ಬೆಂಗಳೂರಿನಲ್ಲಿ ಯುವಕರ ಪುಂಡಾಟ! ಕಾರ್ಯನಿರತ ಪತ್ರಕರ್ತರ ಮೇಲೂ ಹಲ್ಲೆ! ಶಾಸಕರ ಮನೆ, ಪೋಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು!

ಬೆಂಗಳೂರು: ಬೆಂಗಳೂರಿನಲ್ಲಿ ಮನೆ ಮನೆಗೆ ನುಗ್ಗಿ ಮುಸ್ಲಿಂ ಯುವಕರು ದಾಂಧಲೆ ನಡೆಸುತ್ತಿದ್ದು, ಪರಿಸ್ಥಿತಿ ಕೈ ಮೀರಿ ಹೋಗಿದೆ.

ಶಾಸಕ ಅಖಂಡ ಶ್ರೀನಿವಾಸ್ ಶೆಟ್ಟಿ ಅವರ ಮನೆಗೆ ಬೆಂಕಿ ಹಚ್ಚಲಾಗಿದ್ದು, ಖಾಸಗಿ ವಾಹಿನಿಯ ವಾಹನ ಜಖಂ ಗೊಳಿಸಿ ವರದಿಗೆ ತೆರಳಿದ ಪತ್ರಕರ್ತರ ಮೇಲೆ ಹಲ್ಲೆ ಮಾಡಿ ಕ್ಯಾಮರಾ ಪುಡಿಗೈದು, ಮನೆ ಮನೆಗೆ ನುಗ್ಗಿ ಮುಸ್ಲಿಂ ಸಮುದಾಯದ ಯುವಕರು ಪುಂಡಾಟ ನಡೆಸಿದ್ದು, ಕಾವಲ ಬೈರಸಂದ್ರ ಹಾಗೂ ಕೆಜಿ ಹಳ್ಳಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಪ್ರವಾದಿ ಪೈಗಂಬರ್ ವಿರುದ್ದ ಫೇಸ್​ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ ಎಂದು ಆರೋಪಿಸಿ ಶಾಸಕ ಅಖಂಡ ಶ್ರೀನಿವಾಸರಾಜು ಅವರ ಮನೆ, ಕಚೇರಿಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಬೆಂಗಳೂರಿನ ಕಾಲವ್ ಬೈರಸಂದ್ರದಲ್ಲಿ ನಡೆದಿದೆ, ಹದಿನೈದಕ್ಕೆ ಹೆಚ್ಚು ಕಿಡಿಗೇಡಿಗಳಿಂದ ಶಾಸಕರ ಮನೆ ಮೇಲೆ ದಾಳಿ ನಡೆಸಲಾಗಿದೆ.

ಶಾಸಕ ಅಖಂಡ ಶ್ರೀನಿವಾಸರಾಜು ಅವರ ಸೋದರಳಿಯ ನವೀನ್ ಫೇಸ್​ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ ನೂರಾರು ಜನರು ನಗರದ ಕೆಜಿ ಹಳ್ಳಿ ಪೋಲೀಸ್ ಠಾಣೆ ಎದುರು ಜಮಾಯಿಸಿದ್ದು ನವೀನ್ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಪುಲಕೇಶಿನಗರದ ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು ಪರಿಸ್ಥಿತಿ ಉದ್ವಿಗ್ನವಾಗಿದೆ, ಸಧ್ಯ ಜನರನ್ನು ಸಮಾಧಾನಪಡಿಸಲು ಶಾಸಕ ಜಮೀರ್ ಅಹಮದ್ ಖಾನ್ ಸಹ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.

ಖಾತೆ ಹ್ಯಾಕ್‌?
ನನ್ನ ಫೇಸ್‌ಬುಕ್‌ ಖಾತೆ ಹ್ಯಾಕ್‌ ಆಗಿದೆ. ಯಾರೋ ದುಷ್ಕರ್ಮಿಗಳು ನನ್ನ ಖಾತೆ ಹ್ಯಾಕ್‌ ಮಾಡಿ ಕೆಟ್ಟ ಪೋಸ್ಟ್‌ ಹಾಕಿದ್ದಾರೆ. ದುಷ್ಕರ್ಮಿಗಳ ವಿರುದ್ಧ ನಾನು ದೂರು ದಾಖಲಿಸುತ್ತೇನೆ ಎಂದು ಶಾಸಕರ ಸಂಬಂಧಿ ನವೀನ್‌ ಪೋಸ್ಟ್‌ ಮಾಡಿದ್ದಾರೆ.

ಇನ್ನು ಪರಿಸ್ಥಿತಿ ನಿಯಂತ್ರಿಸಲು ಇದಾಗಲೇ ಪೊಲೀಸ್ ಠಾಣಾ ಆವರಣದಲ್ಲಿ ಕೆಎಸ್ ಆರ್ ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದ್ದು ಪೂರ್ವ ವಿಭಾಗದ ಎಲ್ಲಾ ಪೋಲೀಸ್ ಇನ್ಸ್​ಪೆಕ್ಟರ್​ ಹಾಗೂ ಸಿಬ್ಬಂದಿಗಳು ತಕ್ಷಣ ಕೆಜಿ ಹಳ್ಳಿ ಠಾಣೆಗೆ ಆಗಮಿಸಲು ಹಿರಿಯ ಪೋಲೀಸ್ ಅಧಿಕಾರಿಗಳು ಸೂಚಿಸಿದ್ದಾರೆ.

ಆರೋಪಿ ಬಂಧನ?
ಫೇಸ್‌ಬುಕ್‌ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಕಿಡಿಗೇಡಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

Spread the love
  • Related Posts

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    Manglore: ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ನಗರ ಜೆಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಕಂಕನಾಡಿ ನಗರ ಪೊಲೀಸರಿಗೆ…

    Spread the love

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಕನ್ಯಾಡಿ: ಇಂದು ಅಕ್ಷಯ ತೃತೀಯ – ಹೊಸ ಆರಂಭಗಳಿಗೆ, ಸಮೃದ್ಧಿಗೆ ನಾಂದಿ ಹಾಡುವ ಪವಿತ್ರ ದಿನ. ಈ ಶುಭ ಸಂದರ್ಭದಲ್ಲಿ ನಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಒಂದು ಮಹತ್ವದ ನಿರ್ಧಾರ ತೆಗೆದುಕೊಳ್ಳೋಣ. ಜ್ಞಾನದ ಅಕ್ಷಯ ಪಾತ್ರೆಯಂತಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ…

    Spread the love

    You Missed

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 32 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    • By admin
    • April 20, 2026
    • 28 views
    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    • By admin
    • April 20, 2026
    • 77 views
    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    • By admin
    • April 19, 2026
    • 37 views
    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು ಬಂಧನ

    • By admin
    • April 19, 2026
    • 147 views
    ಅಪ್ರಾಪ್ತ ಬಾಲಕಿ ಮೇಲೆ  ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು  ಬಂಧನ

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    • By admin
    • April 18, 2026
    • 226 views
    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”