![](https://kalanirnayanews.com/wp-content/uploads/2023/05/1-aaaa-415x465-1-1.jpg)
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರೆಯಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಭಾನುವಾರ ಕೊನೆಯುಸಿರೆಳೆದಿದ್ದಾನೆ. ತೀವ್ರ ಅಸ್ವಸ್ಥಗೊಂಡಿದ್ದ ಬಲರಾಮ ಆನೆಗೆ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.
![](https://103.180.45.14/kalanirnaya1/wp-content/uploads/2023/05/IMG_20230507_223700-1.jpg)
ಬಲರಾಮನಿಗೆ ಸುಮಾರು 67 ವರ್ಷ ಪ್ರಾಯವಾಗಿತ್ತು ಕಳೆದ ಕಳೆದ ಹತ್ತು ದಿನಗಳಿಂದ ಬಾಯಿಯಲ್ಲಿ ಹುಣ್ಣಾಗಿ ನಿತ್ರಾಣಗೊಂಡಿದ್ದ, ಬಲರಾಮನಿಗೆ ಟಿ.ಬಿ.(ಕ್ಷಯ) ಇರಬಹುದೆಂದು ವೈದ್ಯರು ಶಂಕಿಸಿದ್ದರು., ವೈದ್ಯಕೀಯ ವರದಿ ಬಂದ ನಂತರವಷ್ಟೆ ಕಾಯಿಲೆ ಕುರಿತು ನಿಖರವಾಗಿ ತಿಳಿಯಬೇಕಿದೆ.