‘ಬ್ಯಾಂಕಿಂಗ್’ ವಂಚನೆ ತಪ್ಪಿಸಲು ಗ್ರಾಹಕರಿಗೆ ಕೇಂದ್ರ ಸರಕಾರದಿಂದ ಮಹತ್ವದ ಸೂಚನೆ!

ನವದೆಹಲಿ: ಡಿಜಿಟಲ್ ವಹಿವಾಟು ಹೆಚ್ಚಾದಂತೆ ಬ್ಯಾಂಕಿಂಗ್ ವಂಚನೆ ಪ್ರಕರಣಗಳು ಸಹ ಏರಿಕೆಯಾಗುತ್ತಿವೆ. ವಂಚಕರು ವಿವಿಧ ರೀತಿಯಲ್ಲಿ ಬ್ಯಾಂಕ್ ಗ್ರಾಹಕರ ಖಾತೆಗಳ ಮಾಹಿತಿ ಪಡೆದು ಹಣ ಎಗರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ಯಾಂಕಿಂಗ್ ವಂಚನೆಗಳನ್ನು ತಡೆಗಟ್ಟುವ ಸಲುವಾಗಿ ಕೇಂದ್ರ ಗೃಹ ಸಚಿವಾಲಯದ ಮಾಹಿತಿ ಮತ್ತು ತಂತ್ರಜ್ಞಾನ ರಕ್ಷಣಾ ವಿಭಾಗದ ಟ್ವಿಟ್ಟರ್ ಖಾತೆ ‘ಸೈಬರ್ ದೋಸ್ತ್’ ಮೂಲಕ ಮಹತ್ವದ ಸೂಚನೆಯನ್ನು ನೀಡಲಾಗಿದೆ.

ಬ್ಯಾಂಕಿಂಗ್ ವಹಿವಾಟುಗಳಿಗಾಗಿ ಮಾಡಿಕೊಂಡಿರುವ ಇ ಮೇಲ್ ಖಾತೆ ಮೂಲಕ ಯಾವುದೇ ಕಾರಣಕ್ಕೂ ಸಾಮಾಜಿಕ ಜಾಲತಾಣಗಳ ಖಾತೆಯನ್ನು ತೆರೆಯದಂತೆ ತಿಳಿಸಲಾಗಿದ್ದು, ಜೊತೆಗೆ ಆಟೋ ಫಿಲ್ ಫಾರ್ಮ್ ಇರುವ ಬ್ರೌಸರ್ ಗಳಲ್ಲಿ ಡೆಬಿಟ್ / ಕ್ರೆಡಿಟ್ ಕಾರ್ಡ್ ಸಂಖ್ಯೆ, ಸಿವಿವಿ ಸಂಖ್ಯೆ, ಕಾರ್ಡ್ ಎಕ್ಸ್ಪೈರಿ ಡೇಟ್ ಮೊದಲಾದ ಮಾಹಿತಿಗಳನ್ನು ಬಳಸಬೇಡಿ ಎಂದು ಸೂಚಿಸಲಾಗಿದೆ.

ಬ್ಯಾಂಕ್ ಗ್ರಾಹಕರು ಎರಡು ಇ ಮೇಲ್ ಖಾತೆಗಳನ್ನು ಹೊಂದುವುದು ಸೂಕ್ತ ಎಂದು ಸೈಬರ್ ದೋಸ್ತ್ ತಿಳಿಸಿದ್ದು, ಒಂದನ್ನು ದೈನಂದಿನ ಕಾರ್ಯಗಳಿಗೆ ಬಳಸಿದರೆ ಮತ್ತೊಂದು ಇ ಮೇಲ್ ಖಾತೆಯನ್ನು ಬ್ಯಾಂಕಿಂಗ್ ವಹಿವಾಟುಗಳಿಗೆ ಮಾತ್ರ ಬಳಸಬೇಕೆಂದು ತಿಳಿಸಲಾಗಿದೆ. ಬ್ಯಾಂಕಿಂಗ್ ವಹಿವಾಟಿಗೆ ಮಾಡಿಕೊಂಡಿರುವ ಇ-ಮೇಲ್, ಅನಿವಾರ್ಯ ಸಂದರ್ಭಗಳಲ್ಲಿ ಬಳಸಬೇಕಾಗಿ ಬಂದರೆ ನಂಬಿಕಾರ್ಹ ವ್ಯಕ್ತಿಗಳೊಂದಿಗೆ ಮಾತ್ರ ಸಂವಹನ ನಡೆಸಿ ಎಂದು ತಿಳಿಸಲಾಗಿದೆ.

ವಂಚಕರು ಬ್ಯಾಂಕಿಂಗ್ ಸಂಸ್ಥೆಗಳ ಇ-ಮೇಲ್ ಖಾತೆಯನ್ನೇ ಹೋಲುವಂತೆ ಖಾತೆಗಳನ್ನು ರಚಿಸಿ ಗ್ರಾಹಕರಿಗೆ ಮಹತ್ವದ ಮಾಹಿತಿಗಳನ್ನು ಹಂಚಿಕೊಳ್ಳುವಂತೆ ಕೇಳಿದ ವೇಳೆ ಯಾವುದೇ ಕಾರಣಕ್ಕೂ ಇವುಗಳ ವಿವರವನ್ನು ನೀಡಬೇಡಿ ಎಂದು ಸೈಬರ್ ದೋಸ್ತ್, ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದೆ.

Spread the love
  • Related Posts

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    ಬೆಳ್ತಂಗಡಿ: ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರ, ಕೃಷಿ ಪರಂಪರೆ ಹಾಗೂ ಗ್ರಾಮೀಣ ಬದುಕಿನ ವೈಶಿಷ್ಟ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್…

    Spread the love

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಬೆಳ್ತಂಗಡಿ: ಆಧುನಿಕತೆಯ ಆಡಂಬರವಿಲ್ಲ… ಮೊಬೈಲ್ ನೆಟ್‌ವರ್ಕ್ ಇಲ್ಲ… ಸುಗಮ ಸಂಚಾರಕ್ಕೆ ಉತ್ತಮ ರಸ್ತೆಗಳಿಲ್ಲ. ಆದರೆ ಎದೆಯಾಳದಲ್ಲಿ ಅಖಂಡ ದೇಶಪ್ರೇಮವಿದೆ! ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ದುರ್ಗಮ ಮಲೆನಾಡಿನ ಕಾನನದ ನಡುವೆ ಇರುವ ಪುಟ್ಟ ಹಳ್ಳಿ ಬಾಂಜಾರುಮಲೆ. ಮತದಾನದಲ್ಲಿ…

    Spread the love

    You Missed

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    • By admin
    • August 23, 2026
    • 4 views
    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    • By admin
    • August 20, 2026
    • 7 views
    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    • By admin
    • August 20, 2026
    • 13 views
    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 10 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 13 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 27 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ