‘ಬ್ಯಾಂಕಿಂಗ್’ ವಂಚನೆ ತಪ್ಪಿಸಲು ಗ್ರಾಹಕರಿಗೆ ಕೇಂದ್ರ ಸರಕಾರದಿಂದ ಮಹತ್ವದ ಸೂಚನೆ!

ನವದೆಹಲಿ: ಡಿಜಿಟಲ್ ವಹಿವಾಟು ಹೆಚ್ಚಾದಂತೆ ಬ್ಯಾಂಕಿಂಗ್ ವಂಚನೆ ಪ್ರಕರಣಗಳು ಸಹ ಏರಿಕೆಯಾಗುತ್ತಿವೆ. ವಂಚಕರು ವಿವಿಧ ರೀತಿಯಲ್ಲಿ ಬ್ಯಾಂಕ್ ಗ್ರಾಹಕರ ಖಾತೆಗಳ ಮಾಹಿತಿ ಪಡೆದು ಹಣ ಎಗರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ಯಾಂಕಿಂಗ್ ವಂಚನೆಗಳನ್ನು ತಡೆಗಟ್ಟುವ ಸಲುವಾಗಿ ಕೇಂದ್ರ ಗೃಹ ಸಚಿವಾಲಯದ ಮಾಹಿತಿ ಮತ್ತು ತಂತ್ರಜ್ಞಾನ ರಕ್ಷಣಾ ವಿಭಾಗದ ಟ್ವಿಟ್ಟರ್ ಖಾತೆ ‘ಸೈಬರ್ ದೋಸ್ತ್’ ಮೂಲಕ ಮಹತ್ವದ ಸೂಚನೆಯನ್ನು ನೀಡಲಾಗಿದೆ.

ಬ್ಯಾಂಕಿಂಗ್ ವಹಿವಾಟುಗಳಿಗಾಗಿ ಮಾಡಿಕೊಂಡಿರುವ ಇ ಮೇಲ್ ಖಾತೆ ಮೂಲಕ ಯಾವುದೇ ಕಾರಣಕ್ಕೂ ಸಾಮಾಜಿಕ ಜಾಲತಾಣಗಳ ಖಾತೆಯನ್ನು ತೆರೆಯದಂತೆ ತಿಳಿಸಲಾಗಿದ್ದು, ಜೊತೆಗೆ ಆಟೋ ಫಿಲ್ ಫಾರ್ಮ್ ಇರುವ ಬ್ರೌಸರ್ ಗಳಲ್ಲಿ ಡೆಬಿಟ್ / ಕ್ರೆಡಿಟ್ ಕಾರ್ಡ್ ಸಂಖ್ಯೆ, ಸಿವಿವಿ ಸಂಖ್ಯೆ, ಕಾರ್ಡ್ ಎಕ್ಸ್ಪೈರಿ ಡೇಟ್ ಮೊದಲಾದ ಮಾಹಿತಿಗಳನ್ನು ಬಳಸಬೇಡಿ ಎಂದು ಸೂಚಿಸಲಾಗಿದೆ.

ಬ್ಯಾಂಕ್ ಗ್ರಾಹಕರು ಎರಡು ಇ ಮೇಲ್ ಖಾತೆಗಳನ್ನು ಹೊಂದುವುದು ಸೂಕ್ತ ಎಂದು ಸೈಬರ್ ದೋಸ್ತ್ ತಿಳಿಸಿದ್ದು, ಒಂದನ್ನು ದೈನಂದಿನ ಕಾರ್ಯಗಳಿಗೆ ಬಳಸಿದರೆ ಮತ್ತೊಂದು ಇ ಮೇಲ್ ಖಾತೆಯನ್ನು ಬ್ಯಾಂಕಿಂಗ್ ವಹಿವಾಟುಗಳಿಗೆ ಮಾತ್ರ ಬಳಸಬೇಕೆಂದು ತಿಳಿಸಲಾಗಿದೆ. ಬ್ಯಾಂಕಿಂಗ್ ವಹಿವಾಟಿಗೆ ಮಾಡಿಕೊಂಡಿರುವ ಇ-ಮೇಲ್, ಅನಿವಾರ್ಯ ಸಂದರ್ಭಗಳಲ್ಲಿ ಬಳಸಬೇಕಾಗಿ ಬಂದರೆ ನಂಬಿಕಾರ್ಹ ವ್ಯಕ್ತಿಗಳೊಂದಿಗೆ ಮಾತ್ರ ಸಂವಹನ ನಡೆಸಿ ಎಂದು ತಿಳಿಸಲಾಗಿದೆ.

ವಂಚಕರು ಬ್ಯಾಂಕಿಂಗ್ ಸಂಸ್ಥೆಗಳ ಇ-ಮೇಲ್ ಖಾತೆಯನ್ನೇ ಹೋಲುವಂತೆ ಖಾತೆಗಳನ್ನು ರಚಿಸಿ ಗ್ರಾಹಕರಿಗೆ ಮಹತ್ವದ ಮಾಹಿತಿಗಳನ್ನು ಹಂಚಿಕೊಳ್ಳುವಂತೆ ಕೇಳಿದ ವೇಳೆ ಯಾವುದೇ ಕಾರಣಕ್ಕೂ ಇವುಗಳ ವಿವರವನ್ನು ನೀಡಬೇಡಿ ಎಂದು ಸೈಬರ್ ದೋಸ್ತ್, ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದೆ.

Spread the love
  • Related Posts

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    ಬಂಗಾಡಿ, ಆ.7: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 29, 2026ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು…

    Spread the love

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    🖊️• ವರದಿ: ರಾಜೇಶ್ ಎಂ ಕಾನರ್ಪ ಬೆಳ್ತಂಗಡಿಯ ಶೈಕ್ಷಣಿಕ ಘನತೆಗೆ ಕಪ್ಪುಚುಕ್ಕೆಯಾಗುತ್ತಿರುವ ಮಾದಕ ದ್ರವ್ಯ ಜಾಲ: ಈಗಲೇ ಎಚ್ಚೆತ್ತುಕೊಳ್ಳಬೇಕಾದ ಸಮಯ ಒಂದು ಕಾಲದಲ್ಲಿ ಶಿಕ್ಷಣ, ಸಂಸ್ಕಾರ ಮತ್ತು ಶಾಂತಿಯ ನೆಲವೆಂದು ಗುರುತಿಸಿಕೊಂಡಿದ್ದ ಬೆಳ್ತಂಗಡಿ ತಾಲೂಕು ಇಂದು ರಾಜ್ಯದ ಶೈಕ್ಷಣಿಕ ನಕ್ಷೆಯಲ್ಲಿ ತನ್ನದೇ…

    Spread the love

    You Missed

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 3 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 9 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 5 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 7 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    • By admin
    • August 6, 2026
    • 5 views
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 6 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ