ಬಂಗಾಲದ ಪ್ರಖರ ಹಿಂದುತ್ವನಿಷ್ಠ ನಾಯಕ ತಪನ ಘೋಷ ಇವರಿಗೆ ದೇಶದಾದ್ಯಂತದ ಹಿಂದುತ್ವನಿಷ್ಠ ಮುಖಂಡರಿಂದ ಶ್ರದ್ಧಾಂಜಲಿ

ಬೆಂಗಳೂರು: ಬಂಗಾಲದ ಪ್ರಖರ ಹಿಂದುತ್ವನಿಷ್ಠ ಮುಖಂಡ ಹಾಗೂ ‘ಹಿಂದೂ ಸಂಹತಿ’ ಈ ಸಂಘಟನೆಯ ಸಂಸ್ಥಾಪಕರು ಹಾಗೂ ‘ಸಿಂಹ ವಾಹಿನಿ’ಯ ಸಂಸ್ಥಾಪಕ ಅಧ್ಯಕ್ಷ ಶ್ರೀ. ತಪನ ಘೋಷ ಇವರು (೬೭ ವರ್ಷ) ಇವರು ಜುಲೈ ೧೨ ರಂದು ಕೊರೊನಾ ಸೋಂಕಿನಿಂದಾಗಿ ನಿಧನರಾದರು.

ತಪನದಾ ಇವರು ಬಂಗಾಲದ ಹಿಂದೂಗಳಿಗೆ ದೊಡ್ಡ ಆಧಾರಸ್ತಂಭವಾಗಿದ್ದರು. ತಪನದಾ ಇವರ ಸ್ಮರಣೆ ಹಾಗೂ ಗುಣವೈಶಿಷ್ಟ್ಯಗಳಿಗೆ ಬೆಳಕು ಚೆಲ್ಲುತ್ತಾ ಅವರ ಧರ್ಮರಕ್ಷಣೆಯ ಮತ್ತು ಹಿಂದೂಸಂಘಟನೆಯ ಕಾರ್ಯವನ್ನು ಸಮರ್ಥವಾಗಿ ಮುಂದೆ ಕೊಂಡೊಯ್ಯುವುದಾಗಿ ದೇಶದಾದ್ಯಂತ ಹಿಂದುತ್ವನಿಷ್ಠ ಮುಖಂಡರು ಆನ್‌ಲೈನ್ ಶ್ರದ್ಧಾಂಜಲಿ ಸಭೆಯಲ್ಲಿ ನಿರ್ಧಾರ ಕೈಗೊಂಡರು. ಘೋಷ ಇವರಿಗೆ ಶ್ರದ್ಧಾಂಜಲಿಯನ್ನು ನೀಡಲು ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಜುಲೈ ೧೬ ರಂದು ಆಯೋಜಿಸಲಾಗಿದ್ದ ಸಭೆಯಲ್ಲಿ ಹಿಂದುತ್ವನಿಷ್ಠರು ಮಾತನಾಡುತ್ತಿದ್ದರು. ಈ ಸಮಯದಲ್ಲಿ ಅವರ ಕಾರ್ಯದ ಧ್ವನಿಚಿತ್ರಮುದ್ರಿಕೆಯನ್ನು ಎಲ್ಲರಿಗೆ ತೋರಿಸಲಾಯಿತು.

ಈ ವೇಳೆ ಮಾತನಾಡಿದ ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಶ್ರೀ.ಪ್ರಮೋದ ಮುತಾಲಿಕರು, ‘ಬಂಗಾಲದ ಹಿಂದೂ ವಿರೋಧಿ ಪರಿಸ್ಥಿತಿಯಲ್ಲಿ ಶ್ರೀ. ತಪನ ಘೋಷ ಇವರು ಮಾಡಿದ ಹಿಂದೂ ಸಂಘಟನೆಯ ಕಾರ್ಯವು ಪ್ರೇರಣಾದಾಯಕವಾಗಿದೆ’ ಎಂದರು.

ಭಾಜಪದ ತೆಲಂಗಾಣದ ಶಾಸಕ ಶ್ರೀ. ಟಿ. ರಾಜಾಸಿಂಹರು ತಮ್ಮ ಮನೋಗತದಲ್ಲಿ, ‘ತಪನ ಘೋಷ ಇವರು ಬಂಗಾಲದಲ್ಲಿ ಹಿಂದುತ್ವಕ್ಕಾಗಿ ಪ್ರತಿಕೂಲ ವಾತಾವರಣವಿರುವಾಗಲೂ ಅಲ್ಲಿ ಹಿಂದುತ್ವದ ಪತಾಕೆಯನ್ನು ಹಾರಿಸಿದರು. ಅವರ ಹಿಂದುತ್ವದ ಕಾರ್ಯವನ್ನು ಮುಂದೆ ಕೊಂಡೊಯ್ಯುವುದು ಈಗ ನಮ್ಮ ಜವಾಬ್ದಾರಿಯಾಗಿದೆ’ ಎಂದು ತಿಳಿಸಿದರು.


ಈ ಸಮಯದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕರಾದ ಸದ್ಗುರು (ಡಾ.) ಚಾರುದತ್ತ ಪಿಂಗಳೆ ಇವರು ಮಾತನಾಡುತ್ತಾ, ‘ಹಿಂದುತ್ವಕ್ಕಾಗಿ ಸಂಪೂರ್ಣ ಜೀವನವನ್ನು ಸಮರ್ಪಿಸಿದ ತಪನ ಘೋಷರು ಹಿಂದುತ್ವನಿಷ್ಠರಿಗೆ ಸ್ಫೂರ್ತಿಯ ಸೆಲೆಯಾಗಿದ್ದರು. ಅವರು ಧರ್ಮಕ್ಕಾಗಿ ಸಮರ್ಪಣಾಭಾವದಿಂದ ಕಾರ್ಯ ಮಾಡುವ ಅನೇಕ ಹಿಂದುತ್ವನಿಷ್ಠರನ್ನು ತಯಾರಿಸಿದರು’, ಎಂದರು.

ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರ ಶ್ರೀ. ಚೇತನ ರಾಜಹಂಸ ಇವರು ಮಾತನಾಡುತ್ತಾ, ‘ತಪನಜಿಯವರು ಯಾವಾಗಲೂ ‘ಹಿಂದೂಗಳಿಗಾಗಿ ಸಂಘರ್ಷ ಒಂದೇ ಆಶಾಕಿರಣವಾಗಿದೆ’ ಎನ್ನುತ್ತಿದ್ದರು. ಅವರ ತತ್ತ್ವಜ್ಞಾನವನ್ನು ಕೃತಿಯಲ್ಲಿ ತರುವುದೇ ಅವರಿಗೆ ಅರ್ಪಿಸುವ ನಿಜವಾದ ಶ್ರದ್ಧಾಂಜಲಿಯಾಗಿದೆ’ ಎಂದರು.

ತಪನ ಘೋಷರ ಕಾರ್ಯದ ಉತ್ತರಾಧಿಕಾರಿ ಶ್ರೀ.ಪ್ರಕಾಶ ದಾಸರು ಮಾತನಾಡುತ್ತಾ, ‘ಕಾಶ್ಮೀರದ ಹಿಂದೂಗಳ ಸ್ಥಳಾಂತರವನ್ನು ಸರಕಾರಕ್ಕೆ ತಡೆಗಟ್ಟಲಾಗದಿರುವಾಗ ದೆಹಲಿಯಿಂದ ಸಾವಿರಾರು ಕಿಲೋಮೀಟರ್ ದೂರದಲ್ಲಿರುವ ಬಂಗಾಲದ ಹಿಂದೂಗಳನ್ನು ಯಾರು ಕಾಪಾಡುವರು ? ಈ ವಿಚಾರವನ್ನು ಇಟ್ಟುಕೊಂಡು ತಪನದಾ ಇವರು, ಬಂಗಾಲದಲ್ಲಿ ‘ಹಿಂದೂ ಸಂಹತಿ’ ಸಂಘಟನೆಯ ಸ್ಥಾಪನೆಯನ್ನು ಮಾಡಿದರು. ಇಲ್ಲಿ ಹಿಂದುತ್ವದ ಧ್ವನಿಯನ್ನು ಬಲಗೊಳಿಸಿದರು. ಬಂಗಾಲದಲ್ಲಿ ಪೀಡಿತ ಹಿಂದೂಗಳ ರಕ್ಷಣೆಯನ್ನು ಮಾಡುವುದರ ಜೊತೆಗೆ ಅಲ್ಲಿನ ಸಾಮಾನ್ಯ ಹಿಂದೂಗಳಲ್ಲಿ ಅವರು ಉತ್ಸಾಹವನ್ನು ತುಂಬಿದರು. ಅವರ ಧರ್ಮರಕ್ಷಣೆಯ ಕನಸನ್ನು ನನಸಾಗಿಸಲು ನಾವು ಕಾರ್ಯನಿರತರಾಗುವೆವು ಎಂದರು.

‘ರೂಟ್ಸ್ ಇನ್ ಕಾಶ್ಮೀರ’ ನ ಸಹಸಂಸ್ಥಾಪಕ ಶ್ರೀ.ಸುಶೀಲ ಪಂಡಿತರು ತಮ್ಮ ಮನೋಗತವನ್ನು ವ್ಯಕ್ತಪಡಿಸುತ್ತಾ, ‘ತಪನ ಘೋಷರು ಹಿಂದುತ್ವಕ್ಕಾಗಿ ಪ್ರಾಮಾಣಿಕ, ಧ್ಯೇಯನಿಷ್ಠ, ಸಂವೇದನಾಶೀಲ,ಕರ್ತವ್ಯನಿಷ್ಠ ಮತ್ತು ಋಷಿಸಮಾನ ವ್ಯಕ್ತಿತ್ವವನ್ನು ಹೊಂದಿದ್ದರು’ ಎಂದರು.

ಈ ಸಮಯದಲ್ಲಿ ಬಂಗಾಲದ ಭಾರತ ಸೇವಾಶ್ರಮದ ಸಂಘದ ಸ್ವಾಮಿ ಪ್ರದಿಪ್ತಾನಂದರು ಮಾತಾಡುತ್ತಾ, ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿ ಪೂ. ಹರಿಶಂಕರ ಜೈನ, ವಿಶ್ವ ಹಿಂದೂ ಪರಿಷತ್ತಿನ ರಾಷ್ಟ್ರೀಯ ವಕ್ತಾರ ಶ್ರೀ. ವಿನೋದ ಬನ್ಸಲ್, ‘ಪನೂನ ಕಾಶ್ಮೀರ’ದ ಅಧ್ಯಕ್ಷ ಡಾ.ಅಜಯ ಚ್ರೋಂಗೂ, ತಮಿಳುನಾಡಿನ ‘ಹಿಂದೂ ಮಕ್ಕಲ ಕಚ್ಛಿ’ಯ ಸಂಸ್ಥಾಪಕ ಅಧ್ಯಕ್ಷ ಶ್ರೀ. ಅರ್ಜುನ ಸಂಪಥ, ‘ಸುದರ್ಶನ’ ವಾಹಿನಿಯ ಮುಖ್ಯ ಸಂಪಾದಕ ಶ್ರೀ.ಸುರೇಶ ಚವ್ಹಾಣಕೆ, ಝಾರ್ಖಂಡದ ‘ತರುಣ ಹಿಂದೂ’ ಈ ಸಂಸ್ಥೆಯ ಸಂಸ್ಥಾಪಕ ಡಾ.ನೀಲ ಮಾಧವ ದಾಸ, ಓಡಿಯಾದ ಭಾರತ ರಕ್ಷಾ ಮಂಚದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ.ಅನಿಲ ಧೀರ, ‘ಇಂಟರಫೇಥ್ ಸ್ಟ್ರೇಂಥ್’ ನ ಸಂಸ್ಥಾಪಕ ಡಾ.ರಿಚರ್ಡ್ ಬೆಂಕಿನ್ ಮುಂತಾದವರು ಸಹ ತಮ್ಮ ಮನೋಗತವನ್ನು ವ್ಯಕ್ತಪಡಿಸಿದರು.

ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA

Spread the love
  • Related Posts

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 17 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಪ್ರೌಢಶಾಲೆಯ ಕುಮಾರಿ ಕು.ಯಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್ 7…

    Spread the love

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಸ.ಹಿ.ಉ.ಪ್ರಾ ಶಾಲೆಯ ಕುಮಾರಿ ರಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್…

    Spread the love

    You Missed

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 55 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 53 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 28 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 23 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 50 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 43 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ