ಬೆಂಗಳೂರಿನಲ್ಲಿ ಯುವಕರ ಪುಂಡಾಟ! ಕಾರ್ಯನಿರತ ಪತ್ರಕರ್ತರ ಮೇಲೂ ಹಲ್ಲೆ! ಶಾಸಕರ ಮನೆ, ಪೋಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು!

ಬೆಂಗಳೂರು: ಬೆಂಗಳೂರಿನಲ್ಲಿ ಮನೆ ಮನೆಗೆ ನುಗ್ಗಿ ಮುಸ್ಲಿಂ ಯುವಕರು ದಾಂಧಲೆ ನಡೆಸುತ್ತಿದ್ದು, ಪರಿಸ್ಥಿತಿ ಕೈ ಮೀರಿ ಹೋಗಿದೆ.

ಶಾಸಕ ಅಖಂಡ ಶ್ರೀನಿವಾಸ್ ಶೆಟ್ಟಿ ಅವರ ಮನೆಗೆ ಬೆಂಕಿ ಹಚ್ಚಲಾಗಿದ್ದು, ಖಾಸಗಿ ವಾಹಿನಿಯ ವಾಹನ ಜಖಂ ಗೊಳಿಸಿ ವರದಿಗೆ ತೆರಳಿದ ಪತ್ರಕರ್ತರ ಮೇಲೆ ಹಲ್ಲೆ ಮಾಡಿ ಕ್ಯಾಮರಾ ಪುಡಿಗೈದು, ಮನೆ ಮನೆಗೆ ನುಗ್ಗಿ ಮುಸ್ಲಿಂ ಸಮುದಾಯದ ಯುವಕರು ಪುಂಡಾಟ ನಡೆಸಿದ್ದು, ಕಾವಲ ಬೈರಸಂದ್ರ ಹಾಗೂ ಕೆಜಿ ಹಳ್ಳಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಪ್ರವಾದಿ ಪೈಗಂಬರ್ ವಿರುದ್ದ ಫೇಸ್​ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ ಎಂದು ಆರೋಪಿಸಿ ಶಾಸಕ ಅಖಂಡ ಶ್ರೀನಿವಾಸರಾಜು ಅವರ ಮನೆ, ಕಚೇರಿಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಬೆಂಗಳೂರಿನ ಕಾಲವ್ ಬೈರಸಂದ್ರದಲ್ಲಿ ನಡೆದಿದೆ, ಹದಿನೈದಕ್ಕೆ ಹೆಚ್ಚು ಕಿಡಿಗೇಡಿಗಳಿಂದ ಶಾಸಕರ ಮನೆ ಮೇಲೆ ದಾಳಿ ನಡೆಸಲಾಗಿದೆ.

ಶಾಸಕ ಅಖಂಡ ಶ್ರೀನಿವಾಸರಾಜು ಅವರ ಸೋದರಳಿಯ ನವೀನ್ ಫೇಸ್​ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ ನೂರಾರು ಜನರು ನಗರದ ಕೆಜಿ ಹಳ್ಳಿ ಪೋಲೀಸ್ ಠಾಣೆ ಎದುರು ಜಮಾಯಿಸಿದ್ದು ನವೀನ್ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಪುಲಕೇಶಿನಗರದ ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು ಪರಿಸ್ಥಿತಿ ಉದ್ವಿಗ್ನವಾಗಿದೆ, ಸಧ್ಯ ಜನರನ್ನು ಸಮಾಧಾನಪಡಿಸಲು ಶಾಸಕ ಜಮೀರ್ ಅಹಮದ್ ಖಾನ್ ಸಹ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.

ಖಾತೆ ಹ್ಯಾಕ್‌?
ನನ್ನ ಫೇಸ್‌ಬುಕ್‌ ಖಾತೆ ಹ್ಯಾಕ್‌ ಆಗಿದೆ. ಯಾರೋ ದುಷ್ಕರ್ಮಿಗಳು ನನ್ನ ಖಾತೆ ಹ್ಯಾಕ್‌ ಮಾಡಿ ಕೆಟ್ಟ ಪೋಸ್ಟ್‌ ಹಾಕಿದ್ದಾರೆ. ದುಷ್ಕರ್ಮಿಗಳ ವಿರುದ್ಧ ನಾನು ದೂರು ದಾಖಲಿಸುತ್ತೇನೆ ಎಂದು ಶಾಸಕರ ಸಂಬಂಧಿ ನವೀನ್‌ ಪೋಸ್ಟ್‌ ಮಾಡಿದ್ದಾರೆ.

ಇನ್ನು ಪರಿಸ್ಥಿತಿ ನಿಯಂತ್ರಿಸಲು ಇದಾಗಲೇ ಪೊಲೀಸ್ ಠಾಣಾ ಆವರಣದಲ್ಲಿ ಕೆಎಸ್ ಆರ್ ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದ್ದು ಪೂರ್ವ ವಿಭಾಗದ ಎಲ್ಲಾ ಪೋಲೀಸ್ ಇನ್ಸ್​ಪೆಕ್ಟರ್​ ಹಾಗೂ ಸಿಬ್ಬಂದಿಗಳು ತಕ್ಷಣ ಕೆಜಿ ಹಳ್ಳಿ ಠಾಣೆಗೆ ಆಗಮಿಸಲು ಹಿರಿಯ ಪೋಲೀಸ್ ಅಧಿಕಾರಿಗಳು ಸೂಚಿಸಿದ್ದಾರೆ.

ಆರೋಪಿ ಬಂಧನ?
ಫೇಸ್‌ಬುಕ್‌ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಕಿಡಿಗೇಡಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 5 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 5 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 9 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ