ಬಂಗಾಲದ ಪ್ರಖರ ಹಿಂದುತ್ವನಿಷ್ಠ ನಾಯಕ ತಪನ ಘೋಷ ಇವರಿಗೆ ದೇಶದಾದ್ಯಂತದ ಹಿಂದುತ್ವನಿಷ್ಠ ಮುಖಂಡರಿಂದ ಶ್ರದ್ಧಾಂಜಲಿ

ಬೆಂಗಳೂರು: ಬಂಗಾಲದ ಪ್ರಖರ ಹಿಂದುತ್ವನಿಷ್ಠ ಮುಖಂಡ ಹಾಗೂ ‘ಹಿಂದೂ ಸಂಹತಿ’ ಈ ಸಂಘಟನೆಯ ಸಂಸ್ಥಾಪಕರು ಹಾಗೂ ‘ಸಿಂಹ ವಾಹಿನಿ’ಯ ಸಂಸ್ಥಾಪಕ ಅಧ್ಯಕ್ಷ ಶ್ರೀ. ತಪನ ಘೋಷ ಇವರು (೬೭ ವರ್ಷ) ಇವರು ಜುಲೈ ೧೨ ರಂದು ಕೊರೊನಾ ಸೋಂಕಿನಿಂದಾಗಿ ನಿಧನರಾದರು.

ತಪನದಾ ಇವರು ಬಂಗಾಲದ ಹಿಂದೂಗಳಿಗೆ ದೊಡ್ಡ ಆಧಾರಸ್ತಂಭವಾಗಿದ್ದರು. ತಪನದಾ ಇವರ ಸ್ಮರಣೆ ಹಾಗೂ ಗುಣವೈಶಿಷ್ಟ್ಯಗಳಿಗೆ ಬೆಳಕು ಚೆಲ್ಲುತ್ತಾ ಅವರ ಧರ್ಮರಕ್ಷಣೆಯ ಮತ್ತು ಹಿಂದೂಸಂಘಟನೆಯ ಕಾರ್ಯವನ್ನು ಸಮರ್ಥವಾಗಿ ಮುಂದೆ ಕೊಂಡೊಯ್ಯುವುದಾಗಿ ದೇಶದಾದ್ಯಂತ ಹಿಂದುತ್ವನಿಷ್ಠ ಮುಖಂಡರು ಆನ್‌ಲೈನ್ ಶ್ರದ್ಧಾಂಜಲಿ ಸಭೆಯಲ್ಲಿ ನಿರ್ಧಾರ ಕೈಗೊಂಡರು. ಘೋಷ ಇವರಿಗೆ ಶ್ರದ್ಧಾಂಜಲಿಯನ್ನು ನೀಡಲು ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಜುಲೈ ೧೬ ರಂದು ಆಯೋಜಿಸಲಾಗಿದ್ದ ಸಭೆಯಲ್ಲಿ ಹಿಂದುತ್ವನಿಷ್ಠರು ಮಾತನಾಡುತ್ತಿದ್ದರು. ಈ ಸಮಯದಲ್ಲಿ ಅವರ ಕಾರ್ಯದ ಧ್ವನಿಚಿತ್ರಮುದ್ರಿಕೆಯನ್ನು ಎಲ್ಲರಿಗೆ ತೋರಿಸಲಾಯಿತು.

ಈ ವೇಳೆ ಮಾತನಾಡಿದ ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಶ್ರೀ.ಪ್ರಮೋದ ಮುತಾಲಿಕರು, ‘ಬಂಗಾಲದ ಹಿಂದೂ ವಿರೋಧಿ ಪರಿಸ್ಥಿತಿಯಲ್ಲಿ ಶ್ರೀ. ತಪನ ಘೋಷ ಇವರು ಮಾಡಿದ ಹಿಂದೂ ಸಂಘಟನೆಯ ಕಾರ್ಯವು ಪ್ರೇರಣಾದಾಯಕವಾಗಿದೆ’ ಎಂದರು.

ಭಾಜಪದ ತೆಲಂಗಾಣದ ಶಾಸಕ ಶ್ರೀ. ಟಿ. ರಾಜಾಸಿಂಹರು ತಮ್ಮ ಮನೋಗತದಲ್ಲಿ, ‘ತಪನ ಘೋಷ ಇವರು ಬಂಗಾಲದಲ್ಲಿ ಹಿಂದುತ್ವಕ್ಕಾಗಿ ಪ್ರತಿಕೂಲ ವಾತಾವರಣವಿರುವಾಗಲೂ ಅಲ್ಲಿ ಹಿಂದುತ್ವದ ಪತಾಕೆಯನ್ನು ಹಾರಿಸಿದರು. ಅವರ ಹಿಂದುತ್ವದ ಕಾರ್ಯವನ್ನು ಮುಂದೆ ಕೊಂಡೊಯ್ಯುವುದು ಈಗ ನಮ್ಮ ಜವಾಬ್ದಾರಿಯಾಗಿದೆ’ ಎಂದು ತಿಳಿಸಿದರು.


ಈ ಸಮಯದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕರಾದ ಸದ್ಗುರು (ಡಾ.) ಚಾರುದತ್ತ ಪಿಂಗಳೆ ಇವರು ಮಾತನಾಡುತ್ತಾ, ‘ಹಿಂದುತ್ವಕ್ಕಾಗಿ ಸಂಪೂರ್ಣ ಜೀವನವನ್ನು ಸಮರ್ಪಿಸಿದ ತಪನ ಘೋಷರು ಹಿಂದುತ್ವನಿಷ್ಠರಿಗೆ ಸ್ಫೂರ್ತಿಯ ಸೆಲೆಯಾಗಿದ್ದರು. ಅವರು ಧರ್ಮಕ್ಕಾಗಿ ಸಮರ್ಪಣಾಭಾವದಿಂದ ಕಾರ್ಯ ಮಾಡುವ ಅನೇಕ ಹಿಂದುತ್ವನಿಷ್ಠರನ್ನು ತಯಾರಿಸಿದರು’, ಎಂದರು.

ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರ ಶ್ರೀ. ಚೇತನ ರಾಜಹಂಸ ಇವರು ಮಾತನಾಡುತ್ತಾ, ‘ತಪನಜಿಯವರು ಯಾವಾಗಲೂ ‘ಹಿಂದೂಗಳಿಗಾಗಿ ಸಂಘರ್ಷ ಒಂದೇ ಆಶಾಕಿರಣವಾಗಿದೆ’ ಎನ್ನುತ್ತಿದ್ದರು. ಅವರ ತತ್ತ್ವಜ್ಞಾನವನ್ನು ಕೃತಿಯಲ್ಲಿ ತರುವುದೇ ಅವರಿಗೆ ಅರ್ಪಿಸುವ ನಿಜವಾದ ಶ್ರದ್ಧಾಂಜಲಿಯಾಗಿದೆ’ ಎಂದರು.

ತಪನ ಘೋಷರ ಕಾರ್ಯದ ಉತ್ತರಾಧಿಕಾರಿ ಶ್ರೀ.ಪ್ರಕಾಶ ದಾಸರು ಮಾತನಾಡುತ್ತಾ, ‘ಕಾಶ್ಮೀರದ ಹಿಂದೂಗಳ ಸ್ಥಳಾಂತರವನ್ನು ಸರಕಾರಕ್ಕೆ ತಡೆಗಟ್ಟಲಾಗದಿರುವಾಗ ದೆಹಲಿಯಿಂದ ಸಾವಿರಾರು ಕಿಲೋಮೀಟರ್ ದೂರದಲ್ಲಿರುವ ಬಂಗಾಲದ ಹಿಂದೂಗಳನ್ನು ಯಾರು ಕಾಪಾಡುವರು ? ಈ ವಿಚಾರವನ್ನು ಇಟ್ಟುಕೊಂಡು ತಪನದಾ ಇವರು, ಬಂಗಾಲದಲ್ಲಿ ‘ಹಿಂದೂ ಸಂಹತಿ’ ಸಂಘಟನೆಯ ಸ್ಥಾಪನೆಯನ್ನು ಮಾಡಿದರು. ಇಲ್ಲಿ ಹಿಂದುತ್ವದ ಧ್ವನಿಯನ್ನು ಬಲಗೊಳಿಸಿದರು. ಬಂಗಾಲದಲ್ಲಿ ಪೀಡಿತ ಹಿಂದೂಗಳ ರಕ್ಷಣೆಯನ್ನು ಮಾಡುವುದರ ಜೊತೆಗೆ ಅಲ್ಲಿನ ಸಾಮಾನ್ಯ ಹಿಂದೂಗಳಲ್ಲಿ ಅವರು ಉತ್ಸಾಹವನ್ನು ತುಂಬಿದರು. ಅವರ ಧರ್ಮರಕ್ಷಣೆಯ ಕನಸನ್ನು ನನಸಾಗಿಸಲು ನಾವು ಕಾರ್ಯನಿರತರಾಗುವೆವು ಎಂದರು.

‘ರೂಟ್ಸ್ ಇನ್ ಕಾಶ್ಮೀರ’ ನ ಸಹಸಂಸ್ಥಾಪಕ ಶ್ರೀ.ಸುಶೀಲ ಪಂಡಿತರು ತಮ್ಮ ಮನೋಗತವನ್ನು ವ್ಯಕ್ತಪಡಿಸುತ್ತಾ, ‘ತಪನ ಘೋಷರು ಹಿಂದುತ್ವಕ್ಕಾಗಿ ಪ್ರಾಮಾಣಿಕ, ಧ್ಯೇಯನಿಷ್ಠ, ಸಂವೇದನಾಶೀಲ,ಕರ್ತವ್ಯನಿಷ್ಠ ಮತ್ತು ಋಷಿಸಮಾನ ವ್ಯಕ್ತಿತ್ವವನ್ನು ಹೊಂದಿದ್ದರು’ ಎಂದರು.

ಈ ಸಮಯದಲ್ಲಿ ಬಂಗಾಲದ ಭಾರತ ಸೇವಾಶ್ರಮದ ಸಂಘದ ಸ್ವಾಮಿ ಪ್ರದಿಪ್ತಾನಂದರು ಮಾತಾಡುತ್ತಾ, ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿ ಪೂ. ಹರಿಶಂಕರ ಜೈನ, ವಿಶ್ವ ಹಿಂದೂ ಪರಿಷತ್ತಿನ ರಾಷ್ಟ್ರೀಯ ವಕ್ತಾರ ಶ್ರೀ. ವಿನೋದ ಬನ್ಸಲ್, ‘ಪನೂನ ಕಾಶ್ಮೀರ’ದ ಅಧ್ಯಕ್ಷ ಡಾ.ಅಜಯ ಚ್ರೋಂಗೂ, ತಮಿಳುನಾಡಿನ ‘ಹಿಂದೂ ಮಕ್ಕಲ ಕಚ್ಛಿ’ಯ ಸಂಸ್ಥಾಪಕ ಅಧ್ಯಕ್ಷ ಶ್ರೀ. ಅರ್ಜುನ ಸಂಪಥ, ‘ಸುದರ್ಶನ’ ವಾಹಿನಿಯ ಮುಖ್ಯ ಸಂಪಾದಕ ಶ್ರೀ.ಸುರೇಶ ಚವ್ಹಾಣಕೆ, ಝಾರ್ಖಂಡದ ‘ತರುಣ ಹಿಂದೂ’ ಈ ಸಂಸ್ಥೆಯ ಸಂಸ್ಥಾಪಕ ಡಾ.ನೀಲ ಮಾಧವ ದಾಸ, ಓಡಿಯಾದ ಭಾರತ ರಕ್ಷಾ ಮಂಚದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ.ಅನಿಲ ಧೀರ, ‘ಇಂಟರಫೇಥ್ ಸ್ಟ್ರೇಂಥ್’ ನ ಸಂಸ್ಥಾಪಕ ಡಾ.ರಿಚರ್ಡ್ ಬೆಂಕಿನ್ ಮುಂತಾದವರು ಸಹ ತಮ್ಮ ಮನೋಗತವನ್ನು ವ್ಯಕ್ತಪಡಿಸಿದರು.

ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA

Spread the love
  • Related Posts

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    ಮುಂಡಾಜೆ: ಬೆಳ್ತಂಗಡಿ ತಾಲೂಕಿನಲ್ಲಿ ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಗ್ರಾಮಗಳಲ್ಲಿ ಮುಂಡಾಜೆ ಗ್ರಾಮವು ಪ್ರಮುಖ ಸ್ಥಾನದಲ್ಲಿದೆ. ಮುಂಡಾಜೆ ಗ್ರಾಮದ ಸೋಮಂತಡ್ಕವು ಹಲವು ಗ್ರಾಮಗಳ ಸಂಪರ್ಕ ಕೊಂಡಿಯಾಗಿದ್ದು, ಬ್ಯಾಂಕಿಂಗ್ ಸೇವೆಗಳು, ಶಾಲಾ-ಕಾಲೇಜುಗಳು, ಆಸ್ಪತ್ರೆಗಳು ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡಿದೆ. ಇದರ ಪರಿಣಾಮವಾಗಿ ಈ…

    Spread the love

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    You Missed

    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    • By admin
    • April 30, 2026
    • 32 views
    ಅಧಿಸೂಚನೆ ಇದ್ದರೂ ನಿಲುಗಡೆ ಇಲ್ಲ, ಸ್ಟೇಜ್ ಗೊಂದಲದಿಂದ ಪ್ರಯಾಣಿಕರ ಸಂಕಷ್ಟ: ಮುಂಡಾಜೆ–ಸೋಮಂತಡ್ಕದಲ್ಲಿ ಸಾರಿಗೆ ವ್ಯವಸ್ಥೆಗೆ ಪ್ರಶ್ನೆ??

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 218 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 55 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 54 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 113 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 50 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ