ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭ : ಸಚಿವ ಲಕ್ಷ್ಮಣ ಸವದಿ

ಉಡುಪಿ: ರಾಜ್ಯದ ನಗರ ಸಾರಿಗೆಯಲ್ಲಿ  ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭಿಸುವ ನಿಟ್ಟಿನಲ್ಲಿ ಈಗಾಗಲೇ ಬೆಂಗಳೂರಿನಲ್ಲಿ 350 ಎಲೆಕ್ಟ್ರಿಕ್ ಬಸ್ ಗಳನ್ನು ಲೀಸ್ ಗೆ  ಪಡೆದು ಓಡಾಟ ಆರಂಭಿಸಲು ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು , ಬೆಂಗಳೂರಿನಲ್ಲಿ ಫೆಬ್ರವರಿಯಲ್ಲಿ ಪ್ರಾಯೋಗಿಕವಾಗಿ ಸಂಚಾರ ಆರಂಭಗೊಳ್ಳಲಿದೆ ಎಂದು ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಅವರು ಭಾನುವಾರ, ಉಡುಪಿಯಲ್ಲಿ, 395 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ನಗರ ಸಾರಿಗೆ  ಬಸ್ ನಿಲ್ದಾಣ ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಸರ್ಕಾರವು ಮಾಲಿನ್ಯ ಹೆಚ್ಚಿರುವ ದೇಶದ ಪ್ರಮುಖ ನಗರಗಳಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಎಲೆಕ್ಟ್ರಿಕ್ ಬಸ್ ಗಳ ಬಳಕೆ ಮಾಡುವ ಕುರಿತಂತೆ ಪ್ರೋತ್ಸಾಹ ನೀಡುತ್ತಿದ್ದು, ಇದಕ್ಕಗಿ ಬಸ್ ಖರೀದಿಗೆ 55 ಲಕ್ಷ ರೂ ಸಬ್ಸಿಡಿ ನೀಡಲಿದೆ, ಅದೇ ರೀತಿ ರಾಜ್ಯವೂ ಸಹ ಪ್ರತೀ ಬಸ್ ಗೆ 33 ಲಕ್ಷ ರೂ ಸಬ್ಸಿಡಿ ನೀಡಲಿದ್ದು, ಒಂದು ಎಲೆಕ್ಟ್ರಿಕ್ ಬಸ್ ನ ಬೆಲೆ ರೂ.2 ಕೋಟಿ ಅಗಲಿದ್ದು, ಒಟ್ಟು 88 ಲಕ್ಷ ರೂ ಗಳ ಸಬ್ಸಿಡಿ ದೊರೆಯಲಿದೆ,  ಇದರಿಂದ ಇಂದನ ವೆಚ್ಚ ತಗ್ಗಿಸಲು ಹಾಗೂ ಮಾಲಿನ್ಯ ನಿಯಂತ್ರಣ ಸಾಧ್ಯವಾಗಲಿದ್ದು, ಲಾಭದಾಯಕ ಸಹ ಆಗಲಿದೆ. ಪ್ರಾಯೋಗಿಕವಾಗಿ ಬೆಂಗಳೂರಿನಲ್ಲಿ 350 ಬಸ್ ಗಳನ್ನು ಲೀಸ್ ಗೆ ಪಡೆದು, ಪ್ರತೀ ಕಿಮೀ ಹೂಡಿಕೆದಾರರಿಗೆ ನಿಗಧಿತ ದರ ನೀಡುವ ಒಪ್ಪಂದದಲ್ಲಿ ಆರಂಭಿಸಲಿದ್ದು, ಮುಂದೆ ಇದನ್ನು ರಾಜ್ಯದ ಎಲ್ಲಾ ನಗರ ಸಾರಿಗೆಯಲ್ಲಿ ಬಳಸಿಕೊಳ್ಳಲಾಗುವುದು ಎಂದು ಸಚಿವ ಲಕ್ಷ್ಮಣ ಸವದಿ ಹೇಳಿದರು.

 ರಾಜ್ಯದ ಸಾರಿಗೆ ನೌಕರರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಿದ್ದು, ಅವರ 10 ಬೇಡಿಕೆಗಳಲ್ಲಿ 9 ಬೇಡಿಕೆಗಳನ್ನು ಈಗಾಗಲೇ ಈಡೇರಿಸಲಾಗಿದೆ. ಇಂಧನದಲ್ಲಿ ಶೇ.20 ರಷ್ಟು ಇಥೆನಾಲ್ ಮಿಶ್ರಣ  ಮಾಡುವುದರಿಂದ ಬಸ್ ಗಳ  ಇಂಧನ ವೆಚ್ಚ ತಗ್ಗಿಸಲು ಸಾಧ್ಯವಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಕೊವೀಡ್ ಲಾಕ್ ಡೌನ್ ಸಮಯದಲ್ಲಿ ಸಾರಿಗೆ ಸಂಚಾರ ಇಲ್ಲದಿದ್ದರೂ  ಸಹ ಸಾರಿಗೆ ನೌಕರರಿಗೆ ವೇತನ ನೀಡಲಾಗಿದೆ, ಇದಕ್ಕಾಗಿ ಸರ್ಕಾರದಿಂದ 2 ತಿಂಗಳ ವೇತನಕ್ಕಾಗಿ 650 ಕೋಟಿ ರೂ ನೆರವು ಪಡೆಯಲಾಗಿದೆ, ರಾಜ್ಯದಲ್ಲಿ ಎಲೆಕ್ಟಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಅಂತಹ ವಾಹನಗಳ ರಸ್ತೆ ತೆರಿಗೆಯನ್ನು ಸಂಪೂರ್ಣ ಮನ್ನಾ ಮಾಡಲಾಗುತ್ತಿದೆ ರಾಜ್ಯದಲ್ಲಿ ಪ್ರಸ್ತುತ 26000 ಕ್ಕೂ ಹೆಚ್ಚು ಎಲೆಕ್ಟ್ರಿಕ್ ವಾಹನಗಳಿವೆ ಎಂದು ಸಚಿವರು ಹೇಳಿದರು.

 ಉಡುಪಿಯ ಬನ್ನಂಜೆಯಲ್ಲಿ ನಿರ್ಮಾಣವಾಗುತ್ತಿರುವ ಗ್ರಾಮಾಂತರ ಬಸ್ ನಿಲ್ದಾಣಕ್ಕೆ ಡಾ.ವಿ.ಎಸ್.ಆಚಾರ್ಯ ಹೆಸರು ಇಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು, ಜಿಲ್ಲೆಯ ಟ್ಯಾಕ್ಸಿ ಮಾಲೀಕರು ನೀಡಿರುವ ಮನವಿಗಳ ಬಗ್ಗೆ ಅಧಿವೇಶನ ಸಂದರ್ಭದಲ್ಲಿ ಚರ್ಚಿಸಿ ಪರಿಹಾರ ಒದಗಿಸಲಾಗುವುದು  ಎಂದು ಉಪ ಮುಖ್ಯಮಂತ್ರಿ ಹೇಳಿದರು.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 200 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 44 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 50 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 109 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 46 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 88 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ