ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್ ಪಂಥ್ ನೇಮಕಗೊಳ್ಳುವ ಸಾಧ್ಯತೆ!

ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ನೂತನ ಆಯುಕ್ತರಾಗಿ ಕಮಲ್ ಪಂಥ್ ರನ್ನು ನೇಮಕಗೊಳಿಸುವ ಸಾಧ್ಯತೆಯಿದೆ.

ನಾಳೆ ಈ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಲಿದೆ ಎನ್ನಲಾಗಿದೆ.

ಆಗಸ್ಟ್ 2 ಕ್ಕೆ ಭಾಸ್ಕರ್ ರಾವ್ ಅವರ ಒಂದು ವರ್ಷ ಅವಧಿ ಮುಗಿಯುವುದರಿಂದ ಕಮಲ್ ಪಂಥ್ ನೇಮಕ ಮಾಡುವ ಸಾಧ್ಯತೆ ಇದೆಯೆಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.

ಭಾಸ್ಕರ್ ರಾವ್ ಅವರ ಸ್ಥಾನಕ್ಕೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ರಾಜ್ಯ ಗುಪ್ತಚರ ಇಲಾಖೆಯ ಎಡಿಜಿಪಿ ಕಮಲ್ ಪಂಥ್ ನೇಮಕಗೊಳ್ಳುವ ಸಾಧ್ಯತೆ ಬಹುತೇಕ ಖಚಿತವಾಗಿದೆ. ಭಾಸ್ಕರ್ ರಾವ್ ಮತ್ತು ಕಮಲ್ ಪಂಥ್ 1990 ರ ಐಪಿಎಸ್ ಬ್ಯಾಚ್ ನವರಾಗಿದ್ದಾರೆ.

ನಗರ ಪೊಲೀಸ್ ಆಯುಕ್ತ ಹುದ್ದೆಗೆ ಮೂವರು ಅಧಿಕಾರಿಗಳು ಮುಂಚೂಣಿಯಲ್ಲಿದ್ದರು, ಪಂಥ್ ಅವರ ಜೊತೆಗೆ ಸುನೀಲ್ ಅಗರ್ ವಾಲ್ ಮತ್ತು ಅಮೃತ್ ಪೌಲ್ ಕೂಡ ಆಕಾಂಕ್ಷಿಗಳಾಗಿದ್ದರು. ಅಮೃತ್ ಪೌಲ್ ರವರನ್ನು ಇದೇ ವರ್ಷದ ಜನವರಿ ಅಂತ್ಯದಲ್ಲಿ ಎಡಿಜಿಪಿಯಾಗಿ ಬಡ್ತಿ ನೀಡಲಾಗಿತ್ತು. ಕಮಿಷನರ್ ಅವರ ಜೊತೆಗೆ ನಗರದ ಮತ್ತಷ್ಟು ಹಿರಿಯ ಅಧಿಕಾರಿಗಳ ವರ್ಗಾವಣೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಪಿ.ಎಸ್. ಸಂಧು (1989) ಆಗಸ್ಟ್ 1 ರಂದು ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ಬಡ್ತಿ ಪಡೆಯಲಿದ್ದಾರೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ಸಾಮೂಹಿಕ ವಿವಾಹ ಮೇ 03ರಂದು ಸಂಜೆ 6.48ಕ್ಕೆ ನಡೆಯುವ ಗೋದೊಳಿ ಲಗ್ನದಲ್ಲಿ ನಡೆಯಲಿದೆ. ವರನಿಗೆ ದೋತಿ ಶಾಲು ಮತ್ತು ವಧುವಿಗೆ ಸೀರೆ ರವಿಕೆಕಣ ಹಾಗೂ ಮಂಗಳ ಸೂತ್ರ ಹೂವಿನ ಹಾರ ನೀಡಲಾಗುವುದು ಎರಡನೆ ವಿವಾಹಕ್ಕೆ…

    Spread the love

    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    ಬೆಳ್ತಂಗಡಿ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕುಕ್ಕೆ ಸುಬ್ರಮಣ್ಯ ಮಠದ  ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು. ಬಳಿಕ ಆಶೀರ್ವಚನ ನೀಡುತ್ತಾ ಉಜಿರೆಯಂಥ ಸಣ್ಣ ಪ್ರದೇಶದಲ್ಲಿ ಕಳೆದ 25 ವರ್ಷಗಳಿಂದ ಅವಿರತ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    • By admin
    • January 14, 2025
    • 25 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ

    • By admin
    • January 14, 2025
    • 63 views
    ಬೆಳ್ತಂಗಡಿ ತಾಲೂಕಿನಾದ್ಯಂತ ಕಾಡಾನೆ ಸಂಚಾರ ಜನರಲ್ಲಿ ಮೂಡಿದ ಆತಂಕ

    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    • By admin
    • January 14, 2025
    • 22 views
    ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

    ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

    • By admin
    • January 12, 2025
    • 63 views
    ಉಜಿರೆಯಲ್ಲಿ ರಕ್ತದಾನ ಶಿಬಿರ ಉದ್ಘಾಟನೆ

    ಪೂಜಾ ರವರ ಚಿಕಿತ್ಸೆಗಾಗಿ ಬೇಕಾಗಿದೆ ಸಹೃದಯಿ ದಾನಿಗಳ ಸಹಕಾರ

    • By admin
    • January 12, 2025
    • 86 views
    ಪೂಜಾ ರವರ ಚಿಕಿತ್ಸೆಗಾಗಿ ಬೇಕಾಗಿದೆ ಸಹೃದಯಿ ದಾನಿಗಳ ಸಹಕಾರ

    ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಯವರಭೇಟಿ

    • By admin
    • January 11, 2025
    • 46 views
    ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಯವರಭೇಟಿ