಾರು 67 ವರ್ಷ ಪ್ರಾಯವಾಗಿತ್ತು ಕಳೆದ ಕಳೆದ ಹತ್ತು ದಿನಗಳಿಂದ ಬಾಯಿಯಲ್ಲಿ ಹುಣ್ಣಾಗಿ ನಿತ್ರಾಣಗೊಂಡಿದ್ದ, ಬಲರಾಮನಿಗೆ ಟಿ.ಬಿ.(ಕ್ಷಯ) ಇರಬಹುದೆಂದು ವೈದ್ಯರು ಶಂಕಿಸಿದ್ದರು., ವೈದ್ಯಕೀಯ ವರದಿ ಬಂದ ನಂತರವಷ್ಟೆ ಕಾಯಿಲೆ ಕುರಿತು ನಿಖರವಾಗಿ ತಿಳಿಯಬೇಕಿದೆ.