‘ಬ್ಯಾಂಕಿಂಗ್’ ವಂಚನೆ ತಪ್ಪಿಸಲು ಗ್ರಾಹಕರಿಗೆ ಕೇಂದ್ರ ಸರಕಾರದಿಂದ ಮಹತ್ವದ ಸೂಚನೆ!

ನವದೆಹಲಿ: ಡಿಜಿಟಲ್ ವಹಿವಾಟು ಹೆಚ್ಚಾದಂತೆ ಬ್ಯಾಂಕಿಂಗ್ ವಂಚನೆ ಪ್ರಕರಣಗಳು ಸಹ ಏರಿಕೆಯಾಗುತ್ತಿವೆ. ವಂಚಕರು ವಿವಿಧ ರೀತಿಯಲ್ಲಿ ಬ್ಯಾಂಕ್ ಗ್ರಾಹಕರ ಖಾತೆಗಳ ಮಾಹಿತಿ ಪಡೆದು ಹಣ ಎಗರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ಯಾಂಕಿಂಗ್ ವಂಚನೆಗಳನ್ನು ತಡೆಗಟ್ಟುವ ಸಲುವಾಗಿ ಕೇಂದ್ರ ಗೃಹ ಸಚಿವಾಲಯದ ಮಾಹಿತಿ ಮತ್ತು ತಂತ್ರಜ್ಞಾನ ರಕ್ಷಣಾ ವಿಭಾಗದ ಟ್ವಿಟ್ಟರ್ ಖಾತೆ ‘ಸೈಬರ್ ದೋಸ್ತ್’ ಮೂಲಕ ಮಹತ್ವದ ಸೂಚನೆಯನ್ನು ನೀಡಲಾಗಿದೆ.

ಬ್ಯಾಂಕಿಂಗ್ ವಹಿವಾಟುಗಳಿಗಾಗಿ ಮಾಡಿಕೊಂಡಿರುವ ಇ ಮೇಲ್ ಖಾತೆ ಮೂಲಕ ಯಾವುದೇ ಕಾರಣಕ್ಕೂ ಸಾಮಾಜಿಕ ಜಾಲತಾಣಗಳ ಖಾತೆಯನ್ನು ತೆರೆಯದಂತೆ ತಿಳಿಸಲಾಗಿದ್ದು, ಜೊತೆಗೆ ಆಟೋ ಫಿಲ್ ಫಾರ್ಮ್ ಇರುವ ಬ್ರೌಸರ್ ಗಳಲ್ಲಿ ಡೆಬಿಟ್ / ಕ್ರೆಡಿಟ್ ಕಾರ್ಡ್ ಸಂಖ್ಯೆ, ಸಿವಿವಿ ಸಂಖ್ಯೆ, ಕಾರ್ಡ್ ಎಕ್ಸ್ಪೈರಿ ಡೇಟ್ ಮೊದಲಾದ ಮಾಹಿತಿಗಳನ್ನು ಬಳಸಬೇಡಿ ಎಂದು ಸೂಚಿಸಲಾಗಿದೆ.

ಬ್ಯಾಂಕ್ ಗ್ರಾಹಕರು ಎರಡು ಇ ಮೇಲ್ ಖಾತೆಗಳನ್ನು ಹೊಂದುವುದು ಸೂಕ್ತ ಎಂದು ಸೈಬರ್ ದೋಸ್ತ್ ತಿಳಿಸಿದ್ದು, ಒಂದನ್ನು ದೈನಂದಿನ ಕಾರ್ಯಗಳಿಗೆ ಬಳಸಿದರೆ ಮತ್ತೊಂದು ಇ ಮೇಲ್ ಖಾತೆಯನ್ನು ಬ್ಯಾಂಕಿಂಗ್ ವಹಿವಾಟುಗಳಿಗೆ ಮಾತ್ರ ಬಳಸಬೇಕೆಂದು ತಿಳಿಸಲಾಗಿದೆ. ಬ್ಯಾಂಕಿಂಗ್ ವಹಿವಾಟಿಗೆ ಮಾಡಿಕೊಂಡಿರುವ ಇ-ಮೇಲ್, ಅನಿವಾರ್ಯ ಸಂದರ್ಭಗಳಲ್ಲಿ ಬಳಸಬೇಕಾಗಿ ಬಂದರೆ ನಂಬಿಕಾರ್ಹ ವ್ಯಕ್ತಿಗಳೊಂದಿಗೆ ಮಾತ್ರ ಸಂವಹನ ನಡೆಸಿ ಎಂದು ತಿಳಿಸಲಾಗಿದೆ.

ವಂಚಕರು ಬ್ಯಾಂಕಿಂಗ್ ಸಂಸ್ಥೆಗಳ ಇ-ಮೇಲ್ ಖಾತೆಯನ್ನೇ ಹೋಲುವಂತೆ ಖಾತೆಗಳನ್ನು ರಚಿಸಿ ಗ್ರಾಹಕರಿಗೆ ಮಹತ್ವದ ಮಾಹಿತಿಗಳನ್ನು ಹಂಚಿಕೊಳ್ಳುವಂತೆ ಕೇಳಿದ ವೇಳೆ ಯಾವುದೇ ಕಾರಣಕ್ಕೂ ಇವುಗಳ ವಿವರವನ್ನು ನೀಡಬೇಡಿ ಎಂದು ಸೈಬರ್ ದೋಸ್ತ್, ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದೆ.

Spread the love
  • Related Posts

    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    ಕನ್ಯಾಡಿ : ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾಗಿರುವ ಶ್ರೀ ಕ್ಯಾಪ್ಟನ್ ಬ್ರಿಜೇಶ್ ಚೌಟ ತಂಡವು ಕನ್ಯಾಡಿಯ ಸೇವಾನಿಕೇತನಕ್ಕೆ ಫೆಬ್ರವರಿ 8 ರಂದು ಭೇಟಿ ನೀಡಿದರು. ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಸಂಸ್ಥೆಯ ಬಗ್ಗೆ ಮಾತನಾಡಿ, ಬೆನ್ನುಹುರಿ…

    Spread the love

    ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ

    ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಹಾಗೂ ಮಾತೃ ಶ್ರೀ ಹೇಮಾವತಿ.ವಿ.ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಶ್ರೀ.ಧ.ಮಂ.ಕಾಲೇಜು(ಸ್ವಾಯತ್ತ) ಉಜಿರೆ, ಶ್ರೀ.ಧ.ಮಂ.ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು, ಶ್ರೀ.ಧ.ಮಂ.ಸ್ಪೋರ್ಟ್ಸ್ ಕ್ಲಬ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ(ರಿ) ಬೆಳ್ತಂಗಡಿ, ವ್ಯವಸ್ಥಾಪನಾ ಸಮಿತಿ…

    Spread the love

    You Missed

    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    • By admin
    • February 9, 2025
    • 16 views
    ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ:

    ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ

    • By admin
    • February 9, 2025
    • 15 views
    ಯುವ ಸಿರಿ ರೈತ ಭಾರತದ ಐಸಿರಿ ಎಂಬ ಪರಿಕಲ್ಪನೆಯೊಂದಿಗೆ ಏಕಕಾಲದಲ್ಲಿ 1000ಕ್ಕೂ ಮಿಕ್ಕಿ ಯುವ ಜನತೆಯಿಂದ ಭತ್ತ ಕಟಾವು ಕಾರ್ಯಕ್ರಮ

    ರಾಷ್ಟ್ರಮಟ್ಟದ ರಸ್ತೆ ಸುರಕ್ಷತಾ ಕಾರ್ಟೂನ್ ಸ್ಪರ್ಧೆಯಲ್ಲಿ ವಿಶೇಷ ಬಹುಮಾನ ಪಡೆದ ಶೈಲೇಶ್ ಉಜಿರೆ

    • By admin
    • February 7, 2025
    • 46 views
    ರಾಷ್ಟ್ರಮಟ್ಟದ ರಸ್ತೆ ಸುರಕ್ಷತಾ ಕಾರ್ಟೂನ್ ಸ್ಪರ್ಧೆಯಲ್ಲಿ ವಿಶೇಷ ಬಹುಮಾನ ಪಡೆದ ಶೈಲೇಶ್ ಉಜಿರೆ

    ಮೈಕ್ರೋ ಫೈನಾನ್ಸ್ ವಿರುದ್ಧದ ಸುಗ್ರೀವಾಜ್ಞೆಗಿಲ್ಲ ರಾಜ್ಯಪಾಲರ ಅಂಕಿತ

    • By admin
    • February 7, 2025
    • 35 views
    ಮೈಕ್ರೋ ಫೈನಾನ್ಸ್ ವಿರುದ್ಧದ ಸುಗ್ರೀವಾಜ್ಞೆಗಿಲ್ಲ ರಾಜ್ಯಪಾಲರ ಅಂಕಿತ

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮ ಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಶಿಶಿಲದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

    • By admin
    • February 2, 2025
    • 85 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮ ಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಶಿಶಿಲದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

    ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ ಸಹಕಾರ ಭಾರತೀಯ ಅಭ್ಯರ್ಥಿಗಳ ಪ್ರಚಂಡ ಗೆಲುವು

    • By admin
    • February 2, 2025
    • 276 views
    ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ   ಸಹಕಾರ ಭಾರತೀಯ ಅಭ್ಯರ್ಥಿಗಳ ಪ್ರಚಂಡ ಗೆಲುವು