ಬಂಗಾಲದ ಪ್ರಖರ ಹಿಂದುತ್ವನಿಷ್ಠ ನಾಯಕ ತಪನ ಘೋಷ ಇವರಿಗೆ ದೇಶದಾದ್ಯಂತದ ಹಿಂದುತ್ವನಿಷ್ಠ ಮುಖಂಡರಿಂದ ಶ್ರದ್ಧಾಂಜಲಿ

ಬೆಂಗಳೂರು: ಬಂಗಾಲದ ಪ್ರಖರ ಹಿಂದುತ್ವನಿಷ್ಠ ಮುಖಂಡ ಹಾಗೂ ‘ಹಿಂದೂ ಸಂಹತಿ’ ಈ ಸಂಘಟನೆಯ ಸಂಸ್ಥಾಪಕರು ಹಾಗೂ ‘ಸಿಂಹ ವಾಹಿನಿ’ಯ ಸಂಸ್ಥಾಪಕ ಅಧ್ಯಕ್ಷ ಶ್ರೀ. ತಪನ ಘೋಷ ಇವರು (೬೭ ವರ್ಷ) ಇವರು ಜುಲೈ ೧೨ ರಂದು ಕೊರೊನಾ ಸೋಂಕಿನಿಂದಾಗಿ ನಿಧನರಾದರು.

ತಪನದಾ ಇವರು ಬಂಗಾಲದ ಹಿಂದೂಗಳಿಗೆ ದೊಡ್ಡ ಆಧಾರಸ್ತಂಭವಾಗಿದ್ದರು. ತಪನದಾ ಇವರ ಸ್ಮರಣೆ ಹಾಗೂ ಗುಣವೈಶಿಷ್ಟ್ಯಗಳಿಗೆ ಬೆಳಕು ಚೆಲ್ಲುತ್ತಾ ಅವರ ಧರ್ಮರಕ್ಷಣೆಯ ಮತ್ತು ಹಿಂದೂಸಂಘಟನೆಯ ಕಾರ್ಯವನ್ನು ಸಮರ್ಥವಾಗಿ ಮುಂದೆ ಕೊಂಡೊಯ್ಯುವುದಾಗಿ ದೇಶದಾದ್ಯಂತ ಹಿಂದುತ್ವನಿಷ್ಠ ಮುಖಂಡರು ಆನ್‌ಲೈನ್ ಶ್ರದ್ಧಾಂಜಲಿ ಸಭೆಯಲ್ಲಿ ನಿರ್ಧಾರ ಕೈಗೊಂಡರು. ಘೋಷ ಇವರಿಗೆ ಶ್ರದ್ಧಾಂಜಲಿಯನ್ನು ನೀಡಲು ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಜುಲೈ ೧೬ ರಂದು ಆಯೋಜಿಸಲಾಗಿದ್ದ ಸಭೆಯಲ್ಲಿ ಹಿಂದುತ್ವನಿಷ್ಠರು ಮಾತನಾಡುತ್ತಿದ್ದರು. ಈ ಸಮಯದಲ್ಲಿ ಅವರ ಕಾರ್ಯದ ಧ್ವನಿಚಿತ್ರಮುದ್ರಿಕೆಯನ್ನು ಎಲ್ಲರಿಗೆ ತೋರಿಸಲಾಯಿತು.

ಈ ವೇಳೆ ಮಾತನಾಡಿದ ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಶ್ರೀ.ಪ್ರಮೋದ ಮುತಾಲಿಕರು, ‘ಬಂಗಾಲದ ಹಿಂದೂ ವಿರೋಧಿ ಪರಿಸ್ಥಿತಿಯಲ್ಲಿ ಶ್ರೀ. ತಪನ ಘೋಷ ಇವರು ಮಾಡಿದ ಹಿಂದೂ ಸಂಘಟನೆಯ ಕಾರ್ಯವು ಪ್ರೇರಣಾದಾಯಕವಾಗಿದೆ’ ಎಂದರು.

ಭಾಜಪದ ತೆಲಂಗಾಣದ ಶಾಸಕ ಶ್ರೀ. ಟಿ. ರಾಜಾಸಿಂಹರು ತಮ್ಮ ಮನೋಗತದಲ್ಲಿ, ‘ತಪನ ಘೋಷ ಇವರು ಬಂಗಾಲದಲ್ಲಿ ಹಿಂದುತ್ವಕ್ಕಾಗಿ ಪ್ರತಿಕೂಲ ವಾತಾವರಣವಿರುವಾಗಲೂ ಅಲ್ಲಿ ಹಿಂದುತ್ವದ ಪತಾಕೆಯನ್ನು ಹಾರಿಸಿದರು. ಅವರ ಹಿಂದುತ್ವದ ಕಾರ್ಯವನ್ನು ಮುಂದೆ ಕೊಂಡೊಯ್ಯುವುದು ಈಗ ನಮ್ಮ ಜವಾಬ್ದಾರಿಯಾಗಿದೆ’ ಎಂದು ತಿಳಿಸಿದರು.


ಈ ಸಮಯದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕರಾದ ಸದ್ಗುರು (ಡಾ.) ಚಾರುದತ್ತ ಪಿಂಗಳೆ ಇವರು ಮಾತನಾಡುತ್ತಾ, ‘ಹಿಂದುತ್ವಕ್ಕಾಗಿ ಸಂಪೂರ್ಣ ಜೀವನವನ್ನು ಸಮರ್ಪಿಸಿದ ತಪನ ಘೋಷರು ಹಿಂದುತ್ವನಿಷ್ಠರಿಗೆ ಸ್ಫೂರ್ತಿಯ ಸೆಲೆಯಾಗಿದ್ದರು. ಅವರು ಧರ್ಮಕ್ಕಾಗಿ ಸಮರ್ಪಣಾಭಾವದಿಂದ ಕಾರ್ಯ ಮಾಡುವ ಅನೇಕ ಹಿಂದುತ್ವನಿಷ್ಠರನ್ನು ತಯಾರಿಸಿದರು’, ಎಂದರು.

ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರ ಶ್ರೀ. ಚೇತನ ರಾಜಹಂಸ ಇವರು ಮಾತನಾಡುತ್ತಾ, ‘ತಪನಜಿಯವರು ಯಾವಾಗಲೂ ‘ಹಿಂದೂಗಳಿಗಾಗಿ ಸಂಘರ್ಷ ಒಂದೇ ಆಶಾಕಿರಣವಾಗಿದೆ’ ಎನ್ನುತ್ತಿದ್ದರು. ಅವರ ತತ್ತ್ವಜ್ಞಾನವನ್ನು ಕೃತಿಯಲ್ಲಿ ತರುವುದೇ ಅವರಿಗೆ ಅರ್ಪಿಸುವ ನಿಜವಾದ ಶ್ರದ್ಧಾಂಜಲಿಯಾಗಿದೆ’ ಎಂದರು.

ತಪನ ಘೋಷರ ಕಾರ್ಯದ ಉತ್ತರಾಧಿಕಾರಿ ಶ್ರೀ.ಪ್ರಕಾಶ ದಾಸರು ಮಾತನಾಡುತ್ತಾ, ‘ಕಾಶ್ಮೀರದ ಹಿಂದೂಗಳ ಸ್ಥಳಾಂತರವನ್ನು ಸರಕಾರಕ್ಕೆ ತಡೆಗಟ್ಟಲಾಗದಿರುವಾಗ ದೆಹಲಿಯಿಂದ ಸಾವಿರಾರು ಕಿಲೋಮೀಟರ್ ದೂರದಲ್ಲಿರುವ ಬಂಗಾಲದ ಹಿಂದೂಗಳನ್ನು ಯಾರು ಕಾಪಾಡುವರು ? ಈ ವಿಚಾರವನ್ನು ಇಟ್ಟುಕೊಂಡು ತಪನದಾ ಇವರು, ಬಂಗಾಲದಲ್ಲಿ ‘ಹಿಂದೂ ಸಂಹತಿ’ ಸಂಘಟನೆಯ ಸ್ಥಾಪನೆಯನ್ನು ಮಾಡಿದರು. ಇಲ್ಲಿ ಹಿಂದುತ್ವದ ಧ್ವನಿಯನ್ನು ಬಲಗೊಳಿಸಿದರು. ಬಂಗಾಲದಲ್ಲಿ ಪೀಡಿತ ಹಿಂದೂಗಳ ರಕ್ಷಣೆಯನ್ನು ಮಾಡುವುದರ ಜೊತೆಗೆ ಅಲ್ಲಿನ ಸಾಮಾನ್ಯ ಹಿಂದೂಗಳಲ್ಲಿ ಅವರು ಉತ್ಸಾಹವನ್ನು ತುಂಬಿದರು. ಅವರ ಧರ್ಮರಕ್ಷಣೆಯ ಕನಸನ್ನು ನನಸಾಗಿಸಲು ನಾವು ಕಾರ್ಯನಿರತರಾಗುವೆವು ಎಂದರು.

‘ರೂಟ್ಸ್ ಇನ್ ಕಾಶ್ಮೀರ’ ನ ಸಹಸಂಸ್ಥಾಪಕ ಶ್ರೀ.ಸುಶೀಲ ಪಂಡಿತರು ತಮ್ಮ ಮನೋಗತವನ್ನು ವ್ಯಕ್ತಪಡಿಸುತ್ತಾ, ‘ತಪನ ಘೋಷರು ಹಿಂದುತ್ವಕ್ಕಾಗಿ ಪ್ರಾಮಾಣಿಕ, ಧ್ಯೇಯನಿಷ್ಠ, ಸಂವೇದನಾಶೀಲ,ಕರ್ತವ್ಯನಿಷ್ಠ ಮತ್ತು ಋಷಿಸಮಾನ ವ್ಯಕ್ತಿತ್ವವನ್ನು ಹೊಂದಿದ್ದರು’ ಎಂದರು.

ಈ ಸಮಯದಲ್ಲಿ ಬಂಗಾಲದ ಭಾರತ ಸೇವಾಶ್ರಮದ ಸಂಘದ ಸ್ವಾಮಿ ಪ್ರದಿಪ್ತಾನಂದರು ಮಾತಾಡುತ್ತಾ, ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿ ಪೂ. ಹರಿಶಂಕರ ಜೈನ, ವಿಶ್ವ ಹಿಂದೂ ಪರಿಷತ್ತಿನ ರಾಷ್ಟ್ರೀಯ ವಕ್ತಾರ ಶ್ರೀ. ವಿನೋದ ಬನ್ಸಲ್, ‘ಪನೂನ ಕಾಶ್ಮೀರ’ದ ಅಧ್ಯಕ್ಷ ಡಾ.ಅಜಯ ಚ್ರೋಂಗೂ, ತಮಿಳುನಾಡಿನ ‘ಹಿಂದೂ ಮಕ್ಕಲ ಕಚ್ಛಿ’ಯ ಸಂಸ್ಥಾಪಕ ಅಧ್ಯಕ್ಷ ಶ್ರೀ. ಅರ್ಜುನ ಸಂಪಥ, ‘ಸುದರ್ಶನ’ ವಾಹಿನಿಯ ಮುಖ್ಯ ಸಂಪಾದಕ ಶ್ರೀ.ಸುರೇಶ ಚವ್ಹಾಣಕೆ, ಝಾರ್ಖಂಡದ ‘ತರುಣ ಹಿಂದೂ’ ಈ ಸಂಸ್ಥೆಯ ಸಂಸ್ಥಾಪಕ ಡಾ.ನೀಲ ಮಾಧವ ದಾಸ, ಓಡಿಯಾದ ಭಾರತ ರಕ್ಷಾ ಮಂಚದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ.ಅನಿಲ ಧೀರ, ‘ಇಂಟರಫೇಥ್ ಸ್ಟ್ರೇಂಥ್’ ನ ಸಂಸ್ಥಾಪಕ ಡಾ.ರಿಚರ್ಡ್ ಬೆಂಕಿನ್ ಮುಂತಾದವರು ಸಹ ತಮ್ಮ ಮನೋಗತವನ್ನು ವ್ಯಕ್ತಪಡಿಸಿದರು.

ಕಾಲನಿರ್ಣಯನ್ಯೂಸ್ ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA

Spread the love
  • Related Posts

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಸನ್ನಿಧಿಯಲ್ಲಿ ಗಣಪನ ಅಲಂಕಾರ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ…

    Spread the love

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    You Missed

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 12 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 22 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 12 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 15 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 12 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 16 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ